ಚಿಟಗುಪ್ಪದಲ್ಲಿ ನಿಲ್ಲದ ಕೋವಿಡ್

ಮೂವರ ಬಲಿ ನಿನ್ನೆ ಏಳು ಜನರಲ್ಲಿ ಸೋಂಕು ಪತ್ತೆ

Team Udayavani, Jun 1, 2020, 12:39 PM IST

01-June-07

ಹುಮನಾಬಾದ: ಚಿಟಗುಪ್ಪ ತಾಲೂಕಿನಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದ್ದು, ಈ ವರೆಗೆ ಮೂರು ಜನರ ಬಲಿ ಪಡೆದಿದೆ. ರವಿವಾರ ಒಂದೇ ದಿನ ಒಟ್ಟು 7 ಜನರಲ್ಲಿ ಕೋವಿಡ್‌ ಸೋಂಕಿರುವುದು ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿದ 75 ವರ್ಷದ ವ್ಯಕ್ತಿಗೂ ಹಾಗೂ ಆತನ ಕುಟುಂಬದ ನಾಲ್ಕು ಜನರಲ್ಲಿ ಸೋಂಕಿರುವುದು ದೃಢಪಟ್ಟಿದೆ.

ಚಿಟಗುಪ್ಪ ಪಟ್ಟಣದ ಇಬ್ಬರು ಹಾಗೂ ಪುರಸಭೆ ವ್ಯಾಪ್ತಿಯ ಫಾತ್ಮಾಪುರದ ಒಬ್ಬ ಮಹಿಳೆ ಸೋಂಕು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ಮೂವರು ಮೃತಪಟ್ಟ ನಂತರವೇ ಪಾಸಿಟಿವ್‌ ಪತ್ತೆಯಾಗಿರುವುದು ವಿಶೇಷ. ರವಿವಾರದ ವರದಿ ಪ್ರಕಾರ, ಚಿಟಗುಪ್ಪ ಪಟ್ಟಣದ ಕಂಟೇನ್ಮೆಂಟ್‌ ಝೋನ್‌ನಲ್ಲಿನ 75 ವರ್ಷದ ವ್ಯಕ್ತಿ ರಕ್ತದೊತ್ತಡ, ಜ್ವರ ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮೇ 29ರಂದು ಚಿಟಗುಪ್ಪ ಪಟ್ಟಣದ ಮನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಮೃತ ವ್ಯಕ್ತಿ ಗಂಟಲು ದ್ರವ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಿದ್ದು, ರವಿವಾರ ಪಾಸಿಟಿವ್‌ (ಪಿ-2965) ಎಂದು ಗುರುತಿಸಲಾಗಿದೆ.

ಸದ್ಯ ಆರೋಗ್ಯ ಅಧಿಕಾರಿಗಳು ಮೃತ ವ್ಯಕ್ತಿಯ ಸಂಪರ್ಕದವರ ಪತ್ತೆಗೆ ಮುಂದಾಗಿದ್ದಾರೆ. ಮೃತ ವ್ಯಕ್ತಿ ಪತ್ನಿ, ಮಗ ಸೊಸೆ ಹಾಗೂ ಮೊಮ್ಮಗಳಿಗೆ ಸೋಂಕು ಇರುವುದು ಪತ್ತೆಯಾಗಿದೆ. ಅವರ ಮನೆ ಪಕ್ಕದಲ್ಲಿನ 60 ವರ್ಷದ ಮಹಿಳೆ ಹಾಗೂ ಪಟ್ಟಣದ ಬೇರೆ ಬಡಾವಣೆಯ 40 ವರ್ಷದ ಶಿಕ್ಷಣ ಇಲಾಖೆ ಸಿಬ್ಬಂದಿಗೂ ಪಾಸಿಟಿವ್‌ ಬಂದಿದೆ. ಆದರೆ, ಯಾರ ಸಂಪರ್ಕದಿಂದ ಬಂದಿದೆ ಎಂಬುವುದು ತಿಳಿದುಬಂದಿಲ್ಲ. ಈ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಡಾ| ವೀರನಾಥ ಕನಕ ನೇತೃತ್ವದಲ್ಲಿ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕದ ವ್ಯಕ್ತಿಗಳ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಈ ವರೆಗೆ ತಹಶೀಲ್ದಾರ್‌ ಜೀಯಾವುದ್ದಿನ್‌ ನೇತೃತ್ವದಲ್ಲಿ 28 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಅಲ್ಲದೆ, ಬಡಾವಣೆಗಳನ್ನು ಸೀಲ್‌ ಡೌನ್‌ ಮಾಡಲಾಗಿದ್ದು, ಎಲ್ಲ ರಸ್ತೆಗಳನ್ನು ಬಂದ್‌ ಮಾಡಿ ಜನರ ಸಂಚಾರ ನಿಷೇಧಿಸಲಾಗಿದೆ.

ಪಾಸಿಟಿವ್‌ ಪತ್ತೆಯಾದ ಬಡಾವಣೆಗಳಿಗೆ ಚಿಟಗುಪ್ಪ ತಹಶೀಲ್ದಾರ್‌ ಮಹಮದ್‌ ಜೀಯಾವುದ್ದಿನ್‌, ಕೋವಿಡ್‌ ಉಸ್ತುವಾರಿ ಅಧಿಕಾರಿ ಡಾ| ಗೋವಿಂದ, ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ ರಾಜಪುರೋಹಿತ, ತಾಲೂಕು ವೈದ್ಯಾಧಿಕಾರಿ ಅಶೋಕ ಮೈಲಾರೆ, ಡಾ| ವೀರನಾಥ ಕನಕ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.