ಬದುಕಿಗೆ ಜ್ಞಾನದಷ್ಟೇ ಮಾನವೀಯತೆ ಮುಖ್ಯ
Team Udayavani, Jan 28, 2019, 12:01 PM IST
ಸುರಪುರ: ಶಿಕ್ಷಣ ಸಂಸ್ಥೆಗಳು ಕೇವಲ ಅಕ್ಷರ ಜ್ಞಾನಕ್ಕೆ ಸೀಮಿತವಾಗಬಾರದು. ಪಠ್ಯಶಿಕ್ಷಣದೊಂದಿಗೆ ಉತ್ತಮ ನಾಗರಕರನ್ನಾಗಿ ಮಾಡುವ ಮೂಲಕ ಅವರಲ್ಲಿ ವ್ಯಕ್ತಿತ್ವ ರೂಪಿಸುವ ಶ್ರದ್ಧಾ ಕೇಂದ್ರಗಳಾಗಬೇಕು ಎಂದು ಗೋಗಿ ಸಜ್ಜಾದ್ ಎ ನೀಸೀನ್ ಸೈಯ್ಯದ್ ಶಾ ಮಹ್ಮದ್ ಉಲ್ ಹುಸೇನಿ ಹೇಳಿದರು.
ರಂಗಂಪೇಟೆ ಸುದೀಪ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಶಸ್ತಿ ಪದವಿ ಪಡೆದ ನಾವೆಲ್ಲ ವಿದ್ಯಾವಂತರು. ಆದರೆ ಬುದ್ದಿವಂತರಲ್ಲ. ಅಕ್ಷರಸ್ಥರಾಗಿದ್ದೇವೆ ವಿನಃ ವಿಚಾರವಂತ್ತರಾಗುತ್ತಿಲ್ಲ. ಬದುಕಿಗೆ ಜ್ಞಾನ ಎಷ್ಟು ಮುಖ್ಯವೋ ಮಾನವೀಯತೆಯೂ ಅಷ್ಟೆ ಮುಖ್ಯವಾಗಿದೆ. ಹೀಗಾಗಿ ಶಿಕ್ಷಕರು ಶಿಕ್ಷಣದ ಜತೆಗೆ ಮಕ್ಕಳಲ್ಲಿ ನೈತಿಕ ಮೌಲ್ಯ ಕಲಿಸಿಕೊಡಬೇಕು. ಇದರಿಂದ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಸಲಹೆ ನೀಡಿದರು.
ಮಕ್ಕಳಿಗೆ ಸಂಸ್ಕಾರ ಮುಖ್ಯ. ಸಂಸ್ಕಾರಯುತ ಮಕ್ಕಳು ಮಾತ್ರ ಉತ್ತಮ ನಾಗರಿಕರಾಗಬಲ್ಲರು. ಇದಕ್ಕೆ ಸಾಕಷ್ಟು ಉದಾಹರಣೆ ನಮ್ಮ ಕಣ್ಮುಂದೆ ಇವೆ. ಸಂಸ್ಕಾರ ಇಲ್ಲದ ಕಾರಣ ಎಷ್ಟೋ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಕೊಲೆಗಡುಕರು, ಕಳ್ಳರು, ವಿದ್ವಂಸಕರು, ಅಪರಾಧಿಗಳಾಗುತ್ತಿದ್ದಾರೆ. ಕಾರಣ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ ಮೌಲ್ಯಗಳನ್ನು ಕಲಿಸಿಕೊಡುವುದು ಅಗತ್ಯವಾಗಿದೆ ಎಂದು ಹೇಳಿದರು. ಹೋರಟಗಾರ ವೆಂಕೋಬ ದೊರೆ ಮಾತನಾಡಿ, ಪ್ರಾಥಮಿಕ ಶಿಕ್ಷಣ ಬದುಕಿನ ಅಮೂಲ್ಯ ಘಟ್ಟ ಪ್ರಾಥಮಿಕ ಶಿಕ್ಷಣದೊಂದಿಗೆ ಅನೇಕ ಕಾರ್ಯಕ್ರಮ ಏರ್ಪಡಿಸಿ ಮಕ್ಕಳಲ್ಲಿ ನೈತಿಕ ಮೌಲ್ಯ ಬೆಳೆಸುತ್ತಿರುವ ಸಂಸ್ಥೆ ಕಾರ್ಯ ಶ್ಲಾಘನೀಯವಾಗಿದೆ ಎಂದು ಸ್ಮರಿಸಿದರು.
ಇದೇ ವೇಳೆ ರಾಜ್ಯ, ಜಿಲ್ಲಾಹಾಗೂ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆ 8ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಾಜಾ ಸಂತೋಷ ನಾಯಕ ಉದ್ಘಾಟಿಸಿದರು. ಸಂಸ್ಥೆ ಅಧ್ಯಕ್ಷ ಸಾಯಿಬಣ್ಣ ಪುರ್ಲೆ ಅಧ್ಯಕ್ಷತೆ ವಹಿಸಿದ್ದರು. ವೆಂಕಟೇಶ ಭಕ್ರಿ, ಶಮಾ ಅಂಜುಮ್, ಜ್ಯೋತಿ, ವಿಜಯಲಕ್ಷ್ಮಿ, ಪದ್ಮಾಕ್ಷಿ ಶಹಾಪುರಕರ್,ಮಹ್ಮದ್ ಸರಫರಾಜ, ಅರಶಿಯಾ ಇದ್ದರು. ಗೋಣೇಸ ನಂಬಾ ಸ್ವಾಗತಿಸಿದರು. ಎಂ.ಕೆ. ಬಾಬೂ ನಿರೂಪಿಸಿದರು. ಜೋಹರಾ ರುಬಿನ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?