ಭರವಸೆ ಈಡೇರಿಸಿದ ತೃಪ್ತಿ ನನಗಿದೆ
Team Udayavani, Mar 12, 2018, 5:41 PM IST
ಶಹಾಪುರ: ಆಯಾ ಪಟ್ಟಣಗಳು ಎಷ್ಟರಮಟ್ಟಿಗೆ ಅಭಿವೃದ್ಧಿ ಹೊಂದಿವೆ ಎಂಬುದನ್ನು ಅಳೆಯಲು ಆ ಕ್ಷೇತ್ರ ಪ್ರವೇಶಿಸುವ ರಸ್ತೆಗಳಿಂದಲೇ ತಿಳಿಯಬಹುದು ಎಂದು ಶಾಸಕ ಗುರು ಪಾಟೀಲ್ ಶಿರವಾಳ ಹೇಳಿದರು.
ತಾಲೂಕಿನ ಮಡ್ನಾಳ ಗ್ರಾಮದಲ್ಲಿ ಮಡ್ನಾಳದಿಂದ ಇಂಗಳಿಗಿ ಗ್ರಾಮದವರೆಗೆ 2 ಕೋಟಿ 47 ಲಕ್ಷ ರೂ. ವೆಚ್ಚದ ಡಾಂಬರೀಕರಣ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಎಚ್ಕೆಆರ್ಡಿಬಿ 2017-18
ಯೋಜನೆಯಡಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಪಡೆಯಲಾಗಿದೆ. ಅದರಲ್ಲಿ ಈ ಯೋಜನೆಯೊಂದಾಗಿದೆ.
ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ಮೇಲೆ ನಾಗರಿಕರಿಗೆ ನೀಡಿದ ಭರವಸೆಯಂತೆ ಕ್ಷೇತ್ರದಲ್ಲಿ
ಸಮರ್ಪಕವಾಗಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಶೇ. 90ರಷ್ಟು ಒದಗಿಸುವಲ್ಲಿ ಸಫಲನಾಗಿದ್ದೇನೆ.
ಉಳಿದಡೆ ಒಂದಿಷ್ಟು ಬಾಕಿ ಕೆಲಸಗಳು ಇರಬಹುದು. ಆದರೆ ಪ್ರತಿ ಹಳ್ಳಿಯಲ್ಲಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ
ಇತರೆ ಮೂಲ ಸೌಲಭ್ಯಗಳನ್ನು ಒದಗಿಸಿದ್ದೇನೆ. ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಜನರ ಕಾಳಜಿಯು ಅಗತ್ಯವಿದೆ. ಕಾಮಗಾರಿ ಜವಾಬ್ದಾರಿ ಹೊತ್ತ ಗುತ್ತಿಗೆದಾರರು ಮತ್ತು ಸಂಬಂಧಿ ಸಿದ ಇಲಾಖೆ ಅಧಿಕಾರಿಗಳು ಸಹ ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಅಮಾತೆಪ್ಪ ಕಂದಕೂರ, ಚನ್ನಪ್ಪಗೌಡ ಪಾಟೀಲ್, ಸಾಯಬಣ್ಣ ಸಿರನೇತಿ,
ಸಿದ್ದು ಮಡ್ನಾಳ, ಬಸವರಾಜಪ್ಪಗೌಡ ಕಂದಕೂರ, ಮೈಲಾರಪ್ಪ ಕಂದಕೂರ, ಶರಣಗೌಡ ಪಾಟೀಲ್, ಮಾರ್ತಾಂಡಪ್ಪ ಕಂದಕೂರ, ಗ್ರಾಪಂ ಸದಸ್ಯ ಶಿವಪ್ಪ ಮತ್ತು ಮಾಜಿ ಗ್ರಾಪಂ ಸದಸ್ಯರಾದ ಶಂಕ್ರಪ್ಪ, ಅಂಬಲಪ್ಪ, ಮಲ್ಲಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ