ಅಧಿಕಾರಿಗಳ ನಿರ್ಲಕ್ಷ್ಯ: ಶೌಚಾಲಯ ಕಟ್ಟಡ ಕಾಮಗಾರಿ ಸ್ಥಗಿತ
Team Udayavani, Jul 7, 2017, 12:27 PM IST
ಕಕ್ಕೇರಾ: ಪಟ್ಟಣದ ನಾಲ್ಕು, ಐದನೇ ವಾರ್ಡ್ ಗೆ ಸಂಬಂಧಿಸಿದ ಹೈಟೆಕ್ ಶೌಚಾಲಯ ಕಟ್ಟಡ ಕಾಮಗಾರಿ ಎರಡೂ ವರ್ಷದಿಂದ ಸ್ಥಗಿತಗೊಂಡು ಅವ್ಯವಸ್ಥೆ ಆಗಾರವಾಗಿದೆ.
ಮಹಿಳೆಯರಿಗೆ ಶೌಚಾಲಯ ಸಮಸ್ಯೆ ತಪ್ಪಿಸಲು 2014-15ನೇ ಸಾಲಿನಲ್ಲಿ ಅಂದಿನ ಗ್ರಾಪಂ (ಸದ್ಯ ಪುರಸಭೆ)ಆಡಳಿತದಲ್ಲಿ
ಸುಮಾರು 7.50 ಲಕ್ಷ ರೂ. ವೆಚ್ಚದಲ್ಲಿ ಹೈಟೆಕ್ ಶೌಚಾಲಯ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದರು. ಆದರೆ ಎರಡೂ ವರ್ಷ ಕಳೆದರೂ ಶೌಚಾಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ. ಸರಕಾರ ಸಾಕಷ್ಟು ಅನುದಾನ ನೀಡಿರೂ ಅ ಧಿಕಾರಿಗಳ
ನಿರ್ಲಕ್ಷದಿಂದ ಶೌಚಾಲಯ ಸಮಸ್ಯೆ ಮಾತ್ರ ಸುಧಾರಿಸಿಲ್ಲ. ಎರರು ವಾರ್ಡ್ನಲ್ಲಿ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು,
ಅಧಿಕಾರಿಗಳು ಮಾತ್ರ ಮೂಲ ಸೌಕರ್ಯ ಒದಗಿಸಲು ಗಮನಹರಿಸಿಲ್ಲ ಎಂದು ಜನರ ಆರೋಪವಾಗಿದೆ. ಆದ್ದರಿಂದ ಸಂಬಂಧಿ ಸಿದ ಅಧಿಕಾರಿಗಳು ಕೂಡಲೇ ನಿರ್ಮಿತಿ ಕೇಂದ್ರದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡು ಗುಣಮಟ್ಟ ಶೌಚಾಲಯ ನಿರ್ಮಿಸಬೇಕೆಂದು ಜನ ಬೇಡಿಕೆಯಾಗಿದೆ.
ಕಾಮಗಾರಿ ಕಳಪೆ
ಹೈಟೆಕ್ ಶೌಚಾಲಯ ಕಳೆಪೆಯಿಂದ ಕೂಡಿದ್ದು, ಸೂಕ್ತ ಚರಂಡಿ ನಿರ್ಮಿಸಿಲ್ಲ. ಅಪೂರ್ಣಗೊಳಿಸಿ ವರ್ಷ ಕಳೆದರೂ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಈ ಕಡೆ ನುಸಳಿಲ್ಲ. ಮೇಲಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪರಮಣ್ಣ ವಡಿಕೇರಿ
ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ, ಕಕ್ಕೇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?