ಅನಧಿಕೃತ ಹತ್ತಿಬೀಜ ದಾಸ್ತಾನು ಮೇಲೆ ದಾಳಿ: 2 ಕೋಟಿಗೂ ಅಧಿಕ ಮೌಲ್ಯದ ಹತ್ತಿ ಬೀಜ ಜಪ್ತಿ
Team Udayavani, Jun 1, 2020, 12:05 AM IST
ಯಾದಗಿರಿ: ಜಿಲ್ಲಾ ಕೇಂದ್ರ ಸೇರಿದಂತೆ ಗುರುಮಠಕಲ್ ವ್ಯಾಪ್ತಿಯಲ್ಲಿ ಅನಧಿಕೃತ ಹತ್ತಿ ಬೀಜ ದಾಸ್ತಾನು ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿ 2.46 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಹೆಸರಿನ ಹತ್ತಿ ಬೀಜಗಳನ್ನು ಜಪ್ತಿ ಮಾಡಿದ್ದಾರೆ.
ಯಾದಗಿರಿ ನಗರ ಹೊರವಲಯದ ವರ್ಧಮಾನ ರೈಸ್ ಮಿಲ್ ಪಕ್ಕದಲ್ಲಿರುವ ಗೋದಾಮಿನಲ್ಲಿ ಅನಧಿಕೃತವಾಗಿ ಸಂಗ್ರಹಿಸಲಾದ ಬಿಡಿ ಹತ್ತಿ ಬಿತ್ತನೆ ಬೀಜದ ದಾಸ್ತಾನು, ನರ್ಮದ ಸಾಗರ ಅಗ್ರಿ ಸೀಡ್ಸ್ ಬಾಡಿಗೆ ಇರುವ ಗೋದಾಮಿನಲ್ಲಿ ಪತ್ತೆಯಾಗಿದ್ದು, ಅನಧಿಕೃತವಾಗಿ ವಿವಿಧ ಬ್ರ್ಯಾಂಡ್ ಗಳ ಹೆಸರಿನಲ್ಲಿ ಪ್ಯಾಕ್ ಮಾಡುತ್ತಿರುವುದು ದಾಳಿಯಲ್ಲಿ ಬಯಲಾಗಿದೆ.
ಅಂದಾಜು 345.95 ಕ್ವಿಂಟಲ್ ಅನಧಿಕೃತ ಹತ್ತಿ ಬೀಜ ದಾಸ್ತಾನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ಕೃಷಿ ಅಧಿಕಾರಿಗಳು ಗೋದಾಮನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ ಗುರುಮಠಕಲ್ ವ್ಯಾಪ್ತಿಯ ಕೇಶ್ವಾರ ಗ್ರಾಮದ ಮನೆಯಲ್ಲಿ ಸಂಗ್ರಹಿಸಿದ್ದ ಅಂದಾಜು 20 ಕ್ವಿಂಟಾಲ್ ಅನಧಿಕೃತ ಸಂಗ್ರಹಿಸಲಾದ ಹತ್ತಿ ಬೀಜದ ದಾಸ್ತಾನು ಮೇಲೆ ದಾಳಿ ನಡೆಸಲಾಗಿದೆ.
ಯಾದಗಿರಿ ಗ್ರಾಮೀಣ ಠಾಣೆ ಮತ್ತು ಗುರುಮಠಕಲ್ ಪೊಲೀಸ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಅನಧಿಕೃತ ಬಿತ್ತನೆ ಬೀಜ ಮಾರಾಟ ಮಾಡುವುದು ಅಥವಾ ದಾಸ್ತಾನು ಮಾಡುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡಲು ಜಂಟಿ ಕೃಷಿ ನಿರ್ದೇಶಕಿ ಆರ್ ದೇವಿಕಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ