ಕಲಾವಿದರ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ
Team Udayavani, Nov 10, 2021, 5:49 PM IST
ಹುಣಸಗಿ: ಕಲ್ಯಾಣ ಕರ್ನಾಟಕ ಭಾಗದ ಕಲಾವಿದರು ಕೂಡ ರಾಜ್ಯ ಮಟ್ಟದಲ್ಲಿ ಮಿಂಚುವಂತಾಗಬೇಕು. ಅಲ್ಲದೆ ಸರಕಾರ ಈ ಭಾಗದ ಕಲಾವಿದರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನಳ್ಳಿ ಹೇಳಿದರು.
ಬಲಶೆಟ್ಟಿಹಾಳ ಗ್ರಾಮದ ಬಸವಲಿಂಗ ಶಿವಯೋಗಿಗಳ ವಿರಕ್ತಮಠದಲ್ಲಿ ಹಮ್ಮಿಕೊಂಡ ತಾಲೂಕು ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಲಾವಿದರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಲ್ಯಾಣ ಭಾಗದ ಕಲಾವಿದರ ಬಗ್ಗೆ ಬಹಳಷ್ಟು ನಿರ್ಲಕ್ಷ್ಯ ವಹಿಸಿಕೊಂಡು ಬರಲಾಗುತ್ತಿದೆ. ಈ ಭಾಗದಲ್ಲಿ ಅದ್ಭುತ ಕಲಾವಿದರು ಇದ್ದರೂ ರಾಜ್ಯಮಟ್ಟದಲ್ಲಿ ಗುರುತಿಸುವಲ್ಲಿ ತಾತ್ಸಾರ ಮನೋಭಾವನೆ ತೋರಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕ.ಕ.ಕ. ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ವಿಜಯಕುಮಾರ ಸೊನಾರೆ ಕಾರ್ಯಕ್ರಮ ಉದ್ಘಾಟಿಸಿ, ಕಲಾವಿದರು ಒಗ್ಗಟಾದಾಗ ಮಾತ್ರ ಸರಕಾರದ ವಿವಿಧ ಯೋಜನೆ ಮತ್ತು ಪ್ರಶಸ್ತಿ ಪುರಸ್ಕಾರ ದೊರೆಯಲಿವೆ. ವಿವಿಧ ಜನಮನ ಸೆಳೆಯುವ ಕಲೆಗಳು ಮತ್ತು ಕಲಾಕಾರರು ನಮ್ಮ ಭಾಗದಲ್ಲಿದ್ದಾರೆ. ಆದರೆ, ಅವರಿಗೆ ಸೂಕ್ತ ವೇದಿಕೆ ಇಲ್ಲ. ಸರಕಾರದ ಮಟ್ಟದಲ್ಲಿಯೂ ಅವರಿಗೆ ಪ್ರಾಶಾಸ್ತ್ಯ ನೀಡುತ್ತಿಲ್ಲ. ಹಾಗಾಗಿ ಇಲ್ಲಿನ ಕಲಾ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪರಿಚಯಿಸುವುದಲ್ಲದೆ ಕಲಾವಿದರ ಬೆಳೆವಣಿಗೆಯೇ ಒಕ್ಕೂಟದ ಉದ್ದೇಶವಾಗಿದೆ ಎಂದರು.
ಈ ವೇಳೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಪವನ ದೇಶಪಾಂಡೆ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಪ್ರಶಸ್ತಿ ಪಡೆದ ಶಿವಶರಣ ಕಟ್ಟಿಮನಿ ಅವರನ್ನು ಗೌರವಿಸಲಾಯಿತು. ನಂತರ ವಿವಿಧ ಕಲಾವಿದರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಸಿದ್ದಲಿಂಗಯ್ಯ ಶಾಸ್ತ್ರಿ ಸಾನ್ನಿಧ್ಯ ವಹಿಸಿದ್ದರು. ಮುಖಂಡ ತಿಪ್ಪಣ್ಣಗೌಡ ಬಿರಾದಾರ, ಒಕ್ಕೂಟದ ಜಿಲ್ಲಾಧ್ಯಕ್ಷ ವಿಶಾಲ ಸಿಂಧೆ, ಅಮರೇಶ ಹಸ್ಮಕಲ್, ವಿ.ಎಂ. ಬೆಳ್ಳುಬ್ಬಿ, ಶಿವಪ್ಪ ಹೆಬ್ಟಾಳ, ಸಂಗನಗೌಡ ಧನರೆಡ್ಡಿ ಸೇರಿದಂತೆ ವಿವಿಧ ಕಲಾವಿದರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು