ದೇವಿಕೇರಾದಲ್ಲಿ ನ್ಯಾಯ ನಿಮ್ಮದು, ನೆರವು ನಮ್ಮದು
Team Udayavani, Oct 18, 2021, 5:55 PM IST
ಸುರಪುರ: ಪ್ರತಿಯೊಬ್ಬರಿಗೂ ಕಾನೂನು ಜ್ಞಾನ ಅಗತ್ಯವಾಗಿದೆ. ಕಾನೂನು ಅರಿವಿನಿಂದ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಪೆನಲ್ನ ವಕೀಲ ಆದಪ್ಪ ಹೊಸ್ಮನಿ ತಿಳಿಸಿದರು.
ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಜರುಗಿದ ಡಿಸಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಕಾನೂನು ನೆರವು ಮತ್ತು ಸಲಹೆ ಕರಪತ್ರ ವಿತರಿಸಿ ಅವರು ಮಾತನಾಡಿ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತಾನ್ ಮತ್ತು ಸಿವಿಲ್ ನ್ಯಾಯಾಧೀಶ ಚಿದಾನಂದ ಬಡಿಗೇರ ಮಾರ್ಗದರ್ಶನದಲ್ಲಿ ನ್ಯಾಯ ನಿಮ್ಮದು ನೆರವು ನಮ್ಮದು ಕಾರ್ಯಕ್ರಮ ನಡೆಯಲಿದೆ ಎಂದರು.
ದಿನನಿತ್ಯದ ಜೀವನದಲ್ಲಿ ಮತ್ತು ಸಣ್ಣಪುಟ್ಟ ವ್ಯವಹಾರಗಳಲ್ಲಿ ಕಾನೂನಿನ ಅರಿವು ಪ್ರತಿಯೊಬ್ಬರಿಗೆ ಅವಶ್ಯವಾಗಿದೆ. ಕಾನೂನಿಗೆ ಬಡವ, ಶ್ರೀಮಂತ, ಮೇಲು-ಕೀಳು ಎಂಬ ಭೇದಭಾವ ಇಲ್ಲ. ಕಾನೂನಿನ ಕನಿಷ್ಟ ಜ್ಞಾನ ಹೊಂದಿದಾಗ ಅಪರಾಧಿಕ ಕೃತ್ಯ ನಡೆಯುವುದಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನಿನ ತಿಳಿವಳಿಕೆ ಹೊಂದಬೇಕಿದೆ. ಇದರಿಂದ ಸಣ್ಣಪುಟ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.
ಪ.ಜಾ-ಪ.ಪಂಗಡಕ್ಕೆ ಸೇರಿದವರು ಮಾನಸಿಕ ಅಥವಾ ನ್ಯೂನತೆ ಇರುವವರು, ಮಹಿಳೆ ಮತ್ತು ಮಕ್ಕಳು, ಕಾರ್ಖಾನೆ ಕಾರ್ಮಿಕರು, ಗುಂಪು ಘರ್ಷಣೆ, ಗಲಭೆ, ಪ್ರವಾಹ, ಭೂಕಂಪ, ಕೈಗಾರಿಕಾ ವಿನಾಶಕ್ಕೆ ತುತ್ತಾದವರು, ಮನೋರೋಗಿಗಳು ಮತೀಯ ದೌರ್ಜನಕ್ಕೆ ಬಲಿಯಾದವರು, 3 ಲಕ್ಷ ಒಳಗೆ ಆದಾಯವಿರುವ ಎಲ್ಲಾ ವರ್ಗದವರು ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಜನನ-ಮರಣ, ಬಾಲ್ಯ ವಿವಾಹ, ಗ್ರಾಹಕರ ಹಕ್ಕು, ಆಸ್ತಿ ಹಕ್ಕು, ಸೇರಿದಂತೆ ಇತರೆ ಕಾನೂನು ತಿಳಿವಳಿಕೆ ನೀಡಲಾಯಿತು. ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಅಪರ ಸರಕಾರಿ ವಕೀಲರಾದ ನಂದಣ್ಣಗೌಡ ಪಾಟೀಲ್, ಪಿಡಿಒ ಸಂಗೀತಾ ಸಜ್ಜನ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರೆಡ್ಡಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…