ಹೆಚ್ಚುತ್ತಿದೆ ಜೆಡಿಎಸ್‌ ಆಕಾಂಕ್ಷಿಗಳ ಪಟ್ಟಿ


Team Udayavani, Aug 13, 2018, 4:16 PM IST

yad-1.jpg

ಯಾದಗಿರಿ: ರಾಜ್ಯ ವಿಧಾನಸಭೆ ಚುನಾವಣೆ ಮುಗಿದು 3 ತಿಂಗಳಲ್ಲೇ ಪುರಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು. ಎಲ್ಲೆಡೆ ಸ್ಪರ್ಧೆ ಬಯಸಿರುವ ಆಕಾಂಕ್ಷಿಗಳ ಆಯ್ಕೆಯದ್ದೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್‌ ಕೋಟೆಯಾಗಿದ್ದ ಗುರುಮಠಕಲ್‌ ಪುರಸಭೆ ಚುನಾವಣೆ ದಿನೇ ದಿನೇ ಕಾವೇರುತ್ತಿದೆ.
 
ಗುರುಮಠಕಲ್‌ ಮತಕ್ಷೇತ್ರದ ಜನರು ವಿಧಾನಸಭೆ ಚುನಾವಣೆಯಲ್ಲಿ 1972ರಿಂದ 2013ರ ವರೆಗೆ ಸತತ ಕಾಂಗ್ರೆಸ್‌ ಅಭ್ಯರ್ಥಿಗಳನ್ನೇ ಆರಿಸಿ ತರುವ ಮೂಲಕ ಕ್ಷೇತ್ರದ ಹೆಸರು ಇತಿಹಾಸ ಪುಟದಲ್ಲಿ ಸೇರುವಂತೆ ಮಾಡಿದ್ದರು.
 
2018ರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಗುರುಮಠಕಲ್‌ ಕ್ಷೇತ್ರದಿಂದ 2008 ಮತ್ತು 2013ರಲ್ಲಿ ಆಯ್ಕೆಯಾಗಿದ್ದ ಬಾಬುರಾವ್‌ ಚಿಂಚನಸೂರ ಸೋಲನ್ನು ಕಂಡಿದ್ದು, ಈಗ ಕ್ಷೇತ್ರ ದಳಪತಿಗಳ ಕೈ ಸೇರಿದೆ. 24 ಸಾವಿರ ಮತಗಳ ಅಂತದಿಂದ ಪ್ರಥಮ ಬಾರಿಗೆ ಜೆಡಿಎಸ್‌ನ ನಾಗನಗೌಡ ಕಂದಕೂರ ಜಯಭೇರಿ ಸಾಧಿಸಿದ್ದು, ಸುಮಾರು ವರ್ಷಗಳಿಂದಲೂ ಗುರುಮಠಕಲ್‌ ಪಟ್ಟಣದಲ್ಲಿ ತಮ್ಮ ಪ್ರಾಬಲ್ಯ ಹೊಂದಿದ್ದಾರೆ. 

ಈ ಹಿಂದೆ ಗುರುಮಠಕಲ್‌ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 2007ರ ಚುನಾವಣೆಯಲ್ಲಿ 11 ಸ್ಥಾನಗಳನ್ನು ಪಡೆಯಲಾಗಿತ್ತು. ಅಧಿಕಾರ ದಾಹದಿಂದ ಕಾಂಗ್ರೆಸ್‌ ಬಲೆಗೆ ಸಿಲುಕಿದ 4 ಸದಸ್ಯರು ಕಾಂಗ್ರೆಸ್‌ನ್ನು ಬೆಂಬಲಿಸಿ ಲಲಿತಾ ತಿವಾರಿ ಎರಡುವರೆ ವರ್ಷ ಅಧಿಕಾರ ಅನುಭವಿಸಿದ್ದರು. ಇದಾದ ಬಳಿಕ ಕಾಂಗ್ರೆಸ್‌ ಅಧಿಕಾರ ಬಿಟ್ಟುಕೊಟ್ಟಿಲ್ಲ.

ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರೆಲ್ಲ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್‌ಗೆ ಸೇರಿದ್ದು, ಶಾಸಕರು ಕೂಡ ಜೆಡಿಎಸ್‌ ನವರಿದ್ದು, ಲೋಕಲ್‌ ಚುನಾವಣೆಯಲ್ಲಿ ಟಿಕೆಟ್‌ ಪಡೆಯಲು ಆಕಾಂಕ್ಷಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸ್ಥಳೀಯ ಚುನಾವಣೆಗೆ ಟಿಕೆಟ್‌ ನೀಡಲು ಜೆಡಿಎಸ್‌ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ನಾಗನಗೌಡ ಕಂದಕೂರ ಪಟ್ಟಣದಲ್ಲಿ ಜೆಡಿಎಸ್‌ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಆಕಾಂಕ್ಷಿಗಳ ತಯಾರಿ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. 

ಆತಂರಿಕ ಸಿದ್ಧತೆ: ಸ್ಥಳೀಯ ಚುನಾವಣೆಗೆ ಜೆಡಿಎಸ್‌ ನಲ್ಲಿ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಕಾಂಗ್ರೆಸ್‌ ಕೂಡ ಆಕಾಂಕ್ಷಿಗಳ ಪಟ್ಟಿ ತಯಾರಿಸಲು ಆತಂರಿಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಮಾಜಿ ಶಾಸಕ ಬಾಬುರಾವ್‌ ಚಿಂಚನಸೂರ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರೂ ಆಕಾಂಕ್ಷಿಗಳನ್ನು ಕಣಕ್ಕಿಳಿಸುವ ಕುರಿತು ಸಭೆ ನಡೆಸಿ ಚರ್ಚಿಸಿದ್ದಾರೆ. ಸದ್ಯದಲ್ಲೇ ಆಕಾಂಕ್ಷಿಗಳಿಂದ ಸರ್ಜಿ ಸ್ವೀಕರಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಹಿಂದೆ ಉಳಿಯದ ಬಿಜೆಪಿ: ಬಿಜೆಪಿ ಕೂಡ ಸ್ಥಳೀಯ ಸಂಸ್ಥೆ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪುರಸಭೆಯನ್ನು ತನ್ನ ತೆಕ್ಕೆಗೆ ಪಡೆಯಲು ಸಿದ್ಧತೆ ನಡೆಸಿದೆ. ಮಂಡಲ ಅಧ್ಯಕ್ಷ ಮತ್ತು ನಗರ ಅಧ್ಯಕ್ಷರ ನೇತೃತ್ವದಲ್ಲಿ ಆಕಾಂಕ್ಷಿಗಳ ಸಭೆ ನಡೆಸಿದ್ದು, ರೂಪರೇಷೆ ತಯಾರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ಬಲ ಪ್ರದರ್ಶನಕ್ಕೆ ಆನೆ ಸಜ್ಜು: ತಾವೇನು ಕಮ್ಮಿಯಿಲ್ಲ ಎನ್ನುವಂತೆ ಬಹುಜನ ಸಮಾಜವಾದಿ ಪಾರ್ಟಿಯೂ ಆಕಾಂಕ್ಷಿಗಳನ್ನು ಕಣಕ್ಕಿಳಿಸಲು ಸಿದ್ಧತೆಯಲ್ಲಿ ತೊಡಗಿದ್ದು, ಅರ್ಹ ಅಭ್ಯರ್ಥಿಗಳು ಸಿಕ್ಕರೆ ಎಲ್ಲಾ ವಾರ್ಡ್‌ನಲ್ಲಿ ಪಕ್ಷದಿಂದ ಕಣಕ್ಕಿಳಿಸಿ ಬಲ ಪ್ರದರ್ಶನಕ್ಕೆ ಮುಂದಾಗಿದೆ.

ಸ್ಥಳೀಯ ಚುನಾವಣೆಗೆ ಜೆಡಿಎಸ್‌, ಕಾಂಗ್ರೆಸ್‌, ಬಿಜೆಪಿ ಹಾಗೂ ಬಿಎಸ್‌ಪಿ ಪಕ್ಷಗಳು ಸಜ್ಜಾಗುತ್ತಿದ್ದು, ಇನ್ನೊಂದೆಡೆ ಯುವ ನಾಯಕ ರಾಜಾ ರಮೇಶಗೌಡ ಅವರು ಸ್ವಾತಂತ್ರ್ಯಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧರಾಗಿದ್ದಾರೆ. ಒಟ್ಟಿನಲ್ಲಿ ಲೋಕಲ್‌ ಫೈಟ್‌ನಲ್ಲಿ ತೀರ್ವ ಪೈಪೋಟಿ ಏರ್ಪಟ್ಟಿದ್ದು, ಮತದಾರ ಯಾರತ್ತ ಒಲವು ತೋರಿಸಿ ಅಧಿಕಾರ ನೀಡುವರೋ ಕಾಯ್ದು ನೋಡಬೇಕಿದೆ.

ಅನೀಲ ಬಸೂದೆ

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.