ಗುಡೂರು-ಜೋಳದೆಡಗಿ ಬಾಂದಾರ ಸೇತುವೆ ಕಾಮಗಾರಿ ಪರಿಶೀಲನೆ
Team Udayavani, Sep 26, 2020, 6:36 PM IST
ಸೈದಾಪುರ: ಗುಡೂರು-ಜೋಳದೆಡಗಿ ಬ್ರಿಜ್ ಕಂ ಬ್ಯಾರೇಜ್ಗೆ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಭೇಟಿ ನೀಡಿ ಅಲ್ಲಿನ ಕಾಮಗಾರಿ ವೀಕ್ಷಿಸಿದರು. 18 ತಿಂಗಳಲ್ಲಿ ಮುಗಿಯಬೇಕಾದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಕೂಡಲೇ ಕಾಮಗಾರಿ ಚುರುಕುಗೊಳಿಸುವಂತೆ ಸೂಚಿಸಿದರು.
ಕಳೆದ ಬಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೇಟ್ಗಳು ತೆಗೆಯದಂತಾಗಿ ನೀರು ಸರಬರಾಜು ಆಗದೆ ನದಿ ನೀರಿನ ಪ್ರಮಾಣ ಹೆಚ್ಚಾಗಿ ರಸ್ತೆ ಕೊಚ್ಚಿಕೊಂಡು ಹೋಗಿತ್ತು. ಇದರ ನಿವಾರಣೆಗಾಗಿ ಎತ್ತರ ಹೆಚ್ಚಿಸಿಕೊಂಡು ಪರ್ಯಾಯ ವ್ಯವಸ್ಥೆಯೊಂದಿಗೆ ಸೇತುವೆ ಪಕ್ಕದಲ್ಲಿ ಬಾಂದಾರ ನಿರ್ಮಿಸುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು. ವಡಗೇರಾ ಹಾಗೂ ಯಾದಗಿರಿ ತಾಲೂಕುಗಳ ಗಡಿ ಭಾಗಗಳ ಜನರಿಗೆ ಸುಲಭ ಸಂಪರ್ಕದ ಮಾರ್ಗ ಇದಾಗಿದ್ದು, ಇದಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದರು.
ಸೇತುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ಕೊಂಡಾಪುರ ಹೊರವಲಯದಲ್ಲಿನ ಹಳ್ಳ ತುಂಬಿ ಹರಿದರೆ ಸೇತುವೆ ರಸ್ತೆ ಮೇಲೆ ನೀರು ಹರಿಯುವ ಬಗ್ಗೆ ಮಾಹಿತಿ ಪಡೆದು ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ರಾಮಸಮುಂದ್ರ ಜಿಪಂ ಸದಸ್ಯ ಅಮರದೀಪ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಪಾಟೀಲ ಕ್ಯಾತನಾಳ, ಜಿಪಂ ಉಪ ಕಾರ್ಯನಿರ್ವಾಹಕ ಅಧಿಕಾರಿ ಬಸವಣ್ಣಪ್ಪ ಬೋಸ್ಕೆ, ವಿಠಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ