ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸಂಪುಟ ಅನುಮೋದನೆ: ಚವ್ಹಾಣ
Team Udayavani, Sep 4, 2020, 6:29 PM IST
ಯಾದಗಿರಿ: ಯಾದಗಿರಿಯಲ್ಲಿ ನೂತನವಾಗಿ ಆರಂಭವಾಗಲಿರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತಷ್ಟು ಸುಸಜ್ಜಿತವಾಗಿ ಕಾರ್ಯ ನಿರ್ವಹಣೆಗೆ ಪರಿಷ್ಕೃತ 309 ಕೋಟಿ ರೂ. ಅನುಮೋದನೆ ನೀಡಲಾಗಿದ್ದು ಸಂತಸ ತಂದಿದೆ ಎಂದು ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಶ್ವ ಆರೋಗ್ಯ ಸಂಸ್ಥೆ ನಿಯಮಗಳನ್ವಯ ಪ್ರತಿ 1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕಾಗಿದ್ದು, ಸದ್ಯ ಕರ್ನಾಟಕದಲ್ಲಿ 13556 ಜನಸಂಖ್ಯೆಗೆ ಒಬ್ಬ ವೈದ್ಯರು ಇದ್ದಾರೆ. ಈ ಅಸಮತೋಲನ ಸರಿಪಡಿಸಲು ಹಾಗೂ ರಾಜ್ಯದ ಬಡ-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದಕ್ಕಾಗಿ ಸರ್ಕಾರ ವೈದ್ಯಕೀಯ ಕಾಲೇಜು ಇರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ನಿರ್ಧರಿಸಿದ್ದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದಿದ್ದಾರೆ.
ಯಾದಗಿರಿ ಜಿಲ್ಲೆ ಮುದ್ನಾಳ ಗ್ರಾಮದಲ್ಲಿ ಸ್ವಾಯತ್ತ ಸಂಸ್ಥೆಯ ಸ್ಥಾನಮಾನದೊಂದಿಗೆ 15ಒ ಸೀಟುಗಳ ಪ್ರವೇಶವುಳ್ಳ “ವೈದ್ಯಕೀಯ ವಿಜ್ಞಾನಗಳ ಸಂಸ್ಥೆ’ ಹೆಸರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭವಾಗಲಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ 281 ಕೋಟಿ ವೆಚ್ಚದಲ್ಲಿ ನಡೆಯುತ್ತಿದ್ದು, ಅದನ್ನು ರೂ.309 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಭಾಗದಲ್ಲಿ ವೈದ್ಯಕೀಯ ಕಾಲೇಕು ಅವಶ್ಯಕವಾಗಿತ್ತು. ಜನರ ಆರೋಗ್ಯದ ದೃಷ್ಟಿಯಿಂದ ನಮ್ಮ ಸರ್ಕಾರ ಪ್ರತಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನೀಡುತ್ತಿರುವುದು ರಾಜ್ಯದ ಪ್ರತಿ ಸರ್ಕಾರದ ಮತ್ತು ಮುಖ್ಯಮಂತ್ರಿಗಳ ಕಾಳಜಿ ಎತ್ತಿ ತೋರಿಸುತ್ತದೆ ಎಂದಿರುವ ಅವರು, ಮುಖ್ಯಮಂತ್ರಿ ಬಿಎಸ್ ವೈ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವಥ ನಾರಾಯಣ್ ಅವರಿಗೆ ಧನ್ಯವಾದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ