ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಜಾಥಾ


Team Udayavani, Feb 27, 2022, 1:23 PM IST

12act

ಯಾದಗಿರಿ: ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮೂರು ರೈತ ವಿರೋಧಿ ಕೃಷಿ ಸಂಬಂಧಿಸಿದ ಕಾಯ್ದೆಗಳನ್ನು ಕೂಡಲೇ ರದ್ದು ಪಡಿಸುವಂತೆ ಆಗ್ರಹಿಸಿ ಜನಾಂದೋಲನ ಮಾಹಾಮೈತ್ರಿಯ ವತಿಯಿಂದ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌. ಹಿರೇಮಠ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ ಜಿಲ್ಲೆಯ ಬಸವಕಲ್ಯಾಣದಿಂದ ಜಾಥಾ ಮಾ. 1ರಂದು ಪ್ರಾರಂಭಿಸಿ ಮಾ. 15ರಂದು ಬೆಂಗಳೂರು ತಲುಪಲಿದೆ. ಮತ್ತೊಂದು ಜಾಥಾ ಚಾಮರಾಜನಗರ ಜಿಲ್ಲೆಯ ಮಲೆಮಹಾದೇಶ್ವರ ಬೆಟ್ಟದಿಂದ ಮಾ. 9ರಿಂದ ಪ್ರಾರಂಭಗೊಂಡು ಮಾ. 15ರಂದು ಬೆಂಗಳೂರು ತಲುಪಲಿದೆ. ಎರಡು ಜಾಥಾಗಳು ಒಟ್ಟಿಗೆ ಸೇರಿದ ನಂತರ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಸಮಾರೋಪ ಸಮಾರಂಭ ನಡೆಯಲಿದ್ದು, ಕೃಷಿ ಕಾಯ್ದೆ ರದ್ದತಿಗೆ ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಹಿರೇಮಠ ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ ವಕೀಲರಾದ ಪ್ರಶಾಂತ್‌ ಭೂಷಣ್‌, ಹಿರಿಯ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಸಂಘಟನೆಗಳ ಪ್ರಮುಖರು, ಸಾಮಾಜಿಕ ಹೋರಾಟಗಾರರು, ಕನ್ನಡಪರ ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದರು.

ಕೇಂದ್ರ ಕೃಷಿ ಸಂಬಂಧಿತ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ರೈತರು ಒಂದು ವರ್ಷಗಳ ಕಾಲ ಪ್ರತಿಭಟನೆ ನಡೆಸಿದರು. ಮೇಲ್ನೋಟಕ್ಕೆ ರೈತರ ಹಿತ ಕಾಪಾಡಲು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗುತ್ತಿದೆ ಎಂದು ಸರ್ಕಾರ ಹೇಳಿದರೂ ಉತ್ತರಪ್ರದೇಶ, ಪಂಜಾಬ್‌ ಸೇರಿದಂತೆ ಮತ್ತೆರಡು ರಾಜ್ಯಗಳ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ. ಒಟ್ಟಾರೆ ಇದು ರೈತರ ಗೆಲುವಾಗಿದೆ. ಆದಷ್ಟು ಬೇಗ ಕೇಂದ್ರ ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಹಿರೇಮಠ ಒತ್ತಾಯಿಸಿದರು.

ಕಾಯ್ದೆಗಳ ವಿರುದ್ಧ ಜನಜಾಗೃತಿ ಮೂಡಿಸುವುದು ಅವಶ್ಯಕವಿದ್ದು, ಜಾಥಾದ ಉದ್ದಕ್ಕೂ ನಮ್ಮ ಸಂಘಟನೆ ಈ ಕೆಲಸ ಮಾಡಲಿದೆ. ಇದೇ ಸಂದರ್ಭದಲ್ಲಿ ಆಯಾ ಕ್ಷೇತ್ರಗಳ ಶಾಸಕರೊಂದಿಗೆ ಸಂವಾದ ಕಾರ್ಯಕ್ರಮ ಕೂಡಾ ಏರ್ಪಡಿಸಲಿದ್ದು, ಒಂದು ವೇಳೆ ಶಾಸಕರು ಸಂವಾದರಲ್ಲಿ ಭಾಗಿಯಾಗಲು ಒಪ್ಪದಿದ್ದರೆ ಅವರ ಕಚೇರಿಗಳ ಮುಂದೆ ಒಂದು ತಾಸು ಮೌನ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ರೈತರ ವಿಷಯದಲ್ಲಿ ಸರ್ಕಾರಗಳು ತಮ್ಮ ಬದ್ಧತೆ ತೋರಿಸುವಲ್ಲಿ ವಿಫಲವಾಗಿವೆ ಎಂದು ದೂರಿದ ಹಿರೇಮಠ ಅವರು, ಡಾ| ಸ್ವಾಮಿನಾಥನ್‌ ವರದಿ ಜಾರಿಗೆ ತರಲು ಹಾಗೂ ಎಂಎಸ್‌ಪಿ ದರದಲ್ಲಿ ರೈತರು ಬೆಳೆದ ಬೆಳೆಯನ್ನು ಖರೀದಿಸಲು ಮತ್ತು ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಸರ್ಕಾರಗಳನ್ನು ಒತ್ತಾಯಿಸುತ್ತಲೇ ಬಂದಿದ್ದರೂ ರೈತರ ಬೇಡಿಕೆ ಇದೂವರೆಗೆ ಈಡೇರಿಲ್ಲ ಎಂದು ಸರ್ಕಾರಗಳ ವಿರುದ್ಧ ಹರಿಹಾಯ್ದರು.

ಹಿಜಾಬ್‌ ವಿಚಾರದಲ್ಲಿ ರಾಜಕೀಯ

ಹಿಜಾಬ್‌ ವಿಚಾರವನ್ನು ದೊಡ್ಡದು ಮಾಡಿ, ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇದೊಂದು ಗಂಭೀರ ವಿಷಯವಾಗಿದ್ದು, ಈ ವಿಚಾರದಲ್ಲಿ ಸಮಗ್ರ ಚಿಂತನೆ ನಡೆಸುವ ಅಗತ್ಯವಿದೆ. ಜೊತೆಗೆ ಅಮೂಲಾಗ್ರ ಬದಲಾವಣೆಯೂ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು. ಖಾಜಾ ಅಸ್ಲಂ ಹಾಗೂ ಹಿರಿಯ ವಕೀಲರಾದ ಭಾಸ್ಕರರಾವ್‌ ಮುಡಬೂಳ ಇದ್ದರು

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.