ಗುರುಮಠಕಲ್ ನಲ್ಲಿ ಜೆಡಿಎಸ್ ಪ್ರತಿಭಟನೆ
Team Udayavani, Sep 13, 2019, 3:10 PM IST
ಯಾದಗಿರಿ :ಜಿಲ್ಲೆಯ ಗುರುಮಠಕಲ್ ನಲ್ಲಿ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಜೆಡಿಎಸ್ ರಾಜ್ಯ ಯುವ ಮಹಾಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.
ಸಿಎಂ ಯಡಿಯೂರಪ್ಪ ಅವರು ಗುರುಮಠಕಲ್ ವಿಧಾನಸಭೆ ಕ್ಷೇತ್ರದ 7.50 ಕೋಟಿ ಅನುದಾನ ಕಡಿತ ಮಾಡಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶಿಸಿ ಜೆಡಿಎಸ್ ಪ್ರತಿಭಟನೆ ನಡೆಸಿದರು.