ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಸಿ: ನರಿಬೋಳ


Team Udayavani, Apr 22, 2020, 5:46 PM IST

22-April-35

ಜೇವರ್ಗಿ: ತಾಲೂಕಿನ ಭೀಮಾ ನದಿ ತೀರದ ಗ್ರಾಮಗಳ ರೈತರಿಗೆ ಪ್ರತಿ ದಿನ 4 ಗಂಟೆಗಳ ಕಾಲ ಮೂರು ಫೇಸ್‌ ವಿದ್ಯುತ್‌ ಪೂರೈಸುವಂತೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಆಗ್ರಹಿಸಿದ್ದಾರೆ.

ಪಟ್ಟಣದ ಮಿನಿ ವಿಧಾನಸೌಧಕ್ಕೆ ಮಂಗಳವಾರ ಕೂಡಿ ಭಾಗದ ರೈತರ ನಿಯೋಗದೊಂದಿಗೆ ತಹಶೀಲ್ದಾರ್‌ ಸಿದರಾಯ ಭೋಸಗಿ ಭೇಟಿ ಮಾಡಿ ಮಾತನಾಡಿದ ಅವರು, ತಾಲೂಕಿನ ಕೂಡಿ, ಕೋಬಾಳ, ಮಂದ್ರವಾಡ, ಬಣಮಿ, ಕೋನಾ ಹಿಪ್ಪರಗಾ, ಹಂದನೂರ, ರಾಸಣಗಿ ಗ್ರಾಮಗಳ ರೈತರು ಬೇಸಿಗೆ ಕಾಲದಲ್ಲಿ ಬಾಳೆ, ಕಲ್ಲಗಂಡಿ ಬೆಳೆ, ಕಬ್ಬು, ಈರುಳ್ಳಿ ಹಾಗೂ ತರಕಾರಿ ಬೆಳೆಯುತ್ತಿದ್ದಾರೆ. ಯಾವುದೇ ಮುನ್ಸೂಚನೆ ನೀಡದೇ ಜೆಸ್ಕಾಂ ಅಧಿಕಾರಿಗಳು ರೈತರ ಪಂಪ್‌ ಸೆಟ್‌ಗಳ ವಿದ್ಯುತ್‌ ಪೂರೈಕೆ ಕಡಿತಗೊಳಿಸಿದ್ದಾರೆ. ಇದರಿಂದ ರೈತರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರೈತರ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್‌ ಸಿದರಾಯ ಭೋಸಗಿ ಮಾತನಾಡಿ, ಕೋನಾ ಹಿಪ್ಪರಗಾ-ಸರಡಗಿ (ಬಿ) ಬ್ರಿಜ್‌ ಕಂ ಬ್ಯಾರೇಜ್‌ನಿಂದ ಕಲಬುರಗಿ ನಗರಕ್ಕೆ ಕುಡಿಯುವ ನೀರು
ಸರಬರಾಜುಗೊಳಿಸಲಾಗುತ್ತಿದ್ದು , ಬೇಸಿಗೆಯಿದ್ದ ಕಾರಣ ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ರೈತರ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ಈ ಕುರಿತು ಗ್ರಾಮೀಣ ಕುಡಿಯುವ ಸರಬುರಾಜು ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ  ಬ್ಯಾರೇಜ್‌ನಲ್ಲಿ ಶೇಖರಣೆಯಾದ ನೀರಿನ ಪ್ರಮಾಣ ಪರಿಶೀಲಿಸಿ ವರದಿ ಪಡೆದ ನಂತರ ಜೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ವಾರದಲ್ಲಿ ಮೂರು ದಿನ ವಿದ್ಯುತ್‌ ಸರಬುರಾಜು ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಕೂಡಿ ಭಾಗದ ಗ್ರಾಮಗಳ ರೈತರು ಕೋನಾ ಹಿಪ್ಪರಗಾ-ಸರಡಗಿ (ಬಿ) ಬ್ಯಾರೇಜ್‌ ನೀರಿನ ಮೇಲೆ ಅವಲಂಬಿತರಾಗದೇ ಪರ್ಯಾಯ ಮಾರ್ಗ ಕಂಡುಕೊಳ್ಳುವಂತೆ ತಹಶೀಲ್ದಾರ್‌ ರೈತರ ನಿಯೋಗಕ್ಕೆ ತಿಳಿಸಿದರು.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ಜಿಲ್ಲಾ ಉಸ್ತವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮುಖಾಂತರ
ಮಾತನಾಡಿ, ಕೂಡಿ ಭಾಗದ ಹತ್ತಾರು ಗ್ರಾಮಗಳ ರೈತರು ಬೇಸಿಗೆ ಸಮಯದಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಭೀಮಾ ನದಿಯಲ್ಲಿ ನೀರಿದ್ದರೂ ರೈತರು ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಈ ಕುರಿತು ತಾವು ಜಿಲ್ಲಾ ಧಿಕಾರಿಗಳೊಂದಿಗೆ ಚರ್ಚಿಸಿ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.

ರೈತ ಮುಖಂಡರಾದ ಶರಣಗೌಡ ಪಾಟೀಲ ಕೋಬಾಳ, ಯಶವಂತರಾಯ ಸಂಕಾ, ಅರುಣಗೌಡ ಮಾಲಿಪಾಟೀಲ ಕೋನಾ ಹಿಪ್ಪರಗಾ, ಶರಣಗೌಡ ಕೋನಾ ಹಿಪ್ಪರಗಾ, ಮಲ್ಲಿನಾಥ ಕಶೆಟ್ಟಿ ಕೂಡಿ, ತಿಪ್ಪಣ್ಣ ತಳವಾರ ಬಣಮಿ, ಶಿವಪುತ್ರಪ್ಪ ಮೇಳಕುಂದಿ ರಾಸಣಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.