ಶಿಕ್ಷಣ ನೀತಿಯಿಂದ ಉದ್ಯೋಗ ಸೃಷ್ಟಿ
Team Udayavani, Feb 9, 2022, 12:52 PM IST
ಸುರಪುರ: ಪದವಿ ನಂತರ ಮುಂದೇನು ಎಂಬ ಚಿಂತೆ ಕಾಡುವುದು ಸಹಜ. ಇದಕ್ಕೆ ಹೆದರುವ ಅಗತ್ಯವಿಲ್ಲ. ರಾಷ್ಟ್ರೀಯ ನೂತನ ಶಿಕ್ಷಣ ನೀತಿಯಿಂದ ಪದವಿ ನಂತರ ಯುವಕ, ಯುವತಿಯರಿಗೆ ವಿಫುಲ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಧಾರವಾಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಧಾನೆ ರಾಜೇಂದ್ರ ಮಾಣಿಕರಾವ್ ಹೇಳಿದರು.
ನಗರದ ಜನನಿ ಮಹಿಳಾ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆ ಕೇವಲ ಕಾರ್ಮಿಕರಿಗೆ ಮಾತ್ರ ಸಿಮೀತವಾಗಿಲ್ಲ. ಗ್ರಾಮೀಣ ಭಾಗದ ಪದವೀಧರ ಯುವಕ, ಯುವತಿಯರಿಗೆ ಉದ್ಯೋಗದ ಅವಕಾಶಗಳಿವೆ. ನಮ್ಮ ತಪ್ಪು ತಿಳಿವಳಿಕೆ, ಮಾಹಿತಿ ಕೊರತೆ ಮತ್ತು ಅಧಿಕಾರಿಗಳ ಬೇಜವಾಬ್ದಾರಿಯಿಂದ ಪದವೀಧರರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಪದವೀಧರರು ಹೆಚ್ಚಿನ ಮಾಹಿತಿ ಪಡೆದು ಉದ್ಯೋಗ ಅವಕಾಶ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿಗಳಾದ ಡಾ| ಆದಿಶೇಷ ನೀಲಗಾರ ಮಾತನಾಡಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯ ಅರಿಯಲು ಕಾರ್ಯಾಗಾರ ಸಹಕಾರಿಯಾಗಲಿದೆ ಎಂದರು.
ಉಪನ್ಯಾಸಕ ತಿರುಪತಿ ಕೆಂಭಾವಿ, ಸುವರ್ಣಾ ಅಂಟೋಳಿ, ಮರೆಮ್ಮ ಕಟ್ಟಿಮನಿ, ನಂದಿನಿ, ಶ್ರೀದೇವಿ, ವೆಂಕಟೇಶ ಜಾಲಗಾರ, ಬೀರೇಶಕುಮಾರ, ಅಂಬ್ರೇಶ ಚಿಲ್ಲಾಳ, ಮಹೇಶ ಗಂಜಿ ಇದ್ದರು. ಅಯ್ಯಮ್ಮ ಪೂಜಾರಿ ನಿರೂಪಿಸಿದರು, ವೈಶಾಲಿ ಸ್ವಾಗತಿಸಿದರು. ದೇವಿಕಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ