ಬಸವ ಜಯಂತಿ-ರಂಜಾನ್ ಸರಳವಾಗಿ ಆಚರಿಸಿ
Team Udayavani, Apr 24, 2020, 3:54 PM IST
ಕಾಳಗಿ: ಶಾಂತಿಸಭೆಯಲ್ಲಿ ತಹಶೀಲ್ದಾರ್ ನೀಲಪ್ರಭ ಬಬಲಾದ ಮಾತನಾಡಿದರು.
ಕಾಳಗಿ: ಏ.25ರಿಂದ ಆರಂಭವಾಗಲಿರುವ ರಂಜಾನ್ ಹಾಗೂ 26 ರಂದು ಜರುಗುವ ಬಸವ ಜಯಂತಿ ಹಬ್ಬಗಳನ್ನು ಹಿಂದು-ಮುಸ್ಲಿಂ ಬಾಂಧವರು ಅತ್ಯಂತ ಸರಳವಾಗಿ ಆಚರಿಸಿ ತಾಲೂಕು ಆಡಳಿತಕ್ಕೆ ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ನೀಲಪ್ರಭ ಬಬಲಾದ ಹೇಳಿದರು.
ಪಟ್ಟಣದಲ್ಲಿ ನಡೆದ ಹಮ್ಮಿಕೊಂಡ ಬಸವ ಜಯಂತಿ, ರಂಜಾನ್ ಹಬ್ಬದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವವನ್ನು ಹೆಮ್ಮಾರಿಯಂತೆ ಕಾಡುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವುದಕ್ಕಾಗಿ ಸಾಮಾಜಿಕ ಅಂತರ ಕಾಪಾಡುವುದು ಅನಿವಾರ್ಯವಾಗಿದೆ. ಸರ್ಕಾರ ಎಲ್ಲ ಧಾರ್ಮಿಕ ಆಚರಣೆಗಳನ್ನೂ ಸಾಮೂಹಿಕವಾಗಿ ಆಚರಿಸುವುದಕ್ಕೆ ನಿಷೇಧ ಹೇರಿದೆ. ಹೀಗಾಗಿ ಇದನ್ನು ಅರ್ಥ ಮಾಡಿಕೊಂಡು ಮುಸ್ಲಿಂ ಬಾಂಧವರು ಮನೆಯಲ್ಲೆ ಇದ್ದು ತಮ್ಮ ಪ್ರಾರ್ಥನೆ ಮಾಡಬೇಕು. ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಯಾರೊಬ್ಬರು ಮಸೀದಿಗೆ ಹೋಗಬಾರದು ಎಂದರು.
ಡಿವೈಎಸ್ಪಿ ವೆಂಕನಗೌಡ ಪಾಟೀಲ ಮಾತನಾಡಿ, ಜನಹಿತಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ನಿಯಮಗಳನ್ನು ಪ್ರತಿಯೊಬ್ಬರೂ ಚಾಚು ತಪ್ಪದೇ ಪಾಲಿಸಬೇಕು ಎಂದು ಹೇಳಿದರು. ನಿಯಮ ಉಲ್ಲಂಘಿಸಿ 3-4 ಜನಕ್ಕಿಂತ ಹೆಚ್ಚು ಜನ ಗುಂಪುಗೂಡಿದ್ದು ಕಂಡುಬಂದರೆ ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ ಎಂದರು.
ಪಪಂ ಮುಖ್ಯಾಧಿಕಾರಿ ವೆಂಕಟೇಶ ತೆಲಾಂಗ್ ಮಾತನಾಡಿದರು. ಸಿಪಿಐ ಭೋಜರಾಜ ರಾಠೊಡ್, ಪಿಎಸ್ಐ ಬಸವರಾಜ ಚಿತಕೋಟಿ, ಮುಖಂಡರಾದ ಚಂದ್ರಕಾಂತ ವನಮಾಲಿ, ಶಿವಶರಣಪ್ಪ ಬಡಿಗೇರ, ರವಿದಾಸ ಪತಂಗೆ, ಚಂದ್ರಕಾಂತ ಜಾಧವ್, ಗುಡೂಸಾಬ್ ಕಮಲಾಪುರ, ಶಿವಶರಣಪ್ಪ ಕಮಲಾಪುರ, ರಾಘವೇಂದ್ರ ಗುತ್ತೇದಾರ, ಸೋಮಶೇಖರ ಮಾಕಪನೋರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ