ಭ್ರಷ್ಟಾಚಾರ ಸ್ಪರ್ಧೆಯಲ್ಲಿ ಕರ್ನಾಟಕ ನಂ.1 ಸ್ಥಾನ


Team Udayavani, Feb 26, 2018, 6:00 AM IST

Amit-Shah-a-800.jpg

ಯಾದಗಿರಿ: ಭ್ರಷ್ಟಾಚಾರದ ಸ್ಪರ್ಧೆಯಲ್ಲಿ ಕರ್ನಾಟಕ ಸರ್ಕಾರ ಪ್ರಥಮ ಸ್ಥಾನ ಪಡೆದಿದೆ. ಐದು ವರ್ಷಗಳ ಹಿಂದೆ ಕಾಂಗ್ರೆಸ್‌ ಮುಖಂಡರು ಸಣ್ಣ ಮನೆಯಲ್ಲಿ ವಾಸವಾಗಿದ್ದರು. ಈಗ ಬಂಗಲೆ ಹಾಗೂ ಕಾರು ಖರೀದಿಸಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಅನುದಾನ ಕಾಂಗ್ರೆಸ್‌ ಮುಖಂಡರ ಮನೆ ಸೇರಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಆರೋಪಿಸಿದರು.

ಸುರಪುರ ಪಟ್ಟಣದ ದಿವಳಗುಡ್ಡದಲ್ಲಿನ ಸಜ್ಜನ್‌ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಬೂತ್‌ ಮಟ್ಟದ ಯಾದಗಿರಿ, ಸುರಪುರ ಮತಕ್ಷೇತ್ರಗಳ ನವಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಯುಪಿಎ ಸರ್ಕಾರ 13ನೇ ಹಣಕಾಸು ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 88,583 ಕೋಟಿ ರೂ. ಅನುದಾನ ನೀಡಿದರೆ, ಪ್ರಧಾನಿ ನರೇಂದ್ರ ಮೋದಿ ಅವರು 14ನೇ ಹಣಕಾಸು ಯೋಜನೆಯಡಿ 2,19,506 ಕೋಟಿ ರೂ. ಅನುದಾನ ನೀಡಿದ್ದಾರೆ. ಆ ಹಣ ಎಲ್ಲಿ ಹೋಗಿದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ತಿಳಿಸಬೇಕು ಎಂದರು.

ಸಿದ್ದರಾಮಯ್ಯ ಅವರೇ ನಿಮಗೆ ಆಡಳಿತ ನಡೆಸಲು ಆಗದಿದ್ದರೆ ಕುರ್ಚಿಯಿಂದ ಕೆಳಗಿಳಿಯಿರಿ. ಆಡಳಿತ ಹೇಗೆ ನಡೆಸಬೇಕು ಎಂದು ನಾವು ತೋರಿಸುತ್ತೇವೆ. ಒಂದು ಕಾಲದಲ್ಲಿ ನಿಜಾಮನ ಆಡಳಿತದಲ್ಲಿದ್ದ ಹೈ.ಕ ಭಾಗ ನಂತರ ಅನೇಕ ನಾಯಕರ ಬಲಿದಾನಗಳಿಂದ ನಿಜಾಮನಿಂದ ಮುಕ್ತಿಗೊಂಡಿತು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಿಜಾಮನ ಆಡಳಿತ ನೆನಪು ಮಾಡಿಕೊಡುತ್ತಿದೆ. ರಾಜ್ಯದಲ್ಲಿ ಸಾಲಬಾಧೆಯಿಂದ 3,781 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತ್ರಿಪುರಾ ರಾಜ್ಯದ ಚುನಾವಣೆ ಮತ ಏಣಿಕೆ ಮಾ.3ರಂದು ನಡೆಯಲಿದ್ದು, ಕಾರ್ಯಕರ್ತರು ಪಟಾಕಿ ಸಿದ್ಧಪಡಿಸಿಕೊಳ್ಳಬೇಕು. ಅಲ್ಲೂ ನಮ್ಮ ಸರ್ಕಾರ ಅ ಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.

ನವಶಕ್ತಿ ಸಮಾವೇಶದ ಶಕ್ತಿ ಏನಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ತಿಳಿದಿದೆ. ದೇಶದಲ್ಲಿ ಇಂತಹ ನವಶಕ್ತಿ ಸಮಾವೇಶಗಳಿಂದಲೇ ಕಾಂಗ್ರೆಸ್‌ನ್ನು ಕಿತ್ತೂಗೆದಿದ್ದೇವೆ. ಕಾಂಗ್ರೆಸ್‌ನವರು ಶಕ್ತಿ ಎಂದರೆ ರ್ಯಾಲಿ ಹಾಗೂ ದೊಡ್ಡ ಸಮಾವೇಶವೆಂದು ತಿಳಿದುಕೊಂಡಿದ್ದಾರೆ. ಆದರೆ ಬೂತ್‌ ಮಟ್ಟದ ಕಾರ್ಯಕರ್ತರ ಶಕ್ತಿ ಏನು ಎಂಬುದು ಅವರಿಗೆ ತಿಳಿದಿಲ್ಲ. ಹೈದ್ರಾಬಾದ ಕರ್ನಾಟಕದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ಸಿಗುತ್ತವೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಈ ಬಾರಿ ಚುನಾವಣೆಯಲ್ಲಿ ಹೈ.ಕ ಭಾಗದಿಂದ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾ ಧಿಸುವ ಮೂಲಕ ರಾಜ್ಯದಲ್ಲಿ ಬಿಎಸ್‌ವೈ ನೇತೃತ್ವದ ಬಿಜೆಪಿ ಅ ಧಿಕಾರಕ್ಕೆ ಬರಲು ಮೂಲ ಬುನಾದಿಯಾಗಲಿದೆ ಎಂದರು.

ಮೂರು ಗಂಟೆ ತಡವಾಗಿ ಬಂದ ಶಾ
ಸುರಪುರ ಪಟ್ಟಣದ ದಿವಳಗುಡª ಹತ್ತಿರ ಇರುವ ಸಜ್ಜನ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ನವಶಕ್ತಿ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮೂರು ಗಂಟೆ ತಡವಾಗಿ ಆಗಮಿಸಿದರು. ಸಮಾವೇಶ 12.45ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಶಾ ಆಗಮಿಸಿದಾಗ ಸಮಯ 3.45 ಗಂಟೆಯಾಗಿತ್ತು. ಸುಮಾರು 3 ಗಂಟೆಗಳ ಕಾಲ ಬೂತ್‌ ಮಟ್ಟದ ಕಾರ್ಯಕರ್ತರು ಕಾಯುವಂತಾಯಿತು. ಸಮಾರಂಭದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ಆಮಿತ್‌ ಶಾ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದರು.

ಐದು ವರ್ಷಗಳ ಹಿಂದೆ ಕಾಂಗ್ರೆಸ್‌ ಮುಖಂಡರು ಸಣ್ಣ ಮನೆಯಲ್ಲಿ ವಾಸವಾಗಿದ್ದರು. ಈಗ ಬಂಗಲೆ ಹಾಗೂ ಕಾರು ಖರೀದಿಸಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಅನುದಾನ ಕಾಂಗ್ರೆಸ್‌ ಮುಖಂಡರ ಮನೆ ಸೇರಿದೆ. ಸಿದ್ದರಾಮಯ್ಯ ಅವರೇ ನಿಮಗೆ ಆಡಳಿತ ನಡೆಸಲು ಆಗದಿದ್ದರೆ ಕುರ್ಚಿಯಿಂದ ಕೆಳಗಿಳಿಯಿರಿ. ಆಡಳಿತ ಹೇಗೆ ನಡೆಸಬೇಕು ಎಂದು ನಾವು ತೋರಿಸುತ್ತೇವೆ.
– ಅಮಿತ್‌ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.