ಸಾವಿರ ಮನವಿಗೂ ಸ್ಪಂದಿಸಿಲ್ಲ ಖರ್ಗೆ


Team Udayavani, Mar 31, 2019, 4:06 PM IST

Udayavani Kannada Newspaper

ಯಾದಗಿರಿ: ಒಂದಲ್ಲ, ಎರಡಲ್ಲ, ಸಾವಿರ ಸಲ ಖರ್ಗೆ ಕಾಲಿಗೆ ಬಿದ್ದರೂ ಕೋಲಿ ಸಮಾಜವನ್ನು ಎಸ್‌ಟಿ ಸೇರಿಸುವ ಕುರಿತು ಚಕಾರ ಎತ್ತಲಿಲ್ಲ ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರ ತಿಳಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ಕೋಲಿ ಸಮಾಜದ ಏಳ್ಗೆಗೆ ಸಹಕರಿಸದೆ ಕೊಡಲಿ ಪೆಟ್ಟು ಹಾಕಲಾಗಿದೆ ಎಂದು ದೂರಿದರು.

ದಿ| ವಿಠuಲ ಹೆರೂರ ಕೋಲಿ ಸಮಾಜವನ್ನು ಎಸ್‌ಟಿ ಸೇರಿಸುವ ಸಂಬಂಧ ಹೋರಾಡಿ ಪ್ರಾಣವನ್ನೇ ಬಿಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 50 ವರ್ಷ ಅಧಿಕಾರದಲ್ಲಿದ್ದರೂ ಕೋಲಿ ಸಮಾಜದ ಹೆಸರು ನಾಲಿಗೆ ಮೇಲೆ ಬರಲಿಲ್ಲ. ಬಿಜೆಪಿಯಿಂದ ಸಮಾಜದವರಿಗೆ ಒಳ್ಳೆಯ ಸ್ಥಾನಮಾನ ಸಿಕ್ಕಿದೆ. ಸಮಾಜವನ್ನು ಎಸ್‌ಟಿಗೆ ಸೇರಿಸುವ ಜಿದ್ದಿನಿಂದ ಬಿಜೆಪಿಗೆ ಸೇರಿದ್ದಾಗಿ ತಿಳಿಸಿದರು.

ಎಸ್‌ಟಿ ಜನಾಂಗದ ಬೇಡ ಸಮುದಾಯಕ್ಕೆ ಶೇ.3ರಷ್ಟು ಮೀಸಲಾತಿ ಇದೆ. ಇದನ್ನು ಶೇ.10ಕ್ಕೆ ಏರಿಸುವಂತೆಯೂ ಬೇಡಿಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಕಲಬುರಗಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಜಾಧವ ಸಮರ್ಥ ವ್ಯಕ್ತಿಯಾಗಿದ್ದಾರೆ. ಖರ್ಗೆ ಹಳೆ ಪರ್ವತವಾಗಿದೆ. ಜಾಧವ ಹೊಸ ಪರ್ವತ ಇದ್ದಂತೆ. ಖರ್ಗೆ ಅವರು 50 ವರ್ಷದಲ್ಲಿ ಮಾಡಿದ ಅಭಿವೃದ್ಧಿಯನ್ನು ಜಾಧವ 2 ವರ್ಷದಲ್ಲಿ ಮಾಡಿ ತೋರಿಸುತ್ತಾರೆ ಎಂದು ತಿಳಿಸಿದರು.

ಕೋಲಿ ಸಮಾಜದ ಮತ್ತೂಬ್ಬ ಮುಖಂಡ ಸಾಯಬಣ್ಣ ಬೋರಬಂಡ ಮಾತನಾಡಿ, ಗುರುಮಠಕಲ್‌ ವಿಧಾನಸಭೆ ಕ್ಷೇತ್ರದಿಂದ ಖರ್ಗೆ ಅವರು ಶಾಸಕರಾಗಿ ಇಲ್ಲಿನ 1ಲಕ್ಷದಷ್ಟು ಜನ ಗುಳೆ ಹೋಗುವುದನ್ನೇ ಬಳುವಳಿಯಾಗಿ ನೀಡಿದ್ದಾರೆ.

ದೇಶದಲ್ಲಿ ಯಾವುದೇ ಕ್ಷೇತ್ರದವರು ಒಬ್ಬರನ್ನೇ ಇಷ್ಟು ಬಾರಿ ಆರಿಸಿಲ್ಲ. ಇಲ್ಲಿನ ಮತದಾರರು ಸತತವಾಗಿ ಆಶೀರ್ವದಿಸಿದರೂ ಈ ಭಾಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ ಎಂದು ದೂರಿದರು.

ಗುರುಮಠಕಲ್‌ ಜನರು ಅಧಿಕಾರ ನೀಡಿದ್ದರಿಂದ ಬೇರೆಯವರಿಗೆ ಲಾಭ ಮಾಡಿದ್ದಾರೆ ವಿನಃ ಇಲ್ಲಿಯವರಿಗಿಲ್ಲ. ಇದೊಂದು ಬಾರಿ ಗೆಲ್ಲಿಸಿದರೆ ಒಂದು ಡಜನ್‌ ಬಾರಿಯಾಗುತ್ತದೆ ಎನ್ನುತ್ತಿರುವ ಖರ್ಗೆ ಅವರು ಈ ಭಾಗದ ಜನರನ್ನು ತುಳಿಯುತ್ತ ಬಂದಿದ್ದಾರೆ. ಖರ್ಗೆ ಜನರಿಗಾಗಿ ಏನೂ ಮಾಡಿಲ್ಲ. ವೈಯಕ್ತಿಕ ವರ್ಚಸ್ಸು, ಸಂಪತ್ತು ಗಳಿಸಿದ್ದಾರೆ ಅಷ್ಟೆ ಎಂದು ದೂರಿದರು.

ಖರ್ಗೆ ಅನುಯಾಯಿಗಳಿಂದ ನನ್ನ ಸೋಲು: ಚಿಂಚನಸೂರ ಗುರುಮಠಕಲ್‌ ಮತಕ್ಷೇತ್ರದಲ್ಲಿ ಖರ್ಗೆ ಅವರ ಅನುಯಾಯಿಗಳ ಕುತಂತ್ರ ಬುದ್ಧಿಯಿಂದ ತನ್ನ ಸೋಲಾಗಿದೆ ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರ ಆರೋಪಿಸಿದರು. ರಘುನಾಥರೆಡ್ಡಿ, ಮಹಿಪಾಲರೆಡ್ಡಿ, ಶರಣಪ್ಪ ಮಾನೇಗಾರ್‌, ವಿಶ್ವನಾಥ ನೀಲಹಳ್ಳಿ ಅವರು ದಳಕ್ಕೆ ಮತ ಹಾಕುವಂತೆ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಿದರು. ಈಗ ಕಾಂಗ್ರೆಸ್‌ಗೆ ಹಾಕಲು ಹೇಳುತ್ತಿದ್ದಾರೆ.

ಅವರಿಗೆ ನಾಚಿಕೆ ಬರಬೇಕು ಎಂದು ತರಾಟೆಗೆ ತೆಗೆದುಕೊಂಡರು. ತಮ್ಮ ಮನೆ ಎದುರು ನಿತ್ಯ ಬೈಕ್‌ಗಳ ಮೇಲೆ ಮುಸುಕುಧಾರಿಗಳು ಸುತ್ತಾಡುತ್ತಿದ್ದಾರೆ. ಗುರುಮಠಕಲ್‌ ಪ್ರಚಾರಕ್ಕೆ ಹೋದರೆ ಕಾಲು ತೆಗೆಯುತ್ತೇವೆ ಎಂದು ಧಮ್ಕಿ ಹಾಕುತ್ತಿರುವುದಾಗಿ ತಿಳಿಸಿದರು

ಗುರುಮಠಕಲ್‌ ಮತದಾರರ ಶಾಪದಿಂದ ಖರ್ಗೆ ಸಿಎಂ ಆಗಿಲ್ಲ ಗುರುಮಠಕಲ್‌ ಕ್ಷೇತ್ರದ ಅಮಾಯಕ ಜನರನ್ನು ಮತಬ್ಯಾಂಕ್‌ನಂತೆ ಬಳಸಿಕೊಂಡು ಖರ್ಗೆ 47 ವರ್ಷ ಅಧಿಕಾರದಲ್ಲಿದ್ದರೂ ಇಲ್ಲಿನ ಜನರಿಗೆ ಏನು ಮಾಡಿಲ್ಲ. ಇಲ್ಲಿನ ಮತದಾರರ ಶಾಪದಿಂದಲೇ ಖರ್ಗೆ ಸಿಎಂ ಆಗಿಲ್ಲ. 12 ಬಾರಿ ಗೆದ್ದು ರೆಕಾರ್ಡ್‌ ಆಗುತ್ತದೆ ಎಂದು ಖರ್ಗೆ ಹೇಳುತ್ತಿದ್ದು, ನಮ್ಮನ್ನು ತುಳಿದು ನೀವು ಸಿಎಂ ಆಗಲಾರಿರಿ. ಯಾವುದರಲ್ಲಿ ರೆಕಾರ್ಡ್‌ ಮಾಡಲು ಹೊರಟಿದ್ದೀರಿ. 50 ವರ್ಷದಲ್ಲಿ ಮಾಡದ ಅಭಿವೃದ್ಧಿ ಈಗ ಏನು ಮಾಡುವಿರಿ ಎಂದು ಸಾಯಬಣ್ಣ ಬೋರಬಂಡ ಪ್ರಶ್ನಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.