ಕೋಲಭಾವಿಯಲ್ಲಿ ಸ್ವಚ್ಛತೆ ಮರೀಚಿಕೆ
Team Udayavani, Dec 21, 2019, 1:31 PM IST
ಗುರುಮಠಕಲ್: ಪಟ್ಟಣದ ಕೋಲಭಾವಿ ಬಡವಣೆಯಲ್ಲಿ ಸ್ವಚ್ಛತೆ ಮೊದಲಿನಿಂದಲೂ ಮರೀಚಿಕೆಯಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿಗಳು ಸದಾ ಗೋಚರಿಸುತ್ತವೆ. ಇನ್ನೊಂದೆಡೆ ಚರಂಡಿಯುದ್ದಕ್ಕೂ ಮಡುಗಟ್ಟಿ ನಿಂತ ತ್ಯಾಜ್ಯ ನೀರಿನ ದರ್ಶನವಾಗುತ್ತದೆ.
ಪಟ್ಟಣದ 11ನೇ ವಾರ್ಡ್ ಕೋಲಭಾವಿ ಬಡವಣೆ ಮುಖ್ಯರಸ್ತೆ ಪಕ್ಕದಲ್ಲಿರುವ ಚರಂಡಿಗಳೆಲ್ಲ ಹೂಳು ತುಂಬಿ ತ್ಯಾಜ್ಯ ನೀರು ಮುಂದೆ ಸಾಗದಷ್ಟು ಕೆಟ್ಟ ಪರಿಸ್ಥಿತಿಗೆ ತಲುಪಿದೆ. ವಿವಿಧ ಮಳಿಗೆಗಳವರು ನಿತ್ಯ ಸುರಿಯುವ ತ್ಯಾಜ್ಯ ರಾಶಿ, ರಾಶಿಯಾಗಿ ಸಂಗ್ರಹವಾಗುತ್ತಿದೆ. ಅದನ್ನು ನಿಯಮಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಇಲ್ಲಿನ ಅವ್ಯವಸ್ಥೆ ಕಂಡು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಬೀದಿನಾಯಿಗಳು, ಹಂದಿಗಳು ಆಹಾರದ ಆಸೆಗೆ ಕಸದ ರಾಶಿಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿವೆ. ಇದರಿಂದಾಗಿ ಪಟ್ಟಣದಲ್ಲಿ ಮತ್ತಷ್ಟು ಗಲೀಜು ನಿರ್ಮಾಣವಾಗುತ್ತಿದೆ. ಇದೆಲ್ಲದರ ಪರಿಣಾಮ ಪಟ್ಟಣದ ಸೌಂದರ್ಯಕ್ಕೆ ಕುಂದುಂಟಾಗುತ್ತಿದೆ. ಆದರೆ ಮೊದಲಿನಿಂದಲೂ ಸ್ವತ್ಛತೆ ಕಾಣದೆ ಎಲ್ಲೆಂದರಲ್ಲಿ ಗಲೀಜು ತುಂಬಿಕೊಂಡಿರುವ ವಾರ್ಡ್ಗಳನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಸಂಬಂಧಿಸಿವರು ಮುಂದಾಗಿಲ್ಲ. ಇನ್ನಾದರೂ ಸ್ವಚ್ಛತೆ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಚೌಡಮ್ಮ ಗುಡಿಯಿಂದ ಆರ್ಯ ಸಮಾಜದ ಶಾಲೆ ವರೆಗೆ ಸಿಸಿ ರಸ್ತೆ ಮತ್ತು ಚರಂಡಿ ಕಾಮಾಗಾರಿಯನ್ನು ಶಾಸಕರ ಅನುದಾನದ 40 ಲಕ್ಷ ರೂ. ವೆಚ್ಚದಲ್ಲಿ ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತದೆ. –ಜಯಶ್ರೀ, ಪುರಸಭೆ ಸದಸ್ಯೆ ಗುರುಮಠಕಲ್
-ಚೆನ್ನಕೇಶವುಲು ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು