ದೈಹಿಕ ಶಿಕ್ಷಕರಿಲ್ಲದೆ ಪ್ರತಿಭೆ ಗೌಣ
•ಸೈದಾಪುರ, ಬಳಿಚಕ್ರ, ಕೊಂಕಲ್ ಹೋಬಳಿ ಮಟ್ಟದ ಸರಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ
Team Udayavani, Jul 30, 2019, 1:03 PM IST
ಸೈದಾಪುರ: ಬೆಳಗುಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿರುವುದು.
ಸೈದಾಪುರ: ಶಾಲಾ ಮಕ್ಕಳು ಕಲಿಕೆ ಜತೆ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಪ್ರತಿಭೆಯನ್ನು ಹೊರತೆಗೆಯಲು ಸರಕಾರ ಹೋಬಳಿ, ತಾಲೂಕು, ಜಿಲ್ಲಾ, ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸುತ್ತಿದೆ. ಇದಕ್ಕೆ ತದ್ದವಿರುದ್ಧವೆಂಬತೆ ತಾಲೂಕಿನ ಬಹುತೇಕ ಸರಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರೇ ಇಲ್ಲ.
ಸೈದಾಪುರ ಹೋಬಳಿಯಲ್ಲಿ 20 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಅವುಗಳ ಪೈಕಿ ಕೇವಲ ಎರಡು ಶಾಲೆಗಳಿಗೆ ಮತ್ತು ಬಳಿಚಕ್ರ ಹೋಬಳಿಯಲ್ಲಿ 20 ಶಾಲೆಗಳಿದ್ದು, ಅವುಗಳ ಪೈಕಿ ಕೇವಲ 4 ಜನ ಹಾಗೂ ಕೊಂಕಲ್ ಹೋಬಳಿಯ 20 ಶಾಲೆಗಳಲ್ಲಿ ಇಬ್ಬರು ಮಾತ್ರ ದೈಹಿಕ ಶಿಕ್ಷಕರಿದ್ದಾರೆ.
ಮಕ್ಕಳು ದಿನದ ಬಹುತೇಕ ಸಮಯ ಶಾಲೆಯಲ್ಲಿ ಕಳೆಯುತ್ತಾರೆ. ವಿದ್ಯಾರ್ಥಿಗಳಿಗೆ ಕಲಿಕೆ ಜತೆ ಕ್ರೀಡೆಗಳಲ್ಲಿ ಭಾಗವಹಿಸಲು ಅನೂಕೂಲ ಮಾಡಿಕೊಡಬೇಕಾದ ದೈಹಿಕ ಶಿಕ್ಷಕರ ಇಲ್ಲದೆ ಈ ಭಾಗದ ವಿದ್ಯಾರ್ಥಿಗಳು ಕ್ರೀಡೆಯಿಂದ ವಂಚಿತರಾಗತ್ತಿದ್ದಾರೆ. ಅಲ್ಲದೇ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನ ಇಲ್ಲದೆ ರಾಜ್ಯ ಮಟ್ಟದಲ್ಲಿ ಯಶಸ್ವಿಯಾಗಲು ವಿಫಲವಾಗುತ್ತಿದ್ದಾರೆ. ದೈಹಿಕ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಬಾಲ್ಯ ಜೀವನದ ಕ್ರೀಡೆಗಳನ್ನು ಕಸಿದುಕೊಳ್ಳುವ ಜತೆ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹಿಂದೇಟು ಹಾಕುತ್ತಿವೆ. ಮತ್ತು ಇದರಿಂದಾಗಿ ನಮ್ಮ ಭಾಗದ ಪ್ರತಿಭವಂತ ಕ್ರೀಡಾಪಟುಗಳನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ತೊಂದರೆಯಾಗುತ್ತಿದೆ ಎಂಬುವುದು ಇಲ್ಲಿನ ಶಿಕ್ಷಣ ಪ್ರೇಮಿಗಳ ಅಭಿಪ್ರಾಯವಾಗಿದೆ.
ಶಿಕ್ಷಕರ ನೇಮಕಾತಿ ಯಾವಾಗ?:
ಸರಕಾರ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ವಿಷಯ ಶಿಕ್ಷಕರು ಕಡಿಮೆ ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೆಮಿಸಿಕೊಳ್ಳುತ್ತಿದೆ. ಆದರೆ ಈ ಸೈದಾಪುರ, ಬಳಿಚಕ್ರ ಮತ್ತು ಕೊಂಕಲ್ ಹೋಬಳಿಯಲ್ಲಿ ಸುಮಾರು 60 ಶಾಲೆಗಳಿವೆ. ಅದರಲ್ಲಿ ಕೇವಲ 8 ಶಾಲೆಗಳಿಗೆ ಮಾತ್ರ ದೈಹಿಕ ಶಿಕ್ಷಕರಿದ್ದಾರೆ. ಈ ಮೂಲಕ ವಿಷಯ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ, ದೈಹಿಕ ಶಿಕ್ಷಣವನ್ನು ನಿರ್ಲಕ್ಷ್ಯ ವಹಿಸಿದ್ದಾರೆ. ಈ ಸಮಸ್ಯೆಯನ್ನು ನಮ್ಮ ಭಾಗದ ಜನಪ್ರತಿನಿಧಿಗಳು ಮತ್ತು ಶಿಕ್ಷಣಾಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿ ಕನಿಷ್ಠ ಅತಿಥಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು.•ಆಂಜನೇಯ ಸೈದಾಪುರ, ಬಿ.ಪಿ.ಎಡ್ ಪದವೀಧರ
ಈ ಭಾಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರೆತ ಇದೆ. ಆದರೆ ಸರಕಾರವು ರಾಜ್ಯ ಮಟ್ಟದಲ್ಲಿ ನೇಮಕಾತಿ ಮತ್ತು ವರ್ಗವಣೆಯ ಮೂಲಕ ಭರ್ತಿ ಮಾಡಿಕೊಳಬಹುದು. ಆದರೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಲು ಅವಕಾಶವಿಲ್ಲ.•ಶ್ರೀಶೈಲ ಬಿರಾದರ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ