ಸರಕಾರಿ ನಿಯಮದಂತೆ ಭೂ ಖರೀದಿ ದರ ನಿಗದಿ
Team Udayavani, Mar 10, 2019, 10:20 AM IST
ಯಾದಗಿರಿ: ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಭೂರಹಿತ ಕೃಷಿ ಕಾರ್ಮಿಕ ಫಲಾನುಭವಿಗಳಿಗೆ ಭೂ ಖರೀದಿ ಯೋಜನೆಯಡಿ ಭೂಮಿ ನೀಡಲು ಸರಕಾರಿ ಭೂ ಖರೀದಿ ನಿಯಮಗಳ ಆಧಾರದಲ್ಲಿ ಖರೀದಿಸಲು ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ 2018-19ನೇ ಸಾಲಿನ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಭೂ ರಹಿತರಿಗೆ ಭೂ ಖರೀದಿ ಯೋಜನೆಯಡಿ ಭೂ ಖರೀದಿ ದರ ನಿಗದಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಟ್ಟು 46 ಉಪ ಜಾತಿಗಳು ಬರುವ ಅಲೆಮಾರಿ, ಅರೆ ಅಲೆಮಾರಿ ಜಾತಿಗಳ ಭೂ ರಹಿತ ಕೃಷಿ ಕಾರ್ಮಿಕರಿಗೆ ನೀರಾವರಿ ರಹಿತ ಭೂಮಿಯನ್ನು ಪ್ರತಿ ಫಲಾನುಭವಿಗೆ 2 ಎಕರೆ, ನೀರಾವರಿ ಸಹಿತ ಭೂಮಿಯನ್ನು ಪ್ರತಿ ಫಲಾನುಭವಿಗೆ 1 ಎಕರೆ ಶೇ.50ರಷ್ಟು ಸಬ್ಸಿಡಿ ಹಾಗೂ ಶೇ.50ರಷ್ಟು ಸಾಲ ಆಧಾರದ ಮೇಲೆ ನೀಡಲಾಗುವುದು ಎಂದು ಹೇಳಿದರು.
ಪ್ರತಿ ಎಕರೆಗೆ 15 ಲಕ್ಷ ರೂ. ಒಳಗೆ ಖರೀದಿಗೆ ಅವಕಾಶವಿದೆ. ಜಿಲ್ಲೆಯಲ್ಲಿ 12 ಜನ ಭೂ ಮಾಲೀಕರು ತಮ್ಮ ಭೂಮಿ ನೀಡಲು ಮುಂದೆ ಬಂದಿದ್ದಾರೆ. ಅವರಿಂದ ಒಟ್ಟು 67 ಎಕರೆ ಭೂಮಿ ಖರೀದಿಗೆ ದರ ನಿಗದಿಪಡಿಸಲಾಗಿದೆ. ಯೋಜನೆಯಡಿ 52 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಶಹಾಪುರ ತಾಲೂಕಿನ 50 ಹಾಗೂ ಸುರಪುರ ತಾಲೂಕಿನ ಇಬ್ಬರು ಫಲಾನುಭವಿಗಳಿದ್ದಾರೆ ಎಂದು ಮಾಹಿತಿ ನೀಡಿದರು.
ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಪೂಜಾರಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಠ್ಠಲ ಮುದೂ°ರ, ಕೃಷಿ ಇಲಾಖೆಯ ರಾಜಕುಮಾರ, ಜಿಲ್ಲಾ ಉಪ ನೋಂದಣಾಧಿಕಾರಿ ಸೇರಿದಂತೆ ಜಮೀನಿನ ಮಾಲೀಕರು ಹಾಗೂ ಫಲಾನುಭವಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Congress Election campaign; ಇಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ
Andhra Pradesh; ಅಣ್ಣ ಜಗನ್ ಬಳಿ 80 ಕೋಟಿ ಸಾಲ ಮಾಡಿರುವ ಶರ್ಮಿಳಾ!
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Controversy;ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಲಕ್ಷ ಸಹಿ ಅಭಿಯಾನ