ಕಾನೂನು ಪಾಲನೆ ಎಲ್ಲರ ಜವಾಬ್ದಾರಿ
Team Udayavani, Dec 27, 2021, 3:20 PM IST
ಸೈದಾಪುರ: ಕಾನೂನು ಪಾಲನೆ ಎಲ್ಲರ ಜವಾಬ್ದಾರಿಯಾದಾಗ ಮಾತ್ರ ಅಪರಾಧ ತಡೆಯಲು ಸಾಧ್ಯ. ಈ ದಿಸೆಯಲ್ಲಿ ಸಂಚಾರ ನಿಯಮ ಸೇರಿ ಪೊಲೀಸ್ ಇಲಾಖೆ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ನಿಯಮ ಪಾಲಿಸಲು ತಿಳಿಸಬೇಕಿದೆ ಎಂದು ಕಾನೂನು ಸುವ್ಯವಸ್ಥೆ ಪಿಎಸ್ಐ ಭೀಮರಾಯ ಬಂಕ್ಲಿ ಹೇಳಿದರು.
ಪಟ್ಟಣದ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಸೈದಾಪುರ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆಯಲ್ಲಿ ಮಾತನಾಡಿದರು.
ಅಪರಿಚಿತರು ಕಂಡು ಬಂದರೆ ಅವರ ಚಲನವಲನ ಬಗ್ಗೆ ನಿಗಾ ವಹಿಸಬೇಕು. ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು. ಇದರಿಂದ ಮಕ್ಕಳ ಅಪಹರಣ ಸೇರಿದಂತೆ ದರೋಡೆ ಪ್ರಕರಣ ತಡೆಗಟ್ಟಲು ಸಾಧ್ಯ. ವಿದ್ಯಾರ್ಥಿಗಳು ಸಂಚಾರ ನಿಯಮ ಉಲ್ಲಂಘಿಸಬಾರದು ಎಂದು ಸಲಹೆ ನೀಡಿದರು.
ಅಪರಾಧ ತಡೆ ಪಿಎಸ್ಐ ಹಣಮಂತ್ರಾಯ ದೊರೆ ಮಾತನಾಡಿ, ವಾಹನಗಳನ್ನು ನಿಗದಿತ ವೇಗದಲ್ಲಿ ಚಲಾಯಿಸಬೇಕು. ಈ ಕುರಿತು ಮಕ್ಕಳ ಬಗ್ಗೆ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು. ವಾಹನಗಳಲ್ಲಿ ಸಂಚರಿಸುವಾಗ ಅದರ ಸುರಕ್ಷತೆ ಬಗ್ಗೆ ಗಮನ ವಹಿಸಿದರೆ ಅಪರಾಧ ತಡೆಯಲು ಸಾಧ್ಯ ಎಂದರು.
ಈ ವೇಳೆ ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಪ್ರಾಂಶುಪಾಲ ಜಿ.ಎಂ. ಗುರುಪ್ರಸಾದ, ಶಿಕ್ಷಕರಾದ ಕಾಶಿನಾಥ ಶೇಖಸಿಂದಿ, ವಿಶ್ವನಾಥರೆಡ್ಡಿ ಪಾಟೀಲ ಕಣೇಕಲ, ಸತೀಶ ಪುರ್ಮಾ, ತೋಟೇಂದ್ರ, ಕವಿತಾ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು