ಗರ್ಭಿಣಿಯರಿಗೆ ಸಹಕಾರವಿರಲಿ


Team Udayavani, Nov 24, 2018, 1:17 PM IST

yad-1.jpg

ಯಾದಗಿರಿ: ಅಪೌಷ್ಟಿಕತೆ ನಿವಾರಿಸುವಲ್ಲಿ ಕೇವಲ ಗರ್ಭಿಣಿಯರಷ್ಟೇ ಮುತುವರ್ಜಿ ವಹಿಸಿದರೆ ಸಾಲದು. ಇದಕ್ಕೆ ವಿವಿಧ ಇಲಾಖೆಗಳ ಜತೆಗೆ ಮುಖ್ಯವಾಗಿ ಕುಟುಂಬದವ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯುನಿವರ್ಸಿಟಿ (ಸಿಸಿಎಲ್‌ -ಎನ್‌ಎಲ್‌ಎಸ್‌ಐಯು) ಬೆಂಗಳೂರು ವತಿಯಿಂದ ಯುನಿಸೆಫ್‌ನ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಪ್ರಾದೇಶಿಕ ಕಚೇರಿ ಬೆಂಬಲದೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲೆಯಲ್ಲಿ ಅಪೌಷ್ಟಿಕತೆ ಸವಾಲುಗಳನ್ನು ಗುರುತಿಸುವ ಮತ್ತು ನಿವಾರಣೆ ಕುರಿತ ಒಂದು ದಿನದ ಸಮಾಲೋಚನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆರೋಗ್ಯವಂತ ಮಕ್ಕಳು ಜನಿಸುವಂತಾದರೆ ಅಪೌಷ್ಟಿಕತೆ ನಿವಾರಣೆಯಾಗಿ, ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗರ್ಭಿಣಿಯರು ಪೌಷ್ಟಿಕಾಂಶವಿರುವ ಆಹಾರವನ್ನು ಸೇವಿಸಬೇಕು. ಆರೋಗ್ಯ ಚೆನ್ನಾಗಿದ್ದರೆ ಜೀವನದಲ್ಲಿ ಏನಾದರೂ ಸಂಪಾದನೆ, ಸಾಧನೆ ಮಾಡಬಹುದು ಎಂದು ಹೇಳಿದರು. 

ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ನಿರ್ಮಿಸಿದ ಮನೆಗಳಿಗೆ ಸ್ವತ್ಛ ಭಾರತ ಮಿಷನ್‌-2ರಡಿ ಶೌಚಾಲಯ ನಿರ್ಮಾಣ ಮಾಡಬೇಕಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಂಡಿರುವ ಸಾರ್ವಜನಿಕರು ಅವುಗಳ ಬಳಕೆಗೆ ಹೆಚ್ಚಿನ ಒತ್ತು ನೀಡುವಂತೆ ಪ್ರಚಾರ ನಡೆಸಲಾಗುವುದು ಎಂದು ತಿಳಿಸಿದರು. ಯುನಿಸೆಫ್‌ ಸಮಾಲೋಚಕಿ ಡಾ| ತಾರಾ ಎಮ್‌.ಎಸ್‌. ಅವರು ಮಾತನಾಡಿ, ಹಸಿವು ನೀಗಿಸುವುದರಿಂದ ಮಾತ್ರ ಅಪೌಷ್ಟಿಕತೆ ನಿವಾರಣೆಯಾಗುವುದಿಲ್ಲ. 

ಪೌಷ್ಟಿಕಾಂಶವುಳ್ಳ ಆಹಾರ ಸೇವನೆ ಮಾಡಿದರೆ ಅಪೌಷ್ಟಿಕತೆ ನಿವಾರಣೆಯಾಗುತ್ತದೆ. ಇದಕ್ಕಾಗಿ ಸರ್ಕಾರದ ಹಲವು ಯೋಜನೆಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಯೋಜನೆಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯುನಿವರ್ಸಿಟಿಯ ಕುಮಾರಸ್ವಾಮಿ ಟಿ. ಮಾತನಾಡಿ, ಮಹಿಳೆ ಮತ್ತು ಮಕ್ಕಳಲ್ಲಿ ಹಲವಾರು ಕಾರಣಗಳಿಂದ ಅಪೌಷ್ಟಿಕತೆ ಉಂಟಾಗುತ್ತದೆ. ಇದನ್ನು ನಿವಾರಿಸುವ ಜವಾಬ್ದಾರಿ ಹೊತ್ತಿರುವ ಇಲಾಖೆಗಳ ನಡುವೆ ಸಮನ್ವತೆ ಇದ್ದಾಗ ಅಪೌಷ್ಟಿಕತೆ ನಿರ್ಮೂಲನೆ ಮಾಡಬಹುದು. ಇಲಾಖೆಗಳಿಗೆ ಯಾವುದೇ ಯೋಜನೆ ಕುರಿತು ಸುತ್ತೋಲೆ ಬಂದಾಗ ಅದರ ಬಗ್ಗೆ ಚರ್ಚೆ ನಡೆಸಿ, ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ಯುನಿಸೆಫ್‌ ರಾಜ್ಯ ಸಂಯೋಜಕ ಡಾ| ಶಂಕರ ಹೊಸಕೇರಿ ಜಿಲ್ಲೆಯಲ್ಲಿ ಅಪೌಷ್ಟಿಕತೆ ನಿವಾರಿಸಲು ಇರುವ ಪ್ರಸ್ತುತ ಸವಾಲು ಮತ್ತು ಸಮಸ್ಯೆಗಳ ಕುರಿತಂತೆ ಸಂವಾದ ನಡೆಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ ಉಸ್ಮಾನ್‌ ಪಟೇಲ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಲಕ್ಷ್ಮೀಕಾಂತ, ಜಿಲ್ಲಾಸ್ಪತ್ರೆ ಮಕ್ಕಳ ತಜ್ಞರಾದ ಡಾ| ರಾಜೇಶ್ವರಿ, ಯುನಿಸೆಫ್‌ ಹೈದ್ರಾಬಾದ್‌ ಪ್ರತಿನಿಧಿ ರುಚಿ, ಕಾರ್ಯಕ್ರಮದ ಸಂಶೋಧನಾ ಸಹಾಯಕಿ ಫಾತಿಮಾ ಆರ್‌.ಎಫ್‌., ಮಗು ಮತ್ತು ಕಾನೂನು ಕೇಂದ್ರದ ಸುಧಾ ಎಸ್‌., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಶುಶ್ರೂಷಕಿಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.