ವಿದ್ಯಾರ್ಥಿಗಳು ಓದುವ ಛಲ ಬೆಳೆಸಿಕೊಳ್ಳಲಿ: ಮಾಲಕರೆಡ್ಡಿ
Team Udayavani, Aug 14, 2017, 5:08 PM IST
ಯಾದಗಿರಿ: ಜೀವನದಲ್ಲಿ ಗುರಿ ತಲುಪಬೇಕಾದರೆ ವಿದ್ಯಾರ್ಥಿಗಳಲ್ಲಿ ಓದುವ ಛಲ ಬೆಳೆಸಿಕೊಳ್ಳಬೇಕು ಎಂದು ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಹೇಳಿದರು. ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2017-18ನೇ ಸಾಲಿನ ಸಾಹಿತ್ಯ ಮತ್ತು ಸಾಂಸ್ಕೃತಿಕ, ಎನ್ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ ಹಾಗೂ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ
ಏರ್ಪಡಿಸಲಾಗಿದ್ದ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ನಿರ್ಧಿಷ್ಟಗುರಿ
ತುಲುಪಿದಾಗ ಜೀವನ ಸಾರ್ಥಕವಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕು. ಇನ್ನೂ ಕಾಲೇಜಿನಲ್ಲಿ
ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬದ್ಧನಾಗಿದ್ದೇನೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗುರು ಲಿಂಗಪ್ಪ ಮಿಣಜಿಗಿ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಮಾನವಿಯ ಮೌಲ್ಯಗಳು ಅತಿಮುಖ್ಯ.
ಉತ್ತಮವಾದ ಮಾನವಿಯ ಮೌಲ್ಯಗಳನ್ನು ಬೆಳೆಸಿಕೊಂಡು ಇನ್ನೊಬ್ಬರಿಗೆ ಮಾದರಿ ಆಗಬೇಕು ಎಂದರು. ಸರಕಾರಿ ಮಹಿಳಾ ಪದವಿ
ಮಹಾವಿದ್ಯಾಲಯದ ಉಪನ್ಯಾಸಕ ಡಾ|ಶಿವಪುತ್ರ ಸರ್ವೋದಯ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮವಾದ ಗುಣಗಳನ್ನು ಅಳವಡಿಕೊಳ್ಳುವುದರಿಂದ ಮಾತ್ರ ಜೀವನದ ಗುರಿ ಮುಟ್ಟಲು ಸಾಧ್ಯ ಎಂದರು. ಎನ್.ಎಸ್.ಎಸ್ ಅಧಿ ಕಾರಿ ರುದ್ರಗೌಡ ಮಾಲಿಪಾಟಿಲ್ ಮಾತನಾಡಿ, ರಾಷ್ಟ್ರಕ್ಕೆ ಮತ್ತು ಸಮಾಜ ಬೆಳವಣಿಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಚನ್ನಬಸಪ್ಪ ಕುಳಗೇರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಮುಖ್ಯ, ಶಿಸ್ತು ಪಾಲನೆ ಮಾಡುವುದರ ಮೂಲಕ ವಿದ್ಯಾರ್ಥಿಗಳು
ಕಾಲೇಜು ಪೋಷಕರಿಗೆ ಕೀರ್ತಿಯನ್ನು ತರುವಂತಹ ವ್ಯಕ್ತಿಗಳಾಗಬೇಕೆಂದು ಸಲಹೆ ನೀಡಿದರು. ಡಾ| ಸುಭಾಸ್ ಕರಣಿಗಿ, ಶ್ರೀನಿವಾಸರಡ್ಡಿ ಕಂದಕೂರ, ರವಿ ಮಾಲಿಪಾಟೀಲ್, ಉಪನ್ಯಾಸಕ ಎಚ್.ಡಿ. ಹಳ್ಳಿ, ಶಂಕರಲಿಂಗಪ್ಪ ಗೂಳಿ, ಹೊಳೆಯಪ್ಪ ಎಚ್.ಎಸ್, ಸುನೀಲ್ ರಾಠೊಡ್, ಶ್ರೀಮತಿ ರಹತುನ್ನಿಸಾ, ಶ್ರೀಮತಿ ಪಂಕಜ, ಶ್ರೀಮತಿ ಗುರಬಾಯಿಕಟ್ಟಿ, ಕುಮಾರಿ ಶೃತಿ, ಕುಮಾರಿ ಅಂಬಿಕಾ, ಸುಭಾಶ್ಚಂದ್ರ ಮಾನೇಗಾರ ಇದ್ದರು. ಕಾಲೇಜಿನ ಉಪನ್ಯಾಸಕಿ ನಿರ್ಮಲಾ ಸಿನ್ನೂರ ನಿರೂಪಿಸಿದರು. ಬಸವರಾಜ ಮಯೂರ
ಸ್ವಾಗತಿಸಿದರು. ದಶರಥ ಕೆ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ