ಅಧಿಕಾರಿಗಳು ಅಭಿವೃದ್ಧಿಗೆ ಆದ್ಯತೆ ನೀಡಲಿ: ಖಾದ್ರೋಲಿ
Team Udayavani, Apr 9, 2022, 5:39 PM IST
ಗುರುಮಠಕಲ್: ಗ್ರಾಮೀಣ ಅಭಿವೃದ್ಧಿ ಮತ್ತು ರಾಜ್ಯದ ಮಾನವ ಅಭಿವೃದ್ಧಿ ಸೂಚ್ಯಂಕ ವೃದ್ಧಿಸಲು ಗ್ರಾಮೀಣ ಪ್ರದೇಶದಲ್ಲಿ ಜಲ, ಸ್ವಚ್ಛತೆ ಹಾಗೂ ಉದ್ಯೋಗ ಖಾತ್ರಿಗೊಳಿಸಿ ಅಭಿವೃದ್ಧಿಗೆ ಆದ್ಯತೆ ನೀಡುವ ಗುರಿ ಅಧಿಕಾರಿಗಳು ಹೊಂದಿರಬೇಕು ಎಂದು ತಾಪಂ ಇಒ ಎಸ್.ಎಸ್. ಖಾದ್ರೋಲಿ ಹೇಳಿದರು.
ಪಟ್ಟಣದ ತಾಪಂ ಕಾರ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ಎಲ್ಲ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ನೇತೃತ್ವ ವಹಿಸಿ ಅವರು ಮಾತನಾಡಿದರು.
2022-23ನೇ ಸಾಲಿನ ಮಾನವ ದಿನಗಳ ಸೃಜನೆ, ಉದ್ಯೋಗ ಖಾತ್ರಿಗಾಗಿ ಹೆಚ್ಚಿನ ಇ-ಶ್ರಮ ಕಾರ್ಡ್ ಮಾಡಿಸಬೇಕು, ಸರಿಯಾದ ಸಮಯಕ್ಕೆ ಸಂಬಳ ನೀಡಬೇಕು. ಜಿಯೋ ಟ್ಯಾಗಿಂಗ್ ಮತ್ತು ಕಾಮಗಾರಿ ಪೂರ್ಣಗೊಳಿಸಬೇಕು. ಅಲ್ಲದೇ ಪವಿತ್ರ ವನ ಮತ್ತು ನರ್ಸರಿ ಬೆಳವಣಿಗೆ, ಬೂದು ನೀರು ನಿರ್ವಹಣೆಗೆ ಆದ್ಯತೆ ನೀಡುವಂತೆ ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿ ವೈಯಕ್ತಿಕ, ಸಮುದಾಯ ಶೌಚಾಲಯ ಹೆಚ್ಚಿನ ರೀತಿಯಲ್ಲಿ ನಿರ್ಮಿಸಿ ಜನರಲ್ಲಿ ಅರಿವು ಮೂಡಿಸಬೇಕು. ಘನ-ದ್ರವ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ, ಒಣ-ಹಸಿ ಕಸ ವಿಲೇವಾರಿ ವಿಂಗಡಣೆ ಪ್ರಗತಿ, ಶಾಲೆ-ಅಂಗನವಾಡಿ ಶೌಚಾಲಯ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಅಮೃತ ಶಾಲೆ, ಅಮೃತ ಗ್ರಾಪಂಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕಿದೆ. ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಗಳು ಎಲ್ಲರಿಗೂ ಲಭ್ಯವಾಗುವಂತೆ ನಿಗಾವಹಿಸಬೇಕು. ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ಎಲ್ಲ ಪಿಡಿಒಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಗ್ರಾಪಂ ಆಯವ್ಯಯಗಳಿಗೆ ಕರ ವಸೂಲಿ ಕಟ್ಟುನಿಟ್ಟಿನಲ್ಲಿ ವಸೂಲಿ ಮಾಡಬೇಕು ಎಂದು ಇಒ ಆದೇಶಿಸಿದರು.
ಈ ವೇಳೆ ಪಂಚಾಯತಿ ಎಡಿ ಮಲ್ಲಣ್ಣ, ನರೇಗಾ ಎಡಿ ರಾಮಚಂದ್ರ ಬಸೂದೆ, ಟಿ.ಸಿ ಬಸವರಾಜ ಶಿವುಕುಮಾರ, ಎಸ್ಬಿಎಂ ಸಂಯೋಜಕ ನಾರಾಯಣ ಸಿರ್ರಾ, ಪಿಡಿಒಗಳಾದ ರಾಜೇಂದ್ರಕುಮಾರ, ಸೈಯಾದ್ ಅಲಿ, ವಿಜಯಲಕ್ಷ್ಮೀ, ಬಾನುಬೇಗಂ, ಗಾಯತ್ರಿ, ಶೋಭಾ ಪಾಟೀಲ್, ಯಂಕಣ್ಣ, ನಾಗರತ್ನ, ಹನುಮಂತರೆಡ್ಡಿ, ಬ್ರಹ್ಮಯ್ಯಚಾರಿ ಸೇರಿದಂತೆ ಎಲ್ಲ ತಾಂತ್ರಿಕ ಸಹಾಯಕರು, ತಾಪಂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ