ರೈತರು ಮೋಸ ಹೋಗುವ ಮುನ್ನ ಜಾಗೃತರಾಗಲಿ: ಗಲಗಲಿ


Team Udayavani, Dec 8, 2018, 3:47 PM IST

yad-1.jpg

ಯಾದಗಿರಿ: ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಅಪರಿಚಿತರು ಹಲವು ಬಗೆಯಲ್ಲಿ ಜನರನ್ನು ಮೋಸ ಮಾಡಲು ಯತ್ನಿಸುತ್ತಿರುತ್ತಾರೆ. ಅನೇಕ ಕಟ್ಟು ಕಥೆಗಳನ್ನು ಸೃಷ್ಟಿಸುವ ಮೂಲಕ ನಂಬಿಸುತ್ತಾರೆ. ಹಾಗಾಗಿ ಗ್ರಾಹಕರು ಜಾಗೃತರಾಗಿರಬೇಕು ಎಂದು ದೂರ ಸಂಪರ್ಕ ನಿಯಂತ್ರಣಾ ಪ್ರಾಧಿಕಾರ ಸಲಹೆಗಾರ ಶ್ರೀನಿವಾಸ ಎಸ್‌. ಗಲಗಲಿ ಸಲಹೆ ನೀಡಿದರು.

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಶುಕ್ರವಾರ ದೂರ ಸಂಪರ್ಕ ನಿಯಂತ್ರಣಾ ಪ್ರಾಧಿಕಾರದ ಬೆಂಗಳೂರಿನ ಪ್ರಾದೇಶಿಕ ಕಚೇರಿ ವತಿಯಿಂದ ಗ್ರಾಹಕರ ಹಕ್ಕು ಮತ್ತು ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಗ್ರಾಹಕರ ಸಂಪರ್ಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಲವರು ಕರೆ ಮಾಡಿ ನನ್ನ ಮತ್ತು ನಿಮ್ಮ ಮೊಬೈಲ್‌ ಸಂಖ್ಯೆ ಒಂದೇ ರೀತಿ ಇದೆ. ಕೊನೆಯಲ್ಲಿ 198 ಬದಲು 918 ಎಂದು ನಮೂದಾಗಿದೆ. ಅದರ ಒಟಿಎಫ್‌ ಸಂಖ್ಯೆ ನಿಮ್ಮ ಮೊಬೈಲ್‌ಗೆ ಬರುತ್ತದೆ. ಅದನ್ನು ಕೊಡಿ ಎಂದು ಕೇಳುತ್ತಾರೆ. ಗ್ರಾಹಕರು ಒಟಿಎಫ್‌ ಸಂಖ್ಯೆ, ಎಟಿಎಂ ಪಿನ್‌, ಇನ್ನಿತರ ಯಾವುದೇ ಫಾಸ್‌ವರ್ಡ್‌ಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬಾರದು. ತಮ್ಮ ಮೊಬೈಲ್‌ಗ‌ಳಿಗೆ ಬರುವ ಅಪರಿಚಿತ ಕರೆ ಮತ್ತು ಇ-ಮೇಲ್‌, ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಇನ್ನಿತರ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಹೇಳಿದರು.

ಭಾರತದಲ್ಲಿ ಜಗತ್ತಿನ ಎಲ್ಲಾ ದೇಶಗಳಿಗಿಂತ ದೂರವಾಣಿ ಕರೆ ದರ ಕಡಿಮೆ ಇದೆ. ಸುಮಾರು 117 ಕೋಟಿ ದೂರವಾಣಿ/ಮೊಬೈಲ್‌ ಸಂಪರ್ಕ ಹೊಂದಿದ್ದು, ದೇಶದ ಶೇ. 90ರಷ್ಟು ಜನ ಸಂಪರ್ಕ ಪಡೆದಿದ್ದಾರೆ. ನಗರ ಪ್ರದೇಶಗಳಲ್ಲಿ ಶೇ. 100ಕ್ಕೆ ಶೇ. 158ರಷ್ಟು ಮತ್ತು ಗ್ರಾಮೀಣ ಪ್ರದೇಶದಲ್ಲಿ ಶೇ.58ರಷ್ಟು ಜನ ಸಂಪರ್ಕ ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರೀಪೇಯ್ಡ ಗ್ರಾಹಕರು ಆರು ತಿಂಗಳ ಅವಧಿಯಲ್ಲಿನ ಕರೆ/ಎಸ್‌ಎಂಎಸ್‌ ವಿವರಗಳನ್ನು ತಮ್ಮ ಸೇವಾ ಸಂಸ್ಥೆಯಿಂದ ಪಡೆಯಬಹುದು. ಬಿಲ್ಲಿಂಗ್‌ ದೂರುಗಳನ್ನು ನಾಲ್ಕು ವಾರಗಳಲ್ಲಿ ಪರಿಹರಿಸಬೇಕು. ಸೇವೆ ನಿಷ್ಕ್ರಿಯ ಬೇಡಿಕೆಯನ್ನು

7 ದಿನದೊಳಗೆ ಪೂರ್ಣಗೊಳಿಸಬೇಕು. ನಂತರದ ಅವಧಿಗೆ ಯಾವುದೇ ಶುಲ್ಕ ವಿಧಿಸುವ ಹಾಗಿಲ್ಲ. ಸೇವೆ ಒದಗಿಸುವವರು ಗ್ರಾಹಕರ ಸ್ಪಷ್ಟ ಅನುಮತಿಯಿಲ್ಲದೆ ಮೊಬೈಲ್‌ ಡೇಟಾ ಸೇವೆಯನ್ನು ಸಕ್ರಿಯಗೊಳಿಸುವಂತಿಲ್ಲ. ಗ್ರಾಹಕರು ಶುಲ್ಕ ರಹಿತ ಸಂಖ್ಯೆ 1925ಗೆ ಕರೆ ಅಥವಾ ಎಸ್‌ಎಂಎಸ್‌ ಮಾಡುವ ಮೂಲಕ ಡೇಟಾ ಸೇವೆಯನ್ನು ಸಕ್ರಿಯಗೊಳಿಸಬಹುದು ಅಥವಾ ನಿಷ್ಕ್ರಿಯಗೊಳಿಸಬಹುದು ಎಂದು ವಿವರಿಸಿದರು.

ಮೊಬೈಲ್‌ ಪೋರ್ಟಬಿಲಿಟಿ ಗ್ರಾಹಕರಿಗೆ ಅಸ್ತಿತ್ವದಲ್ಲಿ ಇರುವ ತಮ್ಮ ಸಂಖ್ಯೆಯನ್ನು ಉಳಿಸಿಕೊಂಡು ಇನ್ನೊಂದು ಸೇವಾ ಸಂಸ್ಥೆಗೆ ಚಲಿಸುವ ಅವಕಾಶ ಒದಗಿಸುತ್ತದೆ. ಮೊಬೈಲ್‌ ಸಂಪರ್ಕವನ್ನು ಹೊಂದಿದ 90 ದಿನಗಳ ಬಳಿಕವಷ್ಟೇ, ಚಂದಾದಾರರಿಗೆ ಪೋರ್ಟಿಂಗ್‌ ಮನವಿ ಸಲ್ಲಿಸಲು ಅರ್ಹತೆ ದೊರೆಯುತ್ತದೆ ಎಂದು ತಿಳಿಸಿದರು.

ಅನಪೇಕ್ಷಿತ ಸಂದೇಶಗಳ ಮೇಲೆ ನಿಷೇಧ: ವಾಣಿಜ್ಯಾತ್ಮಕ ಸಂದೇಶಗಳು/ಟೆಲಿಮಾರ್ಕೆಟಿಂಗ್‌ ಕರೆಗಳನ್ನು ತಡೆಹಿಡಿಯಲು ಗ್ರಾಹಕರು ತಮ್ಮ ಆದ್ಯತೆಯನ್ನು ನೋಂದಾಯಿಸಲು ಟೋಲ್‌ ಫ್ರೀ ಸಂಖ್ಯೆ 1909ಗೆ ಕರೆ ಮಾಡಬಹುದು ಅಥವಾ ಎಸ್‌ಎಂಎಸ್‌ ಕಳುಹಿಸಬಹುದು. ನೋಂದಣಿಯಾದ ಮೇಲೂ ಸಂದೇಶ ಬಂದಲ್ಲಿ, 3 ದಿನಗೊಳಗಾಗಿ 1909ಗೆ ಕರೆ ಅಥವಾ ಎಸ್‌ಎಂಎಸ್‌ ಮಾಡುವುದರ ಮೂಲಕ ಸರ್ವಿಸ್‌ ಪ್ರೊವೈಡರ್‌ಗೆ ದೂರನ್ನು ಸಲ್ಲಿಸಬಹುದು ಎಂದು ಹೇಳಿದರು. ಮೊಬೈಲ್‌ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು ಟ್ರಾಯ್‌ ಮೂರು ಹೊಸ ಅಪ್ಲಿಕೇಷನ್‌ (ಮೈಕಾಲ್‌, ಮೈಸ್ಪೀಡ್‌ ಮತ್ತು ಡಿ.ಎನ್‌.ಡಿ)ಗಳನ್ನು ಮತ್ತು ವೆಬ್‌ ಪೊರ್ಟಲ್‌ ಅನ್ನು ಪ್ರಾರಂಭಿಸಿದೆ. ಹೊಸ ಬ್ರಾಡ್‌ಕಾಸ್ಟಿಂಗ್‌ ರೆಗ್ಯುಲೇಷನ್‌ ಪ್ರಕಾರ ಕೇಬಲ್‌ ಟಿ.ವಿ ಯವರು ಮಾಸಿಕ 130 ರೂ.ಗೆ 100 ಉಚಿತ ಚಾನಲ್‌ ಗಳನ್ನು ಕೊಡಬೇಕು ಎಂದು ಮಾಹಿತಿ ನೀಡಿದರು.

ಟ್ರಾಯ್‌ ಹಿರಿಯ ಸಂಶೋಧನಾ ಅಧಿಕಾರಿ ಲತಾ ಎಚ್‌.ಸಿ. ಉಪಸ್ಥಿತರಿದ್ದರು. ಅಧಿಕಾರಿಗಳು, ಗ್ರಾಹಕರು, ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಹಕ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.