ಸರ್ಕಾರ ಮಾರಕ ಕೃಷಿ ಕಾಯ್ದೆ ಹಿಂಪಡೆಯಲಿ
Team Udayavani, Mar 3, 2022, 1:26 PM IST
ಶಹಾಪುರ: ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು. ಆದರೆ ಇಲ್ಲಿನ ರಾಜ್ಯ ಸರ್ಕಾರ ಈ ಮಾರಕ ಕಾಯ್ದೆಗಳನ್ನು ಹಿಂಪಡೆಯದಿರುವುದು ಖಂಡನೀಯವಾಗಿದೆ. ಇದನ್ನು ವಿರೋಧಿಸಿ ಕರ್ನಾಟಕದಾದ್ಯಂತ ಐತಿಹಾಸಿಕ ಜಾಥಾ ಆಯೋಜಿಸಲಾಗಿದೆ ಎಂದು ಜನಾಂದೋಲನ ಮಹಾಮೈತ್ರಿಯ ಪ್ರಮುಖ ಎಸ್.ಆರ್. ಹಿರೇಮಠ ತಿಳಿಸಿದರು.
ನಗರದ ಮಾರುತಿ ಮಂದಿರ ಮುಂದುಗಡೆ ಬುಧವಾರ ಜನಾಂದೋಲನ ಮಹಾಮೈತ್ರಿಯ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋರ್ಟ್ನಿಂದ ಸಮಾಜ ಸುಧಾರಣೆ ಮಾಡಲು ಸಾಧ್ಯವಿಲ್ಲ. ಆದರೆ ಸಮಾಜದ ಪರಿವರ್ತನೆಗೆ ಊರುಗೋಲು ಆಗಬಲ್ಲದು. ಹೀಗಾಗಿ ಜನ ಜಾಗೃತಿ ಅಗತ್ಯವಿದೆ. ಕರಾಳ ಕಾಯ್ದೆಗಳ ಕುರಿತು ಪ್ರತಿ ರೈತನಲ್ಲಿ ಅರಿವು ಮೂಡಿಸಬೇಕಿದೆ. ಹಿಂದೆ ಊಳುವವನೇ ಭೂಮಿಯ ಒಡೆಯ ಎಂದು ಹೇಳಲಾಗುತಿತ್ತು. ಆದರೆ ಈಗಿನ ಸರ್ಕಾರ ಉಳ್ಳವನಿಗೆ ಭೂಮಿ ಇಲ್ಲದವನಿಗೆ ಯಾಕೆ ಭೂಮಿ ಎಂಬ ನೀತಿಯಡಿ ಕೃಷಿ ಕಾಯ್ದೆಗಳನ್ನು ರೂಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಣ್ಣ ಮತ್ತು ಅತಿ ಸಣ್ಣ ರೈತರು ತಮ್ಮ ಅಲ್ಪ ಭೂಮಿಯನ್ನು ಕಳೆದುಕೊಂಡು ಕೃಷಿಯಿಂದ ವಂಚಿತರಾಗಲಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 2020 ಹಿಂಪಡೆಯಬೇಕು, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ನಿಯಂತ್ರಣ ಅಭಿವೃದ್ಧಿ) ಕಾಯ್ದೆ 2020 ಹಿಂಪಡೆಯಬೇಕು, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣೆ ಕಾಯ್ದೆ ಹಿಂಪಡೆಯಬೇಕು ಎಂಬುದು ಜಾಥಾದ ಪ್ರಮುಖ ಉದ್ದೇಶವಾಗಿದೆ ಎಂದರು.
ರೈತ ಮುಖಂಡ ಭಾಸ್ಕರರಾವ್ ಮುಡಬೂಳ ಮಾತನಾಡಿ, ಯಾವುದೇ ಸರ್ಕಾರ ಜನ ಹಿತ ಕಾಯ್ದೆಗಳನ್ನು ಜಾರಿಗೆ ತರುವುದನ್ನು ಬಿಟ್ಟು ರೈತ ವಿರೋಧಿ ಶಾಸನಗಳನ್ನು ಜಾರಿಗೊಳಿಸಿದರೆ ಅದರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ರೈತರ ಪಾಲಿನ ಮೂರು ಕಾಯ್ದೆ ಹಿಂಪಡೆದರೆ ಮಾತ್ರ ರೈತರು ನೆಮ್ಮದಿ ಜೀವನ ನಡೆಸಲು ಸಾಧ್ಯ. ರೈತ ವಿರೋಧಿ ಕಾಯ್ದೆಯಿಂದ ಅದರ ಶಾಪ ತಟ್ಟುವುದರಲ್ಲಿ ಅನುಮಾನವಿಲ್ಲ ಎಂದರು.
ಚನ್ನಪ್ಪ ಆನೇಗುಂದಿ, ಖಾಜಾ ಅಸ್ಲಂ ಅಹ್ಮದ್, ಶರಣಪ್ಪ, ಎಸ್.ಎಂ. ಸಾಗರ, ವಿಶ್ವರಾಧ್ಯ ಸತ್ಯಂಪೇಟೆ, ಹಣಮಂತ ಭಂಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ