ಮಕಳು ಸಸಿ ನೆಟ್ಕು ಪೋಷಿಸಲಿ: ಕಂದಕೂರ
Team Udayavani, Jul 23, 2018, 2:33 PM IST
ಯಾದಗಿರಿ: ಹಸಿರು ಸಕಲ ಜೀವರಾಶಿಗಳಿಗೆ ಉಸಿರಾಗಿದೆ ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು. ಅರಕೇರಾ (ಬಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾಮಾಜಿಕ ಅರಣ್ಯ ವಲಯ ಇಲಾಖೆಯಿಂದ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಕೇವಲ ಶೇ. 3ರಷ್ಟಿದ್ದು, ಆದ್ದರಿಂದ ಹೆಚ್ಚಿನ ಸಸಿ ನೆಟ್ಟು ಕಾಡು ಬೆಳೆಸಬೇಕು ಎಂದ ಅವರು, ಪ್ರತಿಯೊಬ್ಬ ಮಗು ತನ್ನ ಹುಟ್ಟುಹಬ್ಬಕ್ಕೆ ಒಂದು ಸಸಿ ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು.
ಅರಣ್ಯಾಧಿಕಾರಿ ತೋಷಣ ಕುಮಾರ ಮಾತನಾಡಿ, ಸಾಮಾಜಿಕ ಅರಣ್ಯ ವಲಯ ಇಲಾಖೆಯಲ್ಲಿ ವಿವಿಧ ಬಗೆ ಸಸಿಗಳು ಲಭ್ಯವಿದ್ದು, ಸಾರ್ವಜನಿಕರು ಅರಣ್ಯವನ್ನು ಬೆಳೆಸಲು ಮುಂದಾಗಬೇಕು ಎಂದರು. ಹೆಚ್ಚಿನ ಅರಣ್ಯ ಪ್ರದೇಶ ಬೆಳೆಸುವುದರಿಂದ ವಾತಾವರಣದಲ್ಲಿನ ಉಷ್ಣಾಂಶ ನಿಯಂತ್ರಣ ಆಗುತ್ತದೆ. ಬೆಳೆಯುತ್ತಿರುವ ನಗರೀಕರಣದಿಂದ ಪರಿಸರದಲ್ಲಿ ಉಸಿರಾಡಲು ಶುದ್ಧಗಾಳಿಯೂ ಸಿಗದಂತಾಗಿದೆ
ಎಂದರು.
ಈ ವೇಳೆ ಸಹಾಯಕ ಅರಣ್ಯಾಧಿಕಾರಿ ಮುದಣ್ಣ ಡಾಂಗೆ, ಮಹೇಂದ್ರ ಪಾಟೀಲ, ಮುಖ್ಯಗುರು ವಿಶ್ವನಾಥರಡ್ಡಿ ಪ್ರಭುಗೌಡ ಅರಿಕೇರಾ, ಭೋಜನಗೌಡ ಯಡಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ