ಕೋಲಿ ಸಮಾಜ ಪ್ರಗತಿ ಕಾಣಲಿ


Team Udayavani, Aug 30, 2018, 2:38 PM IST

yad-1.jpg

ಶಹಾಪುರ: ಬಹು ಸಂಖ್ಯಾತರಾಗಿದ್ದ ಕೋಲಿ ಸಮಾಜ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಸಮಾಜದ ಪ್ರಮುಖರು ಶೈಕ್ಷಣಿಕವಾಗಿ ಪ್ರಗತಿಯತ್ತ ಸಾಗುವ ಯೋಜನೆ ರೂಪಿಸುವ ಮೂಲಕ ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಹಳಿಸಗರ ಭಾಗದ ನಿಜಶರಣ ಅಂಬಿಗರ ಚೌಡಯ್ಯನವರ ಮಠದ ಆವರಣದಲ್ಲಿ ತಾಲೂಕು ಕೋಲಿ
ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ನೂತನ ಶಾಸಕರಿಗಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಸ್ತುತ ಬದಲಾಗುತ್ತಿರುವ ಸಮಾಜದಲ್ಲಿ ಕೋಲಿ ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಮುನ್ನಡೆಗೆ ಶ್ರಮಿಸಬೇಕು. ನನ್ನ ಅವಧಿಯಲ್ಲಿ ಅಂದಾಜು ಒಂದು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬೃಹತ್‌ (ಕೋಲಿ) ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಭವನ ನಿರ್ಮಿಸುವ ಭರವಸೆ ನೀಡಿದರು.

ಕೆ.ಎ.ಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿರುವ ಡಾ| ಎಂ.ಎಸ್‌. ಶಿರವಾಳ ಮಾತನಾಡಿ, ಸತತ ಅಧ್ಯಯನದಿಂದ
ಮಾತ್ರ ಉನ್ನತ ಹುದ್ದೆಗೆ ಏರಲು ಸಾಧ್ಯ. ನಮ್ಮ ತಂದೆಯವರು ಅನಕ್ಷರಸ್ಥರಾಗಿದ್ದರೂ ಸಹಿತ ನನಗೆ ಸದಾಕಾಲ ಚೆನ್ನಾಗಿ ಓದುವಂತೆ ಪ್ರೇರೇಪಣೆ ನೀಡುವುದರ ಜೊತೆಗೆ ಸಾಲ ಮಾಡಿಯಾದರೂ ಉತ್ತಮ ಪುಸ್ತಕಗಳನ್ನು ಕೊಡಿಸುತ್ತಿದ್ದರು. 

ಅವರ ಈ ಪ್ರೋತ್ಸಾಹದಿಂದಲೇ ಈ ಸಾಧನೆ ಸಾಧ್ಯವಾಯಿತು. ಮುಂದೆ ಸಂದರ್ಭಾನುಸಾರ ಕಾನೂನಿನಡಿಯಲ್ಲಿ ಸಮಾಜದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಎ.ಪಿ.ಎಂ.ಸಿ. ಕಾರ್ಯದರ್ಶಿ ರಂಗನಾಥ ದೇಸಾಯಿ ಮಾತನಾಡಿ, ಸಮಾಜ ಬಾಂಧವರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜದ ಸಂಘಟನೆಗೆ
ಮುಂದಾಗಬೇಕು. ಸಮಾಜದ ಬೆಳವಣಿಗೆಗೆ ಯುವ ಸಮುದಾಯ ಟೊಂಕಕಟ್ಟಿ ನಿಲ್ಲಬೇಕು. ಯುವಕರಿಂದ ಯಾವ
ಕೆಲಸವಾದರೂ ಸಾಧ್ಯವಿದೆ. ಒಗ್ಗಟ್ಟಿನಲ್ಲಿ ಬಲವಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹಣಮಂತಪ್ಪ ನಾಟೇಕಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಎಸ್‌.ಕೆ. ಟಕ್ಕಳಕಿ ಅವರನ್ನು ಸನ್ಮಾನಿಸಲಾಯಿತು. ಮಲ್ಲಪ್ಪ ಬಗಲಿ ಅಧ್ಯಕ್ಷತೆ ವಹಿಸಿದ್ದರು. ಮಹಾದೇವಪ್ಪ ಸಾಲಿಮನಿ, ಸುರೇಶ
ತಡಿಬಿಡಿ, ಗೋಪಾಲ ಸುರಪುರ, ರಾಮಣ್ಣ ನಯ್ಕೋಡಿ, ಮಾನಪ್ಪ ಸೂಗೂರ, ಸಣ್ಣ ನಿಂಗಪ್ಪ ನಯ್ಕೋಡಿ, ಅಯ್ಯಣ್ಣ ಕನ್ಯೆಕೋಳೂರ, ಮರೆಣ್ಣ ಮಿಲಿ, ನಾಗಪ್ಪ ತಹಶೀಲ್ದಾರ್‌, ರಾಮಾಂಜನೇಯ, ಶಾಂತಪ್ಪ ಗೊಂದೆನೂರ, ಮಲ್ಕಪ್ಪ
ನಾಶಿ, ದೇವಿಂದ್ರಪ್ಪ ದೊಡ್ಡಮನಿ, ಯಮನಪ್ಪ ಚಿಗರಿ ಇದ್ದರು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ
ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರೋತ್ಸಾಹಿಸಲಾಯಿತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.