ತಾಲೂಕು ಆಸ್ಪತ್ರೆಗೆ ಶಾಸಕ ಹೂಲಗೇರಿ ಭೇಟಿ
Team Udayavani, Apr 15, 2020, 4:32 PM IST
ಲಿಂಗಸುಗೂರು: ವಾಂತಿ-ಭೇದಿಯಿಂದ ಚಿಕಿತ್ಸೆ ಪಡೆಯುವವರನ್ನು ಶಾಸಕ ಹೂಲಗೇರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಲಿಂಗಸುಗೂರು: ತಾಲೂಕಿನ ದೇವರ ಭೂಪುರ ಗ್ರಾಮದಲ್ಲಿ ವಾಂತಿ ಭೇದಿ ಯಿಂದಾಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರನ್ನು ಶಾಸಕ ಡಿ.ಎಸ್. ಹೂಲಗೇರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಗ್ರಾಮದಲ್ಲಿ ಶುದ್ಧ ನೀರು ಇಲ್ಲದಾಗಿದೆ. ಕಲುಷಿತ ನೀರೇ ಕುಡಿಯುವಂತಾಗಿದೆ. ಪ್ರತಿ ವರ್ಷ ಬೇಸಿಗೆಯಲ್ಲಿ ನಮಗೆ ಇದೇ ಸಮಸ್ಯೆಯಾಗಿದೆ. ನಮ್ಮ ಗೋಳು ಯಾರು ಕೇಳುತ್ತಿಲ್ಲ, ಶುದ್ಧ ನೀರು ಪೂರೈಸುವಲ್ಲಿ ಗ್ರಾಪಂ-ತಾಪಂ ಆಡಳಿತ ಸಂಪೂರ್ಣ ನಿರ್ಲಕ್ಷ್ಯ ತಾಳಿದೆ ಎಂದು ಗ್ರಾಮಸ್ಥರು ಶಾಸಕರಲ್ಲಿ ಅಳಲು ತೋಡಿಕೊಂಡರು.
ಇದಕ್ಕೆ ಗರಂ ಆದ ಶಾಸಕ ಹೂಲಗೇರಿ, ಬಾವಿ ಸ್ವಚ್ಛತೆ ಮಾಡೋಕೆ ನಿಮಗೇನು ತೊಂದರೆಯಾಗಿದೆ. ಶುದ್ಧ ನೀರು ಪೂರೈಸಲು ಎಷ್ಟು ವರ್ಷ ಬೇಕು. ಗ್ರಾಮೀಣ ಭಾಗದ ಜನರ ಕಷ್ಟ ನಿಮಗೆ ಅರ್ಥವಾಗುವುದಿಲ್ಲವೇ? ಎಂದು ಪ್ರಶ್ನಿಸಿ ಕೂಡಲೇ ಅಲ್ಲಿನ ಸಮಸ್ಯೆ ಪರಿಹರಿಸಬೇಕೆಂದು ಸ್ಥಳದಲ್ಲಿದ್ದ ತಾಪಂ ಇಒ ಪಂಪಾಪತಿ ಹಿರೇಮಠ ಅವರನ್ನು ತರಾಟೆಗೆ ತೆಗೆದುಕೊಂಡರು.
ದೇವರಭೂಪುರ ಗ್ರಾಮದಲ್ಲಿ ಕುಲಷಿತ ನೀರು ಕುಡಿದು ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು 40 ಜನರು ತೀವ್ರ ಅಸ್ವಸ್ಥರಾಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಇದರಲ್ಲಿ 8 ಜನ ಗುಣಮುಖರಾಗಿದ್ದಾರೆ. ಇನ್ನುಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್ ಚಾಮರಾಜ್ ಪಾಟೀಲ್, ಡಾ| ಲಕ್ಷ್ಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಮಹ್ಮದ್ ರಫಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ