ಕುರಿ ಸಾಕಾಣಿಕೆದಾರರಿಗೆ ಅರಣ್ಯಾಧಿಕಾರಿಗಳಿಂದ ಕಿರುಕುಳ: ಕ್ರಮಕ್ಕೆ ಆಗ್ರಹ
Team Udayavani, Oct 1, 2020, 5:47 PM IST
ಲಿಂಗಸುಗೂರು: ಮಸ್ಕಿ ತಾಲೂಕಿನ ಹೂವಿನಭಾವಿ ಗ್ರಾಮದ ಕುರಿ ಸಾಕಾಣಿಕೆದಾರರಿಗೆ ಕಿರುಕುಳ ನೀಡುತ್ತಿರುವ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಮುಖಂಡರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿಯೇ ಹೂವಿನಭಾವಿ ಗ್ರಾಮದಲ್ಲಿ ಅತಿ ಹೆಚ್ಚು ಕುರಿ ಸಾಕಾಣಿಕೆದಾರರಿದ್ದಾರೆ. 100 ಕುಟಂಬಕ್ಕೂ ಹೆಚ್ಚು ಕುಟುಂಬಗಳು ಕುರಿ ಸಾಕಾಣಿಕೆಯನ್ನೇ ಜೀವನಾಧಾರ ಮಾಡಿಕೊಂಡಿವೆ. ಆದರೆ ಕುರಿ ಮೇಯಸಲು ಇಲ್ಲಿನ ಕುರಿಗಾಹಿಗಳಿಗೆ ಭಾರೀ ತೊಂದರೆಯಾಗಿದೆ. ಅರಣ್ಯ ಇಲಾಖೆಗೆ ಸೇರಿದ ಯಾವುದೇ ಭೂಮಿ ಇಲ್ಲ. ಸರ್ಕಾರಿ ಪರಂಪೂಕಗೆ ಸೇರಿ ಸ.ನ.32ರಲ್ಲಿ 369 ಎಕರೆ ಹಾಗೂ ಸ.ನಂ 44ರಲ್ಲಿ 236 ಎಕರೆ ಹುಲ್ಲುಗಾವಲು ಭೂಮಿ ಇದೆ. ಆದರೆ ಇಲ್ಲಿ ಕುರಿ ಮೇಯಿಸಲು ಹೋದರೆ ಅರಣ್ಯಾಧಿಕಾರಿಗಳು ಅನಗತ್ಯ ತೊಂದರೆ ನೀಡುತ್ತಿದ್ದಾರೆ. ಇದಲ್ಲದೆ ಹಿಂದುಳಿದ ವರ್ಗದ ಕೆಲವರಿಗೆ ತಲಾ 4 ಎಕರೆ ಮಂಜೂರಾಗಿದೆ ಪಹಣಿಯಲ್ಲೂ ಕೂಡಾ ಹೆಸರು ಇರುವ ರೈತರಿಗೆ ಸಾಗುವಳಿ ನಿಲ್ಲಿಸಿ ಅರಣ್ಯ ಇಲಾಖೆಯವರು ಗಿಡಗಳನ್ನು ನೆಡುತ್ತಿದ್ದಾರೆ. ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಅರಣ್ಯ, ಕಂದಾಯ ಹಾಗೂ ಫಲಾನುಭವಿಗಳ ಜಂಟಿ ಸಭೆ ಕರೆದು ಸಮಸ್ಯೆ ಇತ್ಯರ್ಥ ಮಾಡುವಂತೆ ಆಗ್ರಹಿಸಿದರು.
ಕಾರ್ಮಿಕ ಸಂಘದ ಮುಖಂಡ ಆರ್.ಮಾನಸಯ್ಯ, ರೈತ ಸಂಘದ ಅಧ್ಯಕ್ಷ ಸಂತೋಷ, ಮುಖಂಡರಾದ ಅಮೀರ್ ಅಲಿ, ಡಿ.ಕೆ.ಲಿಂಗಸುಗೂರು. ಆಜಪ್ಪ ಹಟ್ಟಿ, ಬೀರಪ್ಪ ಪೂಜಾರಿ, ಅಂಬಣ್ಣ ಪೂಜಾರಿ, ಸಕ್ರೆಪ್ಪ ಜವಳಗೇರಾ, ಮಾಳಪ್ಪ ಹಟ್ಟಿ, ಶಿವಗ್ಯಾನಪ್ಪ ಪೂಜಾರಿ, ಬಾಲಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್