ನೀರಿನ ಸಮಸ್ಯೆಯಾದರೆ ಪಿಡಿಒಗಳೇ ಹೊಣೆ
Team Udayavani, Apr 17, 2020, 3:57 PM IST
ಲಿಂಗಸುಗೂರು: ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇಒ ಪಂಪಾಪತಿ ಹಿರೇಮಠ ಮಾತನಾಡಿದರು.
ಲಿಂಗಸುಗೂರು: ತಾಲೂಕಿನಲ್ಲಿ ಕುಡಿಯುವ ಸಮಸ್ಯೆ ಉದ್ಭವಿಸಿದರೆ ಅದಕ್ಕೆ ನಿಮ್ಮನ್ನೇ ನೇರ ಹೊಣೆಯನ್ನಾಗಿ ಮಾಡಲಾಗುವುದು ಎಂದು ತಾಪಂ ಇಒ ಪಂಪಾಪತಿ ಹಿರೇಮಠ ಪಿಡಿಒಗಳಿಗೆ ಎಚ್ಚರಿಸಿದ್ದಾರೆ.
ತಾಪಂ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪಿಡಿಒ, ಜೆಇ, ಕಂದಾಯ ನಿರೀಕ್ಷಕರ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಭೀತಿ ಹಾಗೂ ಬೇಸಿಗೆ ಇರುವುದರಿಂದ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೇ ಸ್ಪಂದಿಸಬೇಕು. ಕಳೆದ ವರ್ಷ ಕುಡಿವ ನೀರಿನ ಸಮಸ್ಯೆ ಇದ್ದ ಗ್ರಾಮಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಒಂದು ವೇಳೆ ಹೊಸ ಬೋರ್ವೆಲ್ ಕೊರೆಯುವ ಅಗತ್ಯವಿದ್ದಲ್ಲಿ ಭೂ ವಿಜ್ಞಾನಿಗಳು ಸೂಚಿಸುವ ಕಡೆಗೆ ಬೋರ್ವೆಲ್ ಕೊರೆಸಬೇಕು. ಜಲ ಮೂಲಗಳು ಸಿಗದಿದ್ದಲ್ಲಿ ಖಾಸಗಿ ಬೋರ್ ವೆಲ್ಗಳಿಂದ ನೀರಿನ ವ್ಯವಸ್ಥೆ ಕಲ್ಪಿಸಲು ಮುಂದಾಗಿ ಎಂದರು. ಈ ವೇಳೆ ತಹಶೀಲ್ದಾರ್ ಚಾಮರಾಜ ಪಾಟೀಲ್, ಪಿಡಿಒ ಸೇರಿದಂತೆ ಕಂದಾಯ ನಿರೀಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ