ದೋರನಹಳ್ಳಿಯಲ್ಲಿ ಜಾನುವಾರು ಚಿಕಿತ್ಸಾ ಶಿಬಿರ
Team Udayavani, Sep 1, 2020, 6:34 PM IST
ಶಹಾಪುರ: ತಾಲೂಕಿನಾದ್ಯಂತ ಜಾನುವಾರುಗಳು ಲಂಪಿ ಚರ್ಮ ರೋಗ ಬಾಧೆಯಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಗ್ರಾಮದಲ್ಲಿ ಉಚಿತ ಜಾನುವಾರುಗಳ ಚಿಕಿತ್ಸಾ ಶಿಬಿರ ನಡೆಸಲಾಗುತ್ತಿದೆ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಷಣ್ಮುಖ ಗೊಂಗಡಿ ತಿಳಿಸಿದರು.
ತಾಲುಕಿನ ದೋರನಹಳ್ಳಿ ಗ್ರಾಮದಲ್ಲಿಸೋಮವಾರ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಹಮ್ಮಿಕೊಂಡ ಉಚಿತ ಜಾನುವಾರು ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು. ದೋರನಹಳ್ಳಿಯಲ್ಲಿ ಕಳೆದ ವಾರ ಎರಡು ಎತ್ತು ಮೃತಪಟ್ಟಿದ್ದು, ಈ ಕುರಿತು ಮಾಹಿತಿ ಪಡೆಯಲಾಗಿದೆ. ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ಜಾನುವಾರುಗಳಿಗೆ ಲಂಪಿ ಚರ್ಮ ರೋಗ ಕಾಣಿಸಿಕೊಂಡಿದೆ. ಇದು ಸಾಂಕ್ರಾಮಿಕ ಕಾಯಿಲೆ ಆಗಿದ್ದು, ಇದಕ್ಕೆ ಸಮರ್ಪಕ ಔಷಧಿ ಇಲ್ಲ. ಮೈಮೇಲೆ ಗುಳ್ಳೆ ಬಂದ, ನಿಶ್ಯಕ್ತವಾದ ಮತ್ತು ಆಹಾರ, ಮೇವು ಸೇವಿಸದ ಜಾನುವಾರುಗಳನ್ನು ಪ್ರತ್ಯೇಕವಾಗಿ ಕಟ್ಟಿ ಸೂಕ್ತ ಚಿಕಿತ್ಸೆ ನೀಡಿದಲ್ಲಿ ಶೀಘ್ರ ಗುಣಮುಖ ಆಗುತ್ತವೆ. ರೈತರು ಭಯಪಡಬೇಕಿಲ್ಲ. ಜಾನುವಾರುಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚುವ ಔಷಧ ನೀಡಲಾಗುತ್ತಿದೆ. ರೈತರು ತಮ್ಮ ಜಾನುವಾರುಗಳ ಆರೋಗ್ಯ ಪರೀಕ್ಷಿಸಬೇಕು ಎಂದರು.
ಇದೇ ವೇಳೆ 65 ಜಾನುವಾರುಗಳಿಗೆ ಲಿಂಪಿ ಚರ್ಮ ಕಾಯಿಲೆ ತಗುಲಿರುವುದು ಪತ್ತೆ ಆಯಿತು. ಅವುಗಳಿಗೆ ಸಮರ್ಪಕ ಚಿಕಿತ್ಸೆ ನೀಡಲಾಯಿತು. ಶಿಬಿರದಲ್ಲಿ 200ರಿಂದ 250 ಜಾನುವಾರುಗಳಿಗೆ ಖನಿಜಾಂಶ ಔಷಧ, ಮಾತ್ರೆ ಮತ್ತು ಇಂಜೆಕ್ಷನ್ ನೀಡಲಾಯಿತು. ಪಶು ವೈದ್ಯಾಧಿಕಾರಿ ಡಾ| ವಿಶ್ವನಾಥ ಬಾಳಿ, ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಫಕ್ರುದ್ದೀನ್, ಪಶು ವೈದ್ಯಕೀಯ ಪರೀಕ್ಷಕರಾದ ಮಾಶಪ್ಪ, ಶಿವಶರಣಪ್ಪ ಸಾವಳಗಿ, ಹೈದರಲಿ ಹಾಗೂ ಇಲಾಖೆ ಸಿಬ್ಬಂದಿ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ