ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ ಅರಿವು ಮೂಡಿಸಿ
Team Udayavani, Feb 10, 2018, 5:40 PM IST
ಯಾದಗಿರಿ: ವಿಜ್ಞಾನ ಕ್ಷೇತ್ರದಲ್ಲಿ ದೇಶ ಮುಂದುವರೆದ ರಾಷ್ಟ್ರವಾಗಬೇಕಾದರೆ, ಮಕ್ಕಳಲ್ಲಿ ತಂತ್ರಜ್ಞಾನದ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಆಗಿರುತ್ತದೆ ಎಂದು ಮುಖ್ಯ ಶಿಕ್ಷಕಿ ದೀಪಿಕಾ ರೆಡ್ಡಿ ಹೇಳಿದರು.
ನಗರದ ಪಿ.ಎಸ್.ಡಿ ಜೈನ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿ, ಒಂದು ವಿದ್ಯಾಸಂಸ್ಥೆ ಹಾಗೂ ಆ ಸಂಸ್ಥೆಯಲ್ಲಿ ಓದುತ್ತಿರುವ ಮಕ್ಕಳನ್ನು ಬೆಳೆಸುವಲ್ಲಿ ಶಿಕ್ಷಕರು ಮನಃ ಪೂರ್ವಕವಾಗಿ ಶ್ರಮಿಸಬೇಕು.
ಅಂದಾಗ ಮಾತ್ರ ಶಿಕ್ಷಕ ಎನ್ನುವ ಪದಕ್ಕೆ ಒಂದು ಅರ್ಥ ಬರುತ್ತದೆ ಎಂದು ಹೇಳಿದರು.
ಈ ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ಹೆಚ್ಚಿನ ಪ್ರೊತ್ಸಾಹ ತುಂಬುವಲ್ಲಿ ಶಿಕ್ಷಕಿಯರಾದ ಕುಮುದಾ ದಿನೇಶ, ಸಬಿನಾ ಡೆವಿಡ್, ಜೋಸ್ನಾಕುಮಾರಿ, ಸರಳಾ ಅರುಣ, ಶೃತಿ ಹಿರೇಮಠ, ವಿದ್ಯಾ ಶೆಟ್ಟಿ, ಲತಾ ನ್ಯಾಮಗೌಡ, ನೀತು ಪಾಂಡೆ, ರೂಪಾ ಹುಜರತಿ ಮತ್ತಿತರರು ಪ್ರಮುಖ ಪಾತ್ರ ವಹಿಸಿದ್ದರು.
ಪ್ರಾಂಶುಪಾಲ ಬಾಬು ಇಮ್ಯಾನ್ಯುವೆಲ್ ಅವರು ಶಿಕ್ಷಕಿಯರ ಈ ಒಂದು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಮ್ಮ ಮಕ್ಕಳು ಭಾಗವಹಿಸಿ, ಅವರುಗಳು ತಯಾರಿಸಿರುವ ಮಾದರಿಗಳನ್ನು ವೀಕ್ಷಿಸಿದ ಪಾಲಕ ಪೋಷಕರು ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಹಲವು ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ