ಶ್ರೀರಾಮ ಮಂದಿರ ರಾಷ್ಟ್ರ ಮಂದಿರವಾಗಲಿ: ಮೂರ್ತಿಜಿ
ಕಾನೂನಿನ ಹೋರಾಟದ ಮೂಲಕ ಇಂದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ.
Team Udayavani, Jan 12, 2021, 6:53 PM IST
ಸೈದಾಪುರ: ದೇಶದ ಪ್ರತಿಯೊಬ್ಬರ ಮನೆ ಮನ ಸ್ಪಂದನೆಯಿಂದ ನಿಧಿ ಸಂಗ್ರಹ ಮಾಡುವುದರ ಮೂಲಕ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರವು ರಾಷ್ಟ್ರ ಮಂದಿರವಾಗಿ ನಿರ್ಮಾಣವಾಗಬೇಕು ಎಂದು ನಿಧಿ ಸಮರ್ಪಣಾ ಅಭಿಯಾನದ ಜಿಲ್ಲಾ ಪ್ರಮುಖ ಮೂರ್ತಿಜಿ ಹೇಳಿದರು.
ಪಟ್ಟಣದ ಎಕ್ಸ್ಪರ್ಟ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಹೋಬಳಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಮ ಮಂದಿರ ನಿರ್ಮಾಣಕ್ಕಾಗಿ 492 ವರ್ಷಗಳ ಹೋರಾಟ ಮತ್ತು ಸುಮಾರು 4 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಪ್ರಾಣ ನೀಡಿದ್ದಾರೆ. ಹಲವು ವರ್ಷಗಳ ಕಾನೂನಿನ ಹೋರಾಟದ ಮೂಲಕ ಇಂದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ. ಈಗಾಗಲೇ ದೇಶಾದ್ಯಂತ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಜ.15ರಿಂದ ಫೆ.5ರ ವರೆಗೆ ಅಭಿಯಾನ ಶುರುವಾಗಿದೆ.
ಸೈದಾಪುರ ಹೋಬಳ್ಳಿಯಲ್ಲಿ ಜ.23ರಂದು ಪ್ರತಿ ಗ್ರಾಮಗಳಲ್ಲಿ ಏಕಕಾಲದಲ್ಲಿ ಈ ಅಭಿಯಾಯನಕ್ಕೆ ಚಾಲನೆ ನೀಡುವುದರ ಮೂಲಕ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜೇಂದ್ರ ಮಾತನಾಡಿದರು. ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಕ್ಯಾತ್ನಾಳ್, ಪ್ರಕಾಶಗೌಡ ಸೈದಾಪುರ, ನಿಧಿ ಸಮರ್ಪಣಾ ಅಭಿಯಾನದ ತಾಲೂಕು ಪ್ರಮುಖ ಮಲರೆಡ್ಡಿ, ಹೋಬಳಿ ಪ್ರಮುಖ ಭೀಮಣ್ಣ ಮಡಿವಾಳಕರ್, ರವಿ ಪಾಟೀಲ್, ರಾಜು ದೊರೆ, ಬಸು ನಾಯಕ್, ಪ್ರೇಮನಾಥ ಕದಂ, ರಾಘವೇಂದ್ರ ಕಲಾಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?