ಶುದ್ಧ ಕುಡಿಯುವ ನೀರಿಗಾಗಿ ಮೇದಕ್‌ ಗ್ರಾಮಸ್ಥರ ಪರದಾಟ


Team Udayavani, Apr 20, 2022, 5:52 PM IST

20water

ಗುರುಮಠಕಲ್‌: ಬೇಸಿಗೆ ಬಂದಿದೆ. ಎಲ್ಲ ಕಡೆ ನೀರಿನ ಹಾಹಾಕಾರ ಎದ್ದಿದೆ. ಶುದ್ಧ ನೀರಿಗಾಗಿ ಪರದಾಡುವ ಸ್ಥಿತಿ ಹಾಗೂ ಇದ್ದ ನೀರಿನ ಮೂಲವನ್ನು ಸ್ವಚ್ಛಗೊಳಿಸದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಾಲಿನ್ಯ ನೀರು ಕುಡಿಯುವ ದುಸ್ಥಿತಿ ಗ್ರಾಮದ ಜನರಿಗೆ ಬಂದಿದೆ.

ಹೌದು. ಸಮೀಪದ ಮೇದಕ್‌ ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರಿನ ಮೂಲವಾಗಿ ಬಾವಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಕಳೆದ 20 ವರ್ಷಗಳಿಂದ ಊರಿನ ಹೊರವಲಯದಲ್ಲಿರುವ ಭೂತನಾಥೇಶ್ವರ ದೇವಸ್ಥಾನ ಮುಂಭಾಗದಲ್ಲಿ ಬಾವಿಯಿದ್ದು, ಈ ಬಾವಿಯ ನೀರೆ ಗ್ರಾಮದವರಿಗೆ ಕುಡಿಯುವ ನೀರಿನ ಆಧಾರವಾಗಿದೆ.

ಬಾವಿಯು ಭತ್ತದ ಚಿಲುಮೆಯಾಗಿದ್ದು, ಸದಾ ನೀರು ಬಾವಿಯಲ್ಲಿರುತ್ತದೆ. ಕಳೆದ 15 ವರ್ಷಗಳ ಹಿಂದೆ ಗ್ರಾಪಂ ಈ ಬಾವಿಯ ನೀರನ್ನು ಊರಿನ ಜನರಿಗೆ ಕುಡಿಯಲು ಅನುಕೂಲಕ್ಕಾಗಿ ಮನೆಮನೆಗಳಿಗೆ ಸರಬರಾಜು ಮಾಡತೊಡಗಿದೆ. ಆದರೆ ಬಾವಿ ನೋಡಿದರೆ ಪಾಚಿಯಿಂದ ಆವರಿಸಿಕೊಂಡಿದೆ. ದೇವಸ್ಥಾನದ ಆವರಣದಲ್ಲಿ ಇರುವ ಕಾರಣ ಮತ್ತು ಜನರು ಪೂಜೆ ವಸ್ತುಗಳನ್ನು ಬಾವಿಯಲ್ಲಿ ಬೀಸಾಕುತ್ತಾರೆ. ದೇವಸ್ಥಾನದಲ್ಲಿ ನಡೆಯುವ ಅನ್ನದಾಸೋಹದ ಪ್ಲಾಸ್ಟಿಕ್‌ ಪಾತ್ರೆಗಳನ್ನು ಬಾವಿಯಲ್ಲಿ ಹಾಕುತ್ತಾರೆ. ಇದರಿಂದ ಇದೇ ನೀರನ್ನು ಜನರು ಕುಡಿಯಬೇಕಾಗಿದೆ.

ಅಶುದ್ಧವಾದ ನೀರಿನ ಸೇವನೆಯಿಂದ ಗ್ರಾಮದ ಅನೇಕ ಜನರು ಕಾಲರ, ಆಮಶಂಕೆ ಮುಂತಾದ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ನಿರ್ದೇಶನಗಳಿವೆ. ಬಾವಿಯ ಸುರಕ್ಷತೆಗಾಗಿ ಹಾಗೂ ಗ್ರಾಪಂನ ನರೇಗಾ ಯೋಜನೆಯಡಿಯಲ್ಲಿ ಬಾವಿ ಸ್ವಚ್ಛಗೊಳಿಸುವ ಯೋಜನೆ ಹಮ್ಮಿಕೊಳ್ಳಬೇಕು ಎಂದು ಗ್ರಾಮಸ್ಥರು ಹಲವು ಸಲ ಗ್ರಾಪಂ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗುತ್ತಿಲ್ಲ.

ಕಳೆದ 10 ವರ್ಷಗಳಿಂದ ಮನವಿ ಕೊಟ್ಟ ಮೇಲೆ ಮೇಲಾಧಿಕಾರಿಗಳು ಬಂದು ವೀಕ್ಷಣೆ ಮಾಡುತ್ತಾರೆ, ಬಾವಿ ಸ್ವಚ್ಛಗೊಳಿಸಿ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಲಾಗುವುದು ಎಂದು ಭರವಸೆ ನೀಡಿ ಹೋಗುತ್ತಾರೆ ಹೊರತು ಯಾವುದೇ ಕೆಲಸವಾಗುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಅಧಿಕಾರ ಸ್ವೀಕರಿಸಿ ಕೆಲವೇ ದಿನವಾಗಿದೆ. ಇಂಟರ್‌ನೆಟ್‌ ಸಮಸ್ಯೆಯಿಂದ ನರೇಗಾ ಅಡಿಯಲ್ಲಿ ಸ್ವತ್ಛಗೊಳಿಸುವ ಕೆಲಸ ಮಾಡಲಾಗುತ್ತಿಲ್ಲ. ಆದರೂ ಶುದ್ಧ ನೀರು ಜನರಿಗೆ ಒದಗಿಸಲು ಪ್ರಯತ್ನಿಸುತ್ತೇನೆ. -ರಾಮಪ್ಪ, ಪಿಡಿಒ ಮೇದಕ್‌

ಬಾವಿಯ ನೀರೇ ಜನರಿಗೆ ಕುಡಿಯಲು ಆಧಾರವಾಗಿದೆ. ಬಾವಿ ಹೊಲಸಿನಿಂದ ಕೂಡಿದ್ದು, ಇದನ್ನು ಸ್ವತ್ಛಗೊಳಿಸಲು ಗ್ರಾಪಂಗೆ ಮನವಿ ನೀಡಿದರೂ ಪ್ರಯೋಜನವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳದಿದ್ದಾರೆ ಗ್ರಾಪಂಗೆ ಮುತ್ತಿಗೆ ಹಾಕಲಾಗುವುದು. -ಸುಭಾಷ ಸಜ್ಜನ, ಬಿಜೆಪಿ ಮುಖಂಡ ಮೇದಕ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.