ಪ್ರಾಥಮಿಕ ಶಾಲೆಗೆ ಸಿಇಒ ಭೇಟಿ


Team Udayavani, Dec 6, 2018, 3:00 PM IST

yad-3.jpg

ಶಹಾಪುರ: ವಿದ್ಯಾರ್ಥಿಗಳ ವಿಕಾಸಕ್ಕೆ ಅವರಲ್ಲಿ ಮೌಲ್ಯಯುಕ್ತ ಗುಣ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಈ ದಿಸೆಯಲ್ಲಿ ನಿರಂತರ ಪ್ರಯತ್ನ ಅಗತ್ಯವೆಂದು ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಕವಿತಾ ಮನ್ನಿಕೇರಿ ತಿಳಿಸಿದರು.

ಗಾಂಧಿ ಚೌಕ್‌ ಬಡಾವಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಶಾಲಾ ತರಗತಿ ವೀಕ್ಷಿಸಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಹಲವು ಪ್ರಶ್ನೆ ಕೇಳಿದರು. ವರ್ಗ ಕೋಣೆಯಲ್ಲಿನ ಮಾಹಿತಿ ಪಟಗಳನ್ನು ವೀಕ್ಷಿಸಿದರು. ಕಪ್ಪು ಹಲಗೆ ಹೆಚ್ಚಾಗಿ ಬಳಸಬೇಕು ಎಂದು ಶಿಕ್ಷಕರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸಿ.ಆರ್‌.ಸಿ, ಜಗಧೀಶ ಗೋಟ್ಲಾ, ಸಿರಾಜ್‌.ಕೆ. ಮುಖ್ಯಗುರು ಮಲ್ಕಪ್ಪ ಮತ್ತು ಶಿಕ್ಷಕರು ಇದ್ದರು. 

ಶಿಸ್ತು ಕಾಣದಿದ್ದರೆ ಕಠಿಣ ಕ್ರಮ ಪಟ್ಟಣದ ದೇವಿ ನಗರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿದ ಜಿಪಂ ಸಿಇಒ ಕವಿತಾ ಮನ್ನಿಕೇರಿ ಅವರು, ಅಂಗನವಾಡಿ ಕೇಂದ್ರ ಪರಿಶೀಲನೆ ನಡೆಸಿದರು. ಕೇಂದ್ರದಲ್ಲಿ ಒಟ್ಟು ಮಕ್ಕಳ ಸಂಖ್ಯೆ 28 ಇದ್ದು, ಅದರಲ್ಲಿ 15 ಮಕ್ಕಳು ಹಾಜರಿರುವುದು ಕಂಡು ಬಂತು. ಅಲ್ಲದೆ ಅಪೌಷ್ಟಿಕತೆ ಹೊಂದಿದ ಮಕ್ಕಳೆಷ್ಟಿದ್ದಾರೆ ಎಂದು ಕೇಳಿದರು. ಅಪೌಷ್ಟಿಕತೆಯಿದ ಕೂಡಿರುವ ಯಾವುದೇ ಮಕ್ಕಳಿಲ್ಲ ಎಂದು ಶಿಕ್ಷಕಿ ಉತ್ತರಿಸಿದರು.

ಮುಖ್ಯವಾಗಿ ಮಕ್ಕಳಲ್ಲಿ ಶಿಸ್ತು ರೂಢಿಸಿ, ಶೈಕ್ಷಣಿಕವಾಗಿ ಬೆಳೆಯಲು ಶಿಸ್ತು ಮುಖ್ಯ. ನೀವು ಸಮವಸ್ತ್ರ ಧರಿಸಿ ಶಿಸ್ತಿನಿಂದ ಮಕ್ಕಳಿಗೂ ಕಲಿಸಿ ಎಂದು ಸಲಹೆ ನೀಡಿದರು. ಯಾವೊಂದು ಮಗುವು ಅಪೌಷ್ಟಿಕತೆಯಿಂದ ಕೂಡಿರಬಾರದು. ಆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ತಿಳಿಸಿದರು. ಇನ್ಮುಂದೆ ಸಮರ್ಪಕವಾಗಿ ಕೇಂದ್ರದಲ್ಲಿ ಶಿಸ್ತು ಕಂಡು ಬರದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.