ಗ್ರಾಮಗಳ ಸೇರ್ಪಡೆಗಾಗಿ ಸಭೆ
Team Udayavani, Jan 4, 2018, 4:43 PM IST
ಯಾದಗಿರಿ: ಜಿಲ್ಲೆಯಲ್ಲಿ ನೂತನವಾಗಿ ರಚನೆಗೊಂಡ ಗುರುಮಠಕಲ್, ವಡಗೇರಾ ಹಾಗೂ ಹುಣಸಗಿ ತಾಲೂಕಗಳಿಗೆ ಗ್ರಾಮಗಳ ಸೇರ್ಪಡೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಗ್ರಾಮ ಪಂಚಾಯಿತಿಗಳಾದ ಗೆದ್ದಲಮರಿ, ಬೈಲಕುಂಟಿ, ಕಾಮನಟಗಿ, ಕಚಕನೂರು, ಹೆಬ್ಟಾಳ-ಬಿ. ಇವುಗಳ ವ್ಯಾಪ್ತಿಗೆ ಸೇರಿದ ಗ್ರಾಮಗಳನ್ನು ನೂತನ ಹುಣಸಗಿ ತಾಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಲಾಯಿತು.
ಗುರುಮಠಕಲ್ ತಾಲೂಕಿಗೆ ಅಜಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಬದ್ದೆಪ್ಪಲ್ಲಿ ಗ್ರಾಮವನ್ನು ಹಾಗೂ ವಡಗೇರಾ ತಾಲೂಕಿಗೆ ಮಾಲಹಳ್ಳಿ, ಗಡ್ಡೆಸೂಗೂರು, ತೇಗರಾಳ, ಬಬಲಾದ ಗ್ರಾಮಗಳನ್ನು ಸೇರ್ಪಡೆ ಮಾಡುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ ಮಾತನಾಡಿ, ನೂತನ ತಾಲೂಕಗಳ ಅಭಿವೃದ್ಧಿಗಾಗಿ ಸರಕಾರ ಪ್ರತಿ ತಾಲೂಕಿಗೆ 5 ಕೋಟಿ ರೂ. ಅನುದಾನ ನೀಡಿದ್ದು, ಗುರುಮಠಕಲ್, ಹುಣಸಗಿ ಹಾಗೂ ವಡಗೇರಾ ತಾಲೂಕಗಳಲ್ಲಿ ವಿವಿಧ ಇಲಾಖೆ ಕಚೇರಿಗಳ ಸ್ಥಾಪಿಸಲು ಸ್ಥಳಾವಕಾಶ ಹಾಗೂ ಕಟ್ಟಡಗಳನ್ನು ಬಾಡಿಗೆ ರೂಪದಲ್ಲಿ ಪಡೆಯಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನೂತನ ತಾಲೂಕಗಳಿಗೆ ಸೇರ್ಪಡೆ ಮಾಡಿದ ಗ್ರಾಮಗಳ ವರದಿಯನ್ನು ತಯಾರಿಸಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಆಯಾ ತಹಶೀಲ್ದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಜಗದೀಶ ನಾಯಕ್, ಜಿಪಂ ಸಿಇಒ ಡಾ|ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ