ಕೃಷಿಕ ಮೇಲ್ದೊಡ್ಡಿ ರೈತರಿಗೆ ಮಾದರಿ
Team Udayavani, Nov 6, 2021, 12:18 PM IST
ಬೀದರ: ಕೃಷಿ ಕ್ಷೇತ್ರದಲ್ಲಿ ಸಾಧಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿರುವ ಮೂಲಕ ಗುರುಲಿಂಗಪ್ಪ ಮೇಲ್ದೊಡ್ಡಿ ಗಡಿ ಜಿಲ್ಲೆ ಬೀದರಗೆ ಕೀರ್ತಿ ತಂದಿದ್ದಾರೆ ಎಂದು ಕೇಂದ್ರ ನೂತನ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಮತ್ತು ರಸಾಯನಿಕ-ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಹೇಳಿದರು.
ನಗರದ ಗೃಹ ಕಚೇರಿಯಲ್ಲಿ ಗುರುಲಿಂಗಪ್ಪ ಮೇಲ್ದೊಡ್ಡಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಸಾವಯುವ ಕೃಷಿಯಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ರೈತರಿಗೆ ಮಾದರಿಯಾಗಿದ್ದಾರೆ. ರಸಾಯನಿಕ ಕೀಟನಾಶಕ ಬಳಸದೇ ಗೋ ಆಧಾರಿತ ಕೃಷಿ ಮೂಲಕ ಯಶಸ್ಸು ಸಾಧಿಸಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬೀದರ ಜಿಲ್ಲೆಯ ರೈತರು ಕೃಷಿಯಲ್ಲಿ ಎಂದಿಗೂ ಮುಂದೆ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ರಸಾಯನಿಕ ಮುಕ್ತ ಕೃಷಿ ಮಾಡಿ, ಯಶಸ್ಸು ಕಂಡ ಶ್ರೀ. ಗುರುಲಿಂಗಪ್ಪಾರವರಿಗೆ ಅಭಿನಂದಿಸಿ, ನಮ್ಮ ಜಿಲ್ಲೆಯ ಎಲ್ಲಾ ಸಾವಯವ ಕೃಷಿಯಲ್ಲಿ ಉತ್ತಮ ಆದಾಯ ಪಡೆದು ಫಲವತ್ತಾದ ಭೂಮಿಯನ್ನು ಸಂರಕ್ಷಿಸಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಮೇಲ್ದೊಡ್ಡಿ ಅವರು ಜಿಲ್ಲೆಯ ರೈತರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಯುವಕರನ್ನು ಕೃಷಿಯತ್ತ ಪ್ರೇರೇಪಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ಪ್ರಶಾಂತ ಹೊಳಸಮುದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ