ವಿಶ್ವನಾಥ್ ಏಕಾಂಗಿಯಲ್ಲ ನಾವೆಲ್ಲ ಅವರೊಂದಿಗಿದ್ದೇವೆ: ಸಚಿವ ಭೈರತಿ ಬಸವರಾಜ್


Team Udayavani, Jun 23, 2020, 10:22 PM IST

ವಿಶ್ವನಾಥ್ ಏಕಾಂಗಿಯಲ್ಲ ನಾವೆಲ್ಲ ಅವರೊಂದಿಗಿದ್ದೇವೆ: ಸಚಿವ ಭೈರತಿ ಬಸವರಾಜ್

ಯಾದಗಿರಿ: ಹೆಚ್.ವಿಶ್ವನಾಥ್ ಅನುಭವಿ ಮತ್ತು ಮುತ್ಸದ್ದಿ ರಾಜಕಾರಣಿ ಅವರು ಏಕಾಂಗಿಯಲ್ಲ. ಅವರೊಂದಿಗೆ ನಾವೆಲ್ಲರೂ ಇದ್ದೇವೆ ಮಾತ್ರವಲ್ಲದೇ ಪಕ್ಷವೂ ಅವರ ಜೊತೆಗೆ ಇದೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.

ವಿಶ್ವನಾಥ್ ಅವರಲ್ಲಿ ಅನಾಥ ಪ್ರಜ್ಞೆ ಕಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ತೊರೆದು ಬಂದವರೆಲ್ಲರಿಗೂ ಬಿಜೆಪಿಯಲ್ಲಿ ನ್ಯಾಯ ಸಿಕ್ಕಿದೆ ಎಂಬುದು ನನ್ನ ಅಭಿಮತ, ಮುಂಬರುವ ದಿನಗಳಲ್ಲಿ ಅವರಿಗೂ ನ್ಯಾಯ ಸಿಗುತ್ತದೆ ಮಾತ್ರವಲ್ಲದೇ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ದೊರಕುವ ಭರವಸೆಯಿದೆ ಎಂದು ಸಚಿವ ಭೈರತಿ ಬಸವರಾಜ್ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು.

ನಗರಸಭೆ, ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ತಡೆಯಾಜ್ಞೆ ಇರುವುರಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಳಂಬವಾಗಿದೆ.

ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಿದ್ದು ತಡೆಯಾಜ್ಞೆ ತೆರವಿಗೆ ಸರಕಾರ ಪ್ರಯತ್ನಿಸುತ್ತಿದೆ. ಸರ್ಕಾರ ನಿರ್ಲಕಷ್ಯ ಮಾಡಿಲ್ಲ ಆಡಳಿತ ಸುಧಾರಣೆ ಬಗ್ಗೆ ನಮಗೂ ಆಸಕ್ತಿಯಿದೆ ಶೀಘ್ರದಲ್ಲೆ ತಡೆಯಾಜ್ಞೆ ತೆರವಾಗುವ ಸಾಧ್ಯತೆಯಿದೆ ಎಂದರು.

ಕೋವಿಡ್ 19 ಸೋಂಕು ನಿಯಂತ್ರಣ ಸರಕಾರದ ಮೊದಲ ಆದ್ಯತೆಯಾಗಿದೆ. ಹೀಗಾಗಿ ಅಭಿವೃದ್ದಿ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗಿರಬಹುದು ಹೊರತು ಯಾವುದೇ ಕಾರಣಕ್ಕೆ ಆಡಳಿತ ಯಂತ್ರ ಕುಸಿ ಯಲು ಬಿಡುವುದಿಲ್ಲ. ಕೋವಿಡ್ 19 ನಿಯಂತ್ರಣದೊಂದಿಗೆ ನರೇಗಾ ಯೋಜನೆ ಆರಂಭಿಸಿ ಕಾರ್ಮಿಕರಿಗೆ ಕೃಷಿಕರಿಗೆ ಕೆಲಸ ನೀಡುವ ಮೂಲಕ ಅಭಿವೃದ್ದಿಗೂ ಒತ್ತು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಆರು ತಾಲೂಕಿನ ನಾಲ್ಕು ವಿಧಾನ ಸಭಾ ಕ್ಷೇತ್ರಗಳಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಒಳ ಚರಂಡಿ ವ್ಯವಸ್ಥೆ ಕೈಗೊಂಡು ಮೂಲ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಿದೆ. ಜಿಲ್ಲೆಯ ಅಭಿವೃದ್ಧಿಯ ಕುರಿತು ಜಿಲ್ಲಾಧಿಕಾರಿಗಳು ಗಮನಕ್ಕೆ ತಂದಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ವರದಿ ನೀಡಲಾಗುವುದು ಎಂದು ಸಚಿವ ಭೈರತಿ ಅವರು ನುಡಿದರು.

ಸುರಪುರ ಕುಡಿಯುವ ನೀರಿನ ಸೌಕರ್ಯಕ್ಕೆ 60 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಯಾದಗಿರಿಯಲ್ಲಿ ಒಳಚರಂಡಿ ಕಾಮಗಾರಿ ನಿರ್ವಹಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಕೇಂದ್ರ ಬೆಳವಣಿಗೆಯಾಗುತ್ತಿದ್ದು ಹೊಸ ಬಡಾವಣೆಗಳಿಗೆ ಸೂಕ್ತ ರಸ್ತೆ ಮತ್ತು ನೀರು ಸರಬರಾಜಿಗೆ ಕ್ರಮವಹಿಸಲು ಸೂಚಿಸಲಾಗುವುದು. ಖಾಸಗಿ ಲೇಔಟ್ ನಿರ್ಮಾಣಕ್ಕೆ ಕಡಿವಾಣ ಹಾಕಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡವಣೆ ನಿರ್ಮಿಸಿ ಆದಾಯ ಸಂಪನ್ಮೂಲ ಕ್ರೋಢೀಕರಿಸಲು ಒತ್ತು ನೀಡಲಾಗುವುದು ಎಂದು ಸಚಿವ ಭೈರತಿ ಅವರು ಭರವಸೆ ನೀಡಿದರು.

ಶಾಸಕ ನರಸಿಂಹ ನಾಯಕ, ವೆಂಕಟರೆಡ್ಡಿ ಮುದ್ನಾಳ, ಜಿಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.