ನೂತನ ಕಸಾಪ ಅಧ್ಯಕ್ಷರಿಗೆ ಸಚಿವ ಚವ್ಹಾಣ ಸನ್ಮಾನ
Team Udayavani, Nov 23, 2021, 5:44 PM IST
ಔರಾದ: ಎರಡನೇ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದ ಸುರೇಶ ಚನ್ನಶೆಟ್ಟಿ ಅವರನ್ನು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ ಬೋಂತಿ ತಾಂಡಾದ ನಿವಾಸದಲ್ಲಿ ಸನ್ಮಾನ ಮಾಡಿ ಅಭಿನಂದಿಸಿದರು.
ಬಳಿಕ ಮಾತನಾಡಿದ ಅವರು, ಗಡಿ ಭಾಗವಾದ ಬೀದರ ಜಿಲ್ಲೆಯಲ್ಲಿ ಕನ್ನಡಪರ ಕೆಲಸಗಳಿಗೆ ಇನ್ನಷ್ಟು ವೇಗ ಸಿಗಲಿ. ಕನ್ನಡದ ಕಂಪನ್ನು ಪ್ರತಿ ಮನೆ-ಮನಗಳಿಗೆ ತಲುಪಿಸಲು ಗುರುತರ ಕೆಲಸ ಕಾರ್ಯಗಳಾಗಲಿ. ಬೀದರ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಭವನದ ಕೆಲಸ ಶೀಘ್ರ ಪೂರ್ಣಗೊಳ್ಳಲಿ. ಕನ್ನಡಪರವಾದ ಎಲ್ಲ ಕೆಲಸಗಳಿಗೆ ನಿಮ್ಮೊಂದಿಗೆ ಇರುವುದಾಗಿ ಸಚಿವರು ಭರವಸೆ ನೀಡಿದರು.
ನೂತನ ಕಸಾಪ ಜಿಲ್ಲಾಧ್ಯಕ್ಷ ಸೂರೇಶ ಚೆನ್ನಶೆಟ್ಟಿ ಮಾತನಾಡಿ, ಬೀದರ ಜಿಲ್ಲೆಯಲ್ಲಿನ ಕಸಾಪ ಅಜೀವ ಸದಸ್ಯರು ಹಾಗೂ ಕನ್ನಡದ ಸೇವಕರು ನಮಗೆ ಎರಡನೆಯ ಅವಧಿಗೆ ಸೇವೆ ಮಾಡಲು ಆಶೀರ್ವಾದ ಮಾಡಿರುವುದು ನಮ್ಮ ಪುಣ್ಯ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಬಂಡೆಪ್ಪಾ ಕಂಟೆ, ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷರಾದ ಶರಣಪ್ಪಾ ಮಿಠಾರೆ, ಹಿರಿಯ ಸಾಹಿತಿಗಳಾದ ಶಿವಕುಮಾರ ಕಟ್ಟೆ, ಡಾ| ಬಸವರಾಜ ಬಲ್ಲುರ, ರಮೇಶ ಬಿರಾದಾರ, ಶಿವಶಂಕರ ಟೋಕ್ರೆ, ಶಾಲಿವಾನ ಉದಗೀರೆ, ಗುರುನಾಥ ರಾಜಗೀರಾ, ಟಿ.ಎಂ ಮಚ್ಚೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ