![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕಾಯ್ದೆ ವಿರೋಧಿಸುವವರು ಅಧ್ಯಯನ ಮಾಡಲಿ
Team Udayavani, Sep 30, 2020, 4:49 PM IST
![ಕಾಯ್ದೆ ವಿರೋಧಿಸುವವರು ಅಧ್ಯಯನ ಮಾಡಲಿ](https://www.udayavani.com/wp-content/uploads/2020/09/YG-TDY-2-2-620x372.jpg)
ಸುರಪುರ: ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ವಿರೋಧಿಸುವವರು ಮೊದಲು ಕಾಯ್ದೆ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಲಿ. ಸರಿಯಾಗಿ ತಿಳಿದು ಕೊಳ್ಳದೇ ಕಾಯ್ದೆ ವಿರೋಧಿಸುವುದು ಸರಿಯಲ್ಲ ಎಂದು ಶಾಸಕ ರಾಜುಗೌಡ ಹೇಳಿದರು.
ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 60 ವರ್ಷ ದೇಶವಾಳಿದರೂ ಕಾಂಗ್ರೆಸ್ನವರು ದೇಶ ಮತ್ತು ರೈತರ ಅಭಿವೃದ್ಧಿ ಬಗ್ಗೆ ಒಂದು ದಿನವೂ ಚಿಂತಿಸಲಿಲ್ಲ, ಅಭಿವೃದ್ಧಿಗೆ ಪೂರಕವಾಗುವ ಕಾಯ್ದೆಗಳನ್ನು ಜಾರಿಗೆ ತರಲಿಲ್ಲ. ಹೀಗಾಗಿ ಆಡಳಿತ ವಿಷಯದಲ್ಲಿ ಕಾಂಗ್ರೆಸ್ನವರು ಗೌಡರ ಕೋಣವಿದ್ದಂತೆ. ತಾವು ಮಾಡೋದಿಲ್ಲ, ಮಾಡುವವರಿಗೂ ಬಿಡುವುದಿಲ್ಲ ಎಂದರು.
ಇಂದು ಜಾರಿಗೆ ಬಂದಿರುವ ಕಾಯ್ದೆ ಕಾಂಗ್ರೆಸ್ನವರ ಕನಸಿನ ಕೂಸು. ಈ ಬಗ್ಗೆ ಅವರೇ ಸಂಸತ್ತಿನಲ್ಲಿ ಮಂಡಿಸಿದ್ದರು. ಅದರ ಫಲವಾಗಿ ಇಂದು ಅನುಷ್ಠಾನವಾಗಿ ಜಾರಿಗೆ ಬಂದಿದೆ. ಲೋಪದೋಷ ಗಳಿದ್ದರೆ ಸದನದಲ್ಲಿ ಕುಳಿತು ಮುಕ್ತವಾಗಿ ಚರ್ಚಿಸಲಿ. ಅದು ಬಿಟ್ಟು ರೈತರು ಮತ್ತು ಜನರಲ್ಲಿ ಗೊಂದಲ ಮೂಡಿಸಿ ಪ್ರತಿಭಟನೆಗೆ ಪ್ರೇರೇಪಿಸುವುದು, ಬೀದಿಗಿಳಿದು ಹೋರಾಟ ಮಾಡುವುದು ಅರ್ಥಹೀನ ಎಂದರು.
ಬಿಜೆಪಿ ಯಾವತ್ತು ರೈತರ ಪರವಾಗಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ. ನನ್ನ ಬೆಳೆ ನನ್ನ ಹಕ್ಕು ಎನ್ನುವ ತತ್ವದಡಿ ರೈತರು ತಮ್ಮ ಬೆಳೆ ದೇಶದ ಯಾವುದೇ ಮೂಲೆಯಲ್ಲಾದರೂ ಮಾರಬಹುದು. ಈ ಕಾಯ್ದೆ ರೈತರಿಗೆ ವರದಾನವಾಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಭೂಮಿ ಇಲ್ಲದವರು ಬಹಳಷ್ಟು ಜನರಿದ್ದಾರೆ. ಈಗಾಗಲೇ ಅರಣ್ಯ ಇಲಾಖೆ ಕೃಷಿ ಕಾಯ್ದೆಗೂ ತಿದ್ದುಪಡಿ ತರಲಾಗಿದೆ. ಆದ್ಯತೆಯನುಸಾರ ಅರ್ಜಿ ಪರಿಶೀಲಿಸಿ ಭೂ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಒತ್ತಾಯಪೂರ್ವಕವಾಗಿ ಯಾರೊಬ್ಬರೂ ಭೂಮಿ ಕಸಿದುಕೊಳ್ಳುವಂತಿಲ್ಲ. ಭೂಮಿ ಖರೀದಿಗೆ ಇದ್ದ ಕೆಲವು ಷರತ್ತು ಸಡಿಲಗೊಳಿಸಲಾಗಿದೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕವಾಗದೇ ಪ್ರೇರಕವಾಗಲಿದೆ ಎಂದರು.
ಕಾಯ್ದೆ ತಿದ್ದುಪಡಿಯಿಂದ ರೈತರನ್ನು ಮೇಲೆತ್ತುವ ಕೆಲಸ ಮಾಡಲಾಗುತ್ತದೆ. ಇದರಿಂದ ಉತ್ಪನ್ನ ಮಾರಾಟದ ಸಾಗಾಣಿಕೆ ಖರ್ಚು, ವೆಚ್ಚ ಉಳಿಯಲಿದೆ. ದಲ್ಲಾಳಿಗಳ ಶೋಷಣೆ ತಪ್ಪುತ್ತದೆ. ಕರ ರಹಿತ ಹಣ ಕೈ ಸೇರುತ್ತದೆ. ಪರಿಶಿಷ್ಟ ಜಾತಿ,ಪಂಗಡ ಮತ್ತು ಸಣ್ಣ-ಅತೀ ಸಣ್ಣ ರೈತರ ಜಮೀನು ಮಾರಾಟಕ್ಕೆ ಕೆಲ ಕಠಿಣ ನಿಯಮ ಅಳವಡಿಸಲಾಗಿದೆ. ರೈತರ ಹಿತಕ್ಕೆ ಸರ್ಕಾರ ಬದ್ಧವಿದೆ. -ರಾಜುಗೌಡ, ಶಾಸಕ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.