ಬಲದಂಡೆ ನಾಲೆ ಆಧುನೀಕರಣ ಕಾಮಗಾರಿ ಕಳಪೆ: ಮುರಾರಿ
Team Udayavani, Jul 27, 2022, 6:02 PM IST
ಲಿಂಗಸುಗೂರು: ನಾರಾಯಣಪುರ ಬಲದಂಡೆ ಮುಖ್ಯ ನಾಲೆ ಆಧುನೀಕರಣ ಕಾಮಗಾರಿ ಕಳಪೆ ಮಟ್ಟದಿಂದ ನಡೆಯುತ್ತಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಚ್.ಬಿ. ಮುರಾರಿ ಆರೋಪಿಸಿದರು.
ಗೋರೆಬಾಳ ಗ್ರಾಮದ ಹತ್ತಿರ ಬಲದಂಡೆ ನಾಲೆ ಕಾಮಗಾರಿ ಪರಿಶೀಲಿಸಿದ ಅವರು, ಕೃಷ್ಣಭಾಗ್ಯ ಜಲ ನಿಗಮದ ನಾಲೆ ನಿರ್ವಹಣೆ ಕಾಮಗಾರಿ ಹೆಸರಲ್ಲಿ ಕೋಟ್ಯಂತರ ಹಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ನಾರಾಯಣಪುರ ಮುಖ್ಯನಾಲೆಯ 11ನೇ ಕಿ.ಮೀ ಗೋರೆಬಾಳ ಹತ್ತಿರ ಬಾಕಿ ಉಳಿದ ಕೆಲಸ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿದರು.
ಈಗಾಗಲೇ ಎರಡು ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಖುದ್ದಾಗಿ ಊರಿನ ಗ್ರಾಮಸ್ಥರು ಮತ್ತು ರೈತ ಮುಖಂಡರು ಕೂಡಿಕೊಂಡು ಕಾಮಗಾರಿ ಬಂದ್ ಮಾಡಿಸಲಾಗಿದೆ. ಇಷ್ಟಾದರೂ ಕಾಮಗಾರಿ ನಡೆದ ಸ್ಥಳಕ್ಕೆ ಇದಕ್ಕೆ ಸಂಬಂಧಪಟ್ಟಂತೆ ಎಇಇ ಹಾಗೂ ಜೆಇ ಆಗಲಿ ಕಾಮಗಾರಿ ಸ್ಥಳದಲ್ಲಿ ಇಲ್ಲ. ಗುತ್ತಿಗೆದಾರರು ಸರ್ಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ತರಾತುರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗುತ್ತೇದಾರರ ಮೇಲೆ ಕಾನೂನು ಕ್ರಮ ಜರುಗಿಸಿ ಲೈಸೆನ್ಸ್ ರದ್ದುಪಡಿಸಿ ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದರು.
ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲನಗೌಡ ರಾಂಪುರ್, ತಾಲೂಕು ಅಧ್ಯಕ್ಷ ಅಂಬರೀಶ ಸರ್ಕಾರ್, ಮುಖಂಡರಾದ ಧರ್ಮರಾಜ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ