ಮೋದಿ ವರ್ಚಸ್ಸು ಕುಗ್ಗಿದೆ


Team Udayavani, Dec 19, 2017, 10:56 AM IST

yad-1.jpg

ಯಾದಗಿರಿ: ಹಿಮಾಚಲ ಪ್ರದೇಶದಲ್ಲಿ ನಿರೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದೆ. ಆದರೆ ಗುಜರಾತ್‌ನಲ್ಲಿ ಆಡಳಿತ ವಿರೋ ಧ ಅಲೆ ಇದೆ ಎಂದು ಅಲ್ಲಿಗೆ ಹೋದವರು ತಿಳಿಸಿದ್ದರು. ಪ್ರಧಾನ ಮಂತ್ರಿ ಮೋದಿ, ರಾಷ್ಟ್ರಾಧ್ಯಕ್ಷ ಆಮಿತ್‌ ಶಾ ಅವರು ಅದೇ ರಾಜ್ಯದವರಾಗಿದ್ದು, ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಸಾಕಷ್ಟು ರ್ಯಾಲಿ, ಸಮಾವೇಶ ನಡೆಸಿದರು. ಮೋದಿ ಹೋದಲೆಲ್ಲಾ ನಮ್ಮ ಮಾರ್ಯಾದೆ ಉಳಿಸಿ ಎಂದು ಭಾಷಣ ಮಾಡುತ್ತಿದ್ದರು.

ಇದು ಅವರ ಗೆಲುವಿಗೆ ಕೆಲಸ ಮಾಡಿದೆ. ಗುಜರಾತ್‌ನಲ್ಲಿ ಮೋದಿ ಅವರ ಪ್ರಭಾವ ಕುಗ್ಗಿದೆ. ಅಲ್ಲಿನ ಜನ ಈಗಲೂ ನೋಟ್‌ ಅಮಾನ್ಯಿàಕರಣ ಹಾಗೂ ಜಿಎಸ್‌ಟಿಯನ್ನು ಒಪ್ಪಿಕೊಂಡಿಲ್ಲ. ಅಲ್ಲಿ ಮೋದಿ ಪ್ರಭಾವವಿದ್ದರೆ, ಕಾಂಗ್ರೆಸ್‌ ಸಂಪೂರ್ಣವಾಗಿ ಸೋಲಬೇಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್‌ ವಘೇಲಾ ಪಕ್ಷ ಬಿಟ್ಟು ಹೋಗಿದ್ದು ಪರಿಣಾಮ ಬೀರಿದೆ. ಗುಜರಾತ್‌ನಲ್ಲಿ ಪ್ರಾದೇಶಿಕ ಮಟ್ಟದ ನಾಯಕರ ಅವಶ್ಯಕತೆ ಇದೆ. ಕೇಂದ್ರ ಸರ್ಕಾರ ಸಿಬಿಐ ದುರ್ಬಳಕೆ, ಐಟಿ ದಾಳಿ ಮಾಡುವ ಮೂಲಕ ಭಯ ಬೀಳಿಸುವ ಯತ್ನ ನಡೆಸುತ್ತಿದೆ. ರಾಜ್ಯದಲ್ಲಿ ಮೋದಿ, ಆಮಿತ್‌ ಶಾ ತಂತ್ರ ನಡೆಯುವುದಿಲ್ಲ. ರಾಜ್ಯದಲ್ಲಿ ಕೋಮುವಾದಿ ದೃವೀಕರಣ ಮಾಡಲು ಸಾಧ್ಯವಿಲ್ಲ. ಇದು ಬಸವಣ್ಣ, ಕನಕದಾಸರ ನಾಡಾಗಿದ್ದು, ಇಲ್ಲಿ ಸಾಮರಸ್ಯವಿದ್ದು, ಬಿಜೆಪಿಯವರ ಆಟ ನಡೆಯುವುದಿಲ್ಲ. ಕೆಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ. ಆದರೆ ಆರ್‌ಎಸ್‌ಎಸ್‌ ನಿಂದ ಬಂದವರಿಗೆ ಪಕ್ಷದಲ್ಲಿ ಸೇರಿಸಿಕೊಳ್ಳುವುದಿಲ್ಲ. ಜೆಡಿಎಸ್‌ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಜನರು ಬಿಜೆಪಿ ಪರವಾಗಿಲ್ಲ ಎಂದು ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿದ್ದ ಖಾಲಿ ಖುರ್ಚಿಗಳೇ ಸಾಕ್ಷಿಯಾಗಿವೆ ಎಂದರು.

ಸಂತಸ ತಂದಿದೆ
ಬನಹಟ್ಟಿ: ಕಳೆದ ಬಾರಿ ಚುನಾವಣೆಗೆ ಹೋಲಿಸಿದರೆ ಜರಾತ್‌ನಲ್ಲಿ ಕಾಂಗ್ರೆಸ್‌ ಹೆಚ್ಚಿನ ಗೆಲುವು ಸಾಧಿಸಿದೆ ಎಂದು ಸಚಿವೆ ಉಮಾಶ್ರೀ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ ಫಲಿತಾಂಶ ಕಾಂಗ್ರೆಸ್‌ ಪಕ್ಷಕ್ಕೆ ಕಹಿ ಬದಲಾಗಿ ಸಂತಸ ನೀಡಿದೆ. ಪಕ್ಷದ ನೂತನ ಅಧಿಪತಿಯಾಗಿರುವ ರಾಹುಲ್‌ ಗಾಂಧಿ ನೇತೃತ್ವದ ಹೋರಾಟದಿಂದಲೇ ಅಷ್ಟೊಂದು ಪ್ರಮಾಣದ ಕ್ಷೇತ್ರಗಳಲ್ಲಿ
ಕಾಂಗ್ರೆಸ್‌ ಗೆಲುವಿಗೆ ಕಾರಣವಾಗಿದೆ. ಎಂದರು.

ಕಾಂಗ್ರೆಸ್‌ ಸೋಲಿಗೆ ಇವಿಎಂ ಕಾರಣ

ಬಾಗಲಕೋಟೆ: ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿನ್ನಡೆಗೆ ಇವಿಎಂ ಯಂತ್ರ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಜನ ಮತ ಹಾಕಿದ್ದಾರೋ ಅಥವಾ ಇವಿಎಂ ಯಂತ್ರ ಮತ ಹಾಕಿದೆಯೋ ಎಂಬ ಅನುಮಾನ ಮೂಡಿದೆ. ಇವಿಎಂ ದುರುಪಯೋಗ ಸಾಧ್ಯತೆಯಿದೆ ಎಂಬ ಅನುಮಾನ ಎಲ್ಲೆಡೆ ಇದ್ದರೂ ಕೂಡ ಇವಿಎಂ ಯಂತ್ರವನ್ನೇ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ದೊಡ್ಡ ದೊಡ್ಡ ಉದ್ದಿಮೆದಾರರು ಅವರ ಪರವಾಗಿದ್ದಾರೆ. ಹೀಗಾಗಿ ಗುಜರಾತ್‌ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.

ಕೀಳುಮಟ್ಟಕ್ಕಿಳಿದುಗೆದ್ದ ಪ್ರಧಾನಿ: ಎಚ್ಕೆ 
ಗದಗ: ಗುಜರಾತ್‌ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಧಾನಿ ನರೇಂದ್ರ ಮೋದಿ ಕೀಳುಮಟ್ಟಕ್ಕೆ ಇಳಿದು, ಕೊನೆಗೂ ಜಯ ಸಾಧಿಸಿದ್ದಾರೆ. ಜನಾದೇಶಕ್ಕೆ ತಲೆ ಬಾಗುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ. ಪಾಟೀಲ ಹೇಳಿದರು. 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್‌
ಸೋತಿರಬಹುದು. ಆದರೆ ಪಕ್ಷದ ಬಲವನ್ನು ಸಾಬೀತುಪಡಿಸಿದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಗೆಲುವಿಗಾಗಿ ಜನರನ್ನು ಭಾವನಾತ್ಮಕವಾಗಿ ಹಿಡಿದುಕೊಂಡರು. ನೀಚ ಪದ ಪ್ರಯೋಗ ಹಾಗೂ ಪಾಕಿಸ್ತಾನದೊಂದಿಗೆ ಮಾತನಾಡಿದರು ಎನ್ನುವ ಕೀಳುಮಟ್ಟದ ಪ್ರಚಾರ ಮಾಡುವ ಮೂಲಕ ಜನರನ್ನು ಪ್ರಚೋದಿಸಿದರು ಎಂದು ಆರೋಪಿಸಿದರು.

ಈ ಚುನಾವಣೆ ಮೂಲಕ ಯಾರೇ ಸೊಕ್ಕು ತೋರಿಸಿದರೂ ಅವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎನ್ನುವ ಎಚ್ಚರಿಕೆಯನ್ನು ಜನ ನೀಡಿದ್ದಾರೆ. ಬಿಜೆಪಿ ಎಷ್ಟೇ ಪ್ರಚೋದಿಸಿದರೂ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡಿದೆ. ಕಳೆದ ಚುನಾವಣೆಯ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ರಾಹುಲ್‌ ಗಾಂಧಿ ಅವರು ಪಕ್ಷದ ಅಧ್ಯಕ್ಷರಾದ ಬಳಿಕ ಮೋದಿ ನಾಡಲ್ಲಿ ಕಾಂಗ್ರೆಸ್‌ ಶೇಕಡಾವಾರು ಮತ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ ಎಂದರು. 

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.