500ಕ್ಕೂ ಹೆಚ್ಚು ನಕಲಿ ಐಡಿ ಕಾರ್ಡ್‌ ಪತ್ತೆ


Team Udayavani, Mar 29, 2019, 5:33 PM IST

yad-2

ಶಹಾಪುರ: ನಗರದ ಹಾಲಬಾವಿ ರಸ್ತೆ ಬದಿಯಲ್ಲಿ ಬುಧವಾರ ನಕಲಿ ಮತದಾನ ಗುರುತಿನ ಚೀಟಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ನಗರ ಘಟಕ ಅಧ್ಯಕ್ಷ ಲಾಲನಸಾಬ್‌ ಖುರೇಶಿ ಹಾಗೂ ಇತರರು 500ಕ್ಕೂ ಹೆಚ್ಚು ಗುರುತಿನ ಚೀಟಿ ಎಸೆದಿರುವದನ್ನು ಕಂಡು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಅಲ್ಲದೆ ಗುರುವಾರ ತಹಶೀಲ್ದಾರ್‌ ಕಚೇರಿಗೆ ತೆರಳಿ ಈ ಕುರಿತು ದೂರು ಸಲ್ಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಎಸ್‌ಸಿ ಮೋರ್ಚಾ ನಗರ ಅಧ್ಯಕ್ಷ ನಿಂಗಣ್ಣ ಹೊಸಮನಿ, ಹಯ್ನಾಳಪ್ಪ ನಾಲವಡಗಿ, ಯಲ್ಲಯ್ಯ ನಾಯಕ ವನದುರ್ಗ ಇದ್ದರು. ಮನವಿ ಸ್ವೀಕರಿಸಿದ
ತಹಶೀಲ್ದಾರ್‌ ಸಂಗಮೇಶ ಜಿಡಗೆ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ನಗರದ ಹಳ್ಳದ ಚರಬಸವೇಶ್ವರ ದೇವಸ್ಥಾನದ ಹತ್ತಿರದ ಮುಳ್ಳು ಕಂಟಿಯಲ್ಲಿ ಎಸೆದಿದ್ದ
ಸುಮಾರು 75ಕ್ಕೂ ಹೆಚ್ಚು ಮತದಾನ ಗುರುತಿನ ಚೀಟಿಗಳನ್ನು ವಶಕ್ಕೆ ಪಡೆದುಕೊಂಡರು. ಇನ್ನುಳಿದವು ಚರಂಡಿಯಲ್ಲಿ ಬೆರೆತು ಹೋಗಿವೆ. ಕೆಲವೊಂದು ನೀರಲ್ಲಿ ಹರಿದುಕೊಂಡು ಹೋಗಿವೆ ಎನ್ನಲಾಗಿದೆ.

ಶಹಾಪುರ ಮತಕ್ಷೇತ್ರದ ಸಗರ ಹಾಗೂ ಮಹಲ್‌ ರೋಜಾ ವಿಳಾಸ ಹೊಂದಿದ ಮತದಾನ ಗುರುತಿನ ಚೀಟಿಗಳು ಪತ್ತೆಯಾಗಿವೆ ಎಂದು ತಹಶೀಲ್ದಾರ್‌ ಸಂಗಮೇಶ ಜಿಡಗೆ ಸುದ್ದಿಗಾರರಿಗೆ ತಿಳಿಸಿದರು. ಈ ಕುರಿತು ಸೂಕ್ತ ಸಮಗ್ರ ತನಿಖೆ ನಡೆಸಲಾಗುವದು. ಇವು ಮೇಲ್ನೋಟಕ್ಕೆ ನಕಲಿ ಎಂಬುದು ತಿಳಿದಿದೆ. ಯಾಕಂದರೆ ಮತದಾನ ಚೀಟಿ ಝೆರಾಕ್ಸ್‌ ಪ್ರತಿ ಇರುವುದು ಕಂಡು ಬಂದಿದೆ. ಈ ಕುರಿತು ತನಿಖೆ ನಂತರ ಸತ್ಯ ಹೊರ ಬೀಳಲಿದೆ. ಇವುಗಳನ್ನು ಯಾರು ತಯಾರು ಮಾಡಿದ್ದಾರೆ. ಎಲ್ಲಿ ಬಳಕೆಯಾಗಿವೆ ಎಂಬುದನ್ನು ಪತ್ತೆ ಮಾಡಲಾಗುವುದು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾವುದು ಎಂದು ತಿಳಿಸಿದರು.

ವೋಟರ್‌ ಐಡಿ ಆ್ಯಪ್‌ನಲ್ಲಿ ವಿಳಾಸ ತಪ್ಪು ಬೆಳಕಿಗೆ ನಗರದ ಹಳ್ಳದ ಚರಬಸವೇಶ್ವರ ದೇವಸ್ಥಾನದ ಹತ್ತಿರದ ಮುಳ್ಳು ಕಂಟಿಯಲ್ಲಿ ದೊರೆತ ಮತದಾನ ಗುರುತಿನ ಚೀಟಿಗಳ ವೈಎಸ್‌ಜಿ ಸಂಖ್ಯೆ ಪರಿಶೀಲಿಸಲಾಗಿದೆ. ಹೆಸರು ಸರಿಯಾಗಿ ತೋರಿಸುತ್ತಿದೆ. ಆದರೆ ವಿಳಾಸ ಮಾತ್ರ ತಪ್ಪು ತೋರುತ್ತಿದೆ ಎನ್ನಲಾಗಿದೆ. ದೊರೆತ ಕಾರ್ಡ್‌ಗಳ ಸಂಖ್ಯೆ ಆ್ಯಪ್‌ನಲ್ಲಿ ನೋಡಿದರೆ ರಸ್ತಾಪುರ ಎಂದು ಬರುತ್ತಿದೆ. ಆದರೆ ದೊರೆತ ಮತದಾನ ಗುರುತಿನ ಚೀಟಿಯಲ್ಲಿ ಬಹುತೇಕ ಸಗರ ಮತ್ತು ಮಹಲ್‌ ರೋಜಾ ಎಂದು ನಮೂದಿಸಲಾಗಿದೆ.

2018ರಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವ್ಯಾಪಕ ಅಕ್ರಮ ಮತದಾನ ನಡೆದಿರುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ಸೂಕ್ತ ತನಿಖೆ ನಡೆಯಬೇಕು. ದೊರೆತ ಮತದಾನ ಚೀಟಿಯಲ್ಲೂ ದಿನಾಂಕ ಏ.24, 2018ಎಂದು ನಮೂದಿಸಲಾಗಿದೆ. ಅಲ್ಲದೆ ಲೋಕಸಭೆ ಚುನಾವಣೆ ವೇಳೆಯೂ ಅಕ್ರಮ ಮತದಾನ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ.
ಯಲ್ಲಯ್ಯ ನಾಯಕ, ಬಿಜೆಪಿ ರೈತ ಮುಖಂಡ

ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಹಾಪುರ ಮತ ಕ್ಷೇತ್ರದಲ್ಲಿ ವ್ಯಾಪಕವಾಗಿ ನಕಲಿ ಮತದಾನ ಗುರುತಿನ ಚೀಟಿ ಬಳಕೆಯಾಗಿರುವ ಸಾಧ್ಯತೆ ಇದೆ. ಕಳೆದ ವಿಧಾನಸಭೆಯಲ್ಲಿ ನಮ್ಮ ನಾಯಕರಾದ ಮಾಜಿ ಶಾಸಕ, ಗುರು ಪಾಟೀಲ ಶಿರವಾಳ ಅವರು 30 ಸಾವಿರಕ್ಕೂ ಅ ಧಿಕ ಮತಗಳ ಅಂತರದಿಂದ ಸೋಲಿಗೆ ಇಂತಹ ನಕಲಿ ಮತದಾನ ಚೀಟಿಗಳೇ ಕಾರಣ. ಕೂಡಲೇ ಈ ಬಗ್ಗೆ ತನಿಖೆಯಾಗಬೇಕು.
ಲಾಲನಸಾಬ್‌ ಖುರೇಶಿ, ಬಿಜೆಪಿ ನಗರ ಅಧ್ಯಕ್ಷ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.