ಇಂಡಿ ಏತ ನೀರಾವರಿಗೆ ಮೋಟಾರ್‌ ಸಮಸ್ಯೆ

ಎಂಟರಲ್ಲಿ ಎರಡು ಮೋಟಾರ್‌ ಮಾತ್ರ ಚಾಲನೆ

Team Udayavani, Mar 25, 2022, 4:42 PM IST

substation

ಕೆಂಭಾವಿ: ಮೂರು ಜಿಲ್ಲೆಗಳ ರೈತರ ಬವಣೆ ನೀಗಿಸಲು ಪಟ್ಟಣದಲ್ಲಿ ತಲೆ ಎತ್ತಿರುವ ಬೃಹತ್‌ ನೀರಾವರಿ ಯೋಜನೆಗಳಲ್ಲಿ ಒಂದಾದ ಗುತ್ತಿ ಬಸವಣ್ಣ (ಇಂಡಿ) ಏತ ನೀರಾವರಿ ಯೋಜನೆಯ ಜಾಕ್‌ವೆಲ್‌ ಪ್ರದೇಶದಲ್ಲಿ ದಿನಕ್ಕೊಂದು ಸಮಸ್ಯೆ ಉದ್ಭವವಾಗುತ್ತಿದ್ದು, ರೈತರ ಗೋಳಾಟ ಮುಂದುವರಿದಿದೆ.

ಯಾದಗಿರಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಯ ಸುಮಾರು 150 ಗ್ರಾಮಗಳ ಸಾವಿರಾರು ಹೆಕ್ಟೇರ್‌ ಭೂಮಿಗೆ ನೀರುಣಿಸುವ ಈ ಯೋಜನೆ ತಾಂತ್ರಿಕ ತೊಂದರೆಯಿಂದ ಹಲವು ಸಮಸ್ಯೆ ಎದುರಿಸುತ್ತಿದೆ. ಇಲ್ಲಿ ಎಂಟು ಬೃಹತ್‌ ಗಾತ್ರದ ನೀರೆತ್ತುವ ಮೋಟಾರ್‌ಗಳನ್ನು ಅಳವಡಿಸಿದ್ದು, ಅದರಲ್ಲಿ ಆರು ಯಂತ್ರಗಳು ಅವಿರತವಾಗಿ ಕಾರ್ಯ ಮಾಡಬೇಕೆಂಬುದು ಸರ್ಕಾರದ ನಿಯಮ. ಆದರೆ ಈಗ ಹಲವಾರು ವರ್ಷಗಳಿಂದ ಕೇವಲ ಮೂರು ಯಂತ್ರಗಳು ಮಾತ್ರ ಉತ್ತಮ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಯ ಕೊನೆಯ ಭಾಗದ ರೈತರು ಜಮೀನಿಗೆ ನೀರು ಹರಿಯದೇ ಕಂಗಾಲಾಗಿದ್ದಾರೆ. ಬುಧವಾರದಿಂದ ಮತ್ತೂಂದು ಯಂತ್ರ ಕೈಕೊಟ್ಟಿದ್ದು, ಎರಡು ಮೋಟಾರ್‌ ಗಳ ಮೂಲಕ ಕಾಲುವೆಗೆ ನೀರು ಹರಿಸಲಾಗುತ್ತಿದೆ.

ಈಗಾಗಲೇ ಕಾಲುವೆಯಲ್ಲಿ ಕಂಡು ಬಂದಿರುವ ಸಮಸ್ಯೆಗಳ ಪರಿಹಾರಕ್ಕೆ ಶಾಸಕ ಅಭಯ ಪಾಟೀಲ ನೇತೃತ್ವದ ನೀರಾವರಿ ಸಲಹಾ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವಿಜಯಪುರ ಜಿಲ್ಲೆಯ ಸಿಂದಗಿ, ದೇವರಹಿಪ್ಪರಗಿ, ಇಂಡಿ ಶಾಸಕರು ಈ ಪ್ರದೇಶಕ್ಕೆ ಹಲವು ಬಾರಿ ಭೇಟಿ ನೀಡಿ ಉದ್ಭವಿಸುತ್ತಿರುವ ಸಮಸ್ಯೆಗಳ ಪರಿಹಾರ ಸತತ ಶ್ರಮ ವಹಿಸಿದ್ದರೂ ಶಾಶ್ವತ ಪರಿಹಾರ ಮಾತ್ರ ಮರೀಚಿಕೆಯಾಗಿದೆ. ಗುರುವಾರ ನಡೆದ ವಿಧಾನಸಭೆ ಕಲಾಪದಲ್ಲಿ ಈ ಸಮಸ್ಯೆ ಕುರಿತು ಸಿಂದಗಿ ಶಾಸಕ ರಮೇಶ ಭೂಸನೂರ ಸರ್ಕಾರದ ಗಮನ ಸೆಳೆದರು.

ತಾಂತ್ರಿಕ ಸಮಸ್ಯೆಗೆ ಕಾರಣ

ಇಲ್ಲಿ ಅಳವಡಿಸಿರುವ ಬೃಹತ್‌ ಯಂತ್ರಗಳನ್ನು (ಒಂದು ಯಂತ್ರ ಸುಮಾರು 2800 ಎಚ್‌ಪಿ ಸಾಮರ್ಥ್ಯ) ಅಳವಡಿಸಿ ಹಲವು ವರ್ಷಗಳಾಗಿದ್ದು, ಅವುಗಳ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಈ ಕಾಮಗಾರಿ ಗುತ್ತಿಗೆ ಪಡೆದ ಖಾಸಗಿ ಕಂಪನಿ ಬೆಂಗಳೂರಿನ ಕಂಪನಿಯಾಗಿದ್ದು, ಆ ಕಂಪನಿ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂಬುದು ರೈತರ ವಾದವಾಗಿದೆ. ಯಂತ್ರಗಳ ಬಿಡಿಭಾಗಗಳು ಕರ್ನಾಟಕದಲ್ಲಿ ದೊರೆಯದ ಕಾರಣ ದುರಸ್ತಿಗೆ ಹಿನ್ನಡೆಯಾಗುತ್ತಿದೆ ಎಂಬುದು ಪರಿಣಿತರ ಅಭಿಪ್ರಾಯ.

ಜಿ.ಬಿ. ಏತ ನೀರಾವರಿಯಿಂದ ನಮ್ಮ ಭಾಗದ ರೈತರು ಹಲವು ರೀತಿಯ ತೊಂದರೆಯಲ್ಲಿ ಸಿಲುಕಿದ್ದಾರೆ. ಈಗಾಗಲೇ ಬೆಳೆಗಳು ಒಣಗುತ್ತಿದ್ದು, ಇದರಿಂದ ಮನನೊಂದ ರೈತರು ತಾಂಬಾ ಭಾಗದಲ್ಲಿ ಪ್ರತಿಭಟನೆ ಹಾದಿ ತುಳಿದಿದ್ದಾರೆ. ಈ ಕುರಿತು ಗುರುವಾರ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾವನೆ ಮಾಡಿದ್ದು, ಇಲ್ಲಿಯವರೆಗೂ ಸರ್ಕಾರ ಯಾವುದೇ ಉತ್ತರ ನೀಡಿಲ್ಲ – ರಮೇಶ ಭೂಸನೂರ, ಸಿಂದಗಿ ಶಾಸಕ

ನೀರಿನ ರಭಸಕ್ಕೆ ಯಂತ್ರಗಳು ಆಗಾಗ ಕೆಡುತ್ತಿವೆ. ಹೊಸ ಯಂತ್ರಗಳ ಅಳವಡಿಕೆಗೆ ಟೆಂಡರ್‌ ಕರೆದಿದ್ದು, ಅವುಗಳ ಜೋಡಣೆ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ. ಅಲ್ಲಿಯವರೆಗೆ ಇರುವ ಯಂತ್ರಗಳ ನಿರ್ವಹಣೆ ಮಾಡಿ ಆದಷ್ಟು ರೈತರಿಗೆ ನೀರೊದಗಿಸಲು ಪ್ರಯತ್ನ ಮಾಡಲಾಗುವುದು. ವೆಂಕಟೇಶ, ಎಇಇ. ಜಿ.ಬಿ. ಏತ ನೀರಾವರಿ

 

–  ಗುಂಡಭಟ್ಟ ಜೋಷಿ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.