ಬದಲಾಗಿಲ್ಲ ನಾಮಫಲಕ


Team Udayavani, Mar 17, 2018, 4:54 PM IST

yad.jpg

ವಡಗೇರಾ: ವಡಗೇರಾ ತಾಲೂಕು ಕೇಂದ್ರ ಉದ್ಘಾಟನೆಯಾಗಿ ತಿಂಗಳು ಕಳೆದರೂ ಇನ್ನೂವರೆಗೂ ಸಹ ವಡಗೇರಾ ತಾಲೂಕು ಸರಕಾರಿ ಕಚೇರಿಗಳ ಕಟ್ಟದ ನಾಮ ಫಲಕದಲ್ಲಿ ಬದಲಾವಣೆ ಮಾತ್ರ ಕಂಡಿಲ್ಲ. ಪಟ್ಟಣದಲ್ಲಿರುವ ಗ್ರಾಪಂ, ಸರಕಾರಿ ಉನ್ನತ ಪ್ರಾಥಮಿಕ ಶಾಲೆ, ಸರಕಾರಿ ಉರ್ದು ಶಾಲೆ, ಅಂಬೇಡ್ಕರ್‌ ನಗರದ ಸರಕಾರಿ ಶಾಲೆ, ರೈತ ಸಂಪರ್ಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಪಶು ಆಸ್ಪತ್ರೆ, ಪ್ರೌಢಶಾಲೆ, ನಾಡಕಚೇರಿ, ಅಂಚೆ  ಕಚೇರಿ, ಅಂಗನವಾಡಿ ಕೇಂದ್ರಗಳ ಜೊತೆಗೆ ಇನ್ನೂ ಅನೇಕ ಸರಕಾರಿ ಕಚೆರಿಗಳ ಕಟ್ಟದ ನಾಮ ಫಲಕದಲ್ಲಿ ಇಂದಿಗೂ ಶಹಾಪುರ ತಾಲೂಕಾ ಎಂದು ಇದೆ. 

ನೂತನ ತಾಲೂಕಿನ ಅನೇಕ ಹಳ್ಳಿಗಳಲ್ಲಿರುವ ಸರಕಾರಿ ಶಾಲೆಗಳ ಕಟ್ಟಡದ ನಾಮ ಫಲಕಗಳು ಇನ್ನೂವರೆಗೂ ಬದಲಾವಣೆ ಆಗಿಲ್ಲ, ಹಾಗೂ ಕೆಲವೊಂದು ಸರಕಾರಿ ವಸತಿ ನಿಲಯಗಳ ಜೊತೆಗೆ ಅನೇಕ ಗ್ರಾಪಂ ಕಟ್ಟದಲ್ಲಿ ಸಹ ಹಳೆ ನಾಮಫಲಕಗಳಿವೆ. 

ಅಧಿಕಾರಿಗಳ ನಿರ್ಲಕ್ಷ: ಬಹುತೇಕ ಸರಕಾರಿ ಶಾಲಾ ಮುಖ್ಯ ಗುರುಗಳು, ಪಿಡಿಒಗಳು, ಇನ್ನಿತರ ಇಲಾಖೆ ಅಧಿಕಾರಿಗಳು ನಾಮ ಫಲಕದಲ್ಲಿ ತಾಲೂಕು ಬದಲಾವಣೆ ಮಾಡುವ ಗೋಜಿಗೆ ಹೋಗಿಲ್ಲ. ಇದರಿಂದ ಸಾರ್ವಜನಿಕರಲ್ಲಿ, ಮಕ್ಕಳಲ್ಲಿ, ವಿದಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ.
 
ಕೇವಲ 3 ಕಚೇರಿ ಕಟ್ಟಡ ನಾಮ ಫಲಕದಲ್ಲಿ ಬದಲಾವಣೆ: ತಾಲೂಕು ತಹಶೀಲ್ದಾರ್‌, ತಾಲೂಕು ಶಾಖಾ ಗ್ರಂಥಾಲಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳ ಕಟ್ಟದಲ್ಲಿ ಮಾತ್ರ ವಡಗೇರಾ ತಾಲೂಕು ಎಂದು ನಮೂದಿಸಲಾಗಿದೆ. ನೂತನ ತಾಲೂಕು ವಡಗೇರಾದ 33 ಹಳ್ಳಿಗಳ, ಹಯ್ನಾಳ (ಬಿ) ಹೋಬಳಿಯ 32 ಹಳ್ಳಿಗಳ, ದೊರನಹಳ್ಳಿ ವಲಯದ 13 ಹಾಗೂ 17 ಗ್ರಾಪಂ ಬಹುತೇಕ ಕಚೇರಿಗಳ ಕಟ್ಟಡದಲ್ಲಿ ಇಂದಿಗೂ ಸಹ ಶಹಾಪುರ ತಾಲೂಕು ಎಂದು ಇದೆ.  ನೂತನ ತಾಲೂಕು ವಡಗೇರಾ ಅಭಿವೃದ್ಧಿ ಆಗಬೇಕಾದರೆ, ಅಧಿಕಾರಿಗಳು ಹಾಗೂ ಇಲಾಖೆ ಮುಖ್ಯಸ್ಥರು ಸಮರ್ಪಣಾ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆದಕಾರಣ ಜಿಲ್ಲಾಧಿಕಾರಿಗಳು ಇತ್ತ ಕಡೆ ಗಮನಹರಿಸಿ ನಾಮ ಫಲಕದಲ್ಲಿ ವಡಗೇರಾ ಎಂದು ನಮೂದಿಸಲು ವಿಫಲರಾದ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಹಾಗೆ ಸರಕಾರಿ ಕಚೇರಿಗಳ ನಾಮ ಫಲಕದಲ್ಲಿ ವಡಗೇರಾ ತಾಲೂಕು ಎಂದು ನಮೂದಿಸಲು ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಧಿಕೃತ ಆದೇಶ ಬಂದಿಲ್ಲ ಅಧಿಕೃತವಾಗಿ ವಡಗೇರಾ ತಾಲೂಕು ಆಗಿಲ್ಲ, ನಮಗೆ ಯಾವ ಆದೇಶ ಬಂದಿಲ್ಲ. ಅದಕ್ಕಾಗಿ ನಾಮ ಫಲಕದಲ್ಲಿ ಬದಲಾವಣೆ ಮಾಡಿಲ್ಲ.
  ಶಿವಪುತ್ರಪ್ಪಗೌಡ, ಪಿಡಿಒ ವಡಗೇರಾ

ಅಧಿಕಾರಿಗಳ ನಿರ್ಲಕ್ಷ್ಯ 
ಈಗಾಗಲೇ ವಡಗೇರಾ ತಾಲೂಕು ಎಂದು ಉದ್ಘಾಟನೆಯಾಗಿ ಒಂದು ತಿಂಗಳು ಕಳೆದರು ಸಹ ಸರಕಾರಿ ಕಚೇರಿಗಳ ನಾಮ ಫಲಕದಲ್ಲಿ ಬದಲಾವಣೆ ಆಗದಿರುವುದನ್ನು ನೋಡಿದರೆ, ಅಧಿಕಾರಿಗಳ ನಿರ್ಲಕ್ಷ ಎದ್ದು ಕಾಣುತ್ತಿದೆ. ಆದಷ್ಟು ಬೇಗ ನಾಮಫಲಕದಲ್ಲಿ ವಡಗೇರಾ ತಾಲೂಕು ಎಂದು ನಮೂದಿಸಬೇಕು.  
ಸಿದ್ದಣ್ಣಗೌಡ ಕಾಡಂನೋರ, ಹಾಲೂಒಕ್ಕೂಟದ ಮಾಜಿ ಅಧ್ಯಕ್ಷ

ನಾಮದೇವ ವಾಟ್ಕರ

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.