ಕೂಡಲಸಂಗಮದಲ್ಲಿ 19ರಂದು ನಮ್ಮ ಕಾಂಗ್ರೆಸ್ ಪಕ್ಷ ಉದ್ಘಾಟನೆ
Team Udayavani, Dec 8, 2017, 7:40 AM IST
ಯಾದಗಿರಿ: “ಕೂಡಲಸಂಗಮದಲ್ಲಿ ಡಿ.19ರಂದು ನಮ್ಮ ಕಾಂಗ್ರೆಸ್ ಪಕ್ಷ ಉದ್ಘಾಟನೆಯಾಗಲಿದೆ’ ಎಂದು ಸಂಸ್ಥಾಪಕ ಹಾಗೂ ಶಾಸಕ ವರ್ತೂರು ಪ್ರಕಾಶ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ನಡೆಯುವ ಸಮಾರಂಭದಲ್ಲಿ 3ರಿಂದ 4 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಕಾಂಗ್ರೆಸ್ ಪಕ್ಷ ಅಹಿಂದ ವರ್ಗವನ್ನು ನಿರ್ಲಕ್ಷ್ಯ ಮಾಡಿದೆ. ಅಹಿಂದ ಪರ ಯಾವುದೇ ಕಾರ್ಯಕ್ರಮ ಜಾರಿಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದಲ್ಲಿದ್ದ ನಾಯಕರಾದ ಎಚ್. ವಿಶ್ವನಾಥ, ಶ್ರೀನಿವಾಸ ಪ್ರಸಾದ, ಎಸ್.ಎಂ.ಕೃಷ್ಣ ಅವರನ್ನು ಮೂಲೆಗುಂಪು ಮಾಡಿದ ಪರಿಣಾಮ ಅವರೆಲ್ಲರೂ ಪಕ್ಷ ಬಿಟ್ಟು ಹೋಗಿದ್ದಾರೆ. ಆದ್ದರಿಂದ ಅಹಿಂದ ವರ್ಗದ ಕಲ್ಯಾಣಕ್ಕಾಗಿ ಹೊಸ ಪಕ್ಷ ಸ್ಥಾಪಿಸಲಾಗುತ್ತಿದೆ ಎಂದರು.
ಸಿಎಂ ವಿರೋಧ: ಕೋಲಾರ ಜಿಲ್ಲೆಯಲ್ಲಿ ಪಕ್ಷೇತರ ಶಾಸಕನಾಗಿ ಲೋಕಸಭೆ ಹಾಗೂ ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾನು ಶ್ರಮಿಸಿದ್ದೇನೆ. ಆದರೆ ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಕೆಂಡಕಾರಿದರು.
ಮುಂಬರುವ ಚುನಾವಣೆಯಲ್ಲಿ ಎಷ್ಟು ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಮೊದಲು ಪಕ್ಷ ಉದ್ಘಾಟನೆಗೊಂಡು ಅಲ್ಲಿ ಜನರ ನಿರೀಕ್ಷೆ ಏನಿದೆ ಎಂಬುದನ್ನು ತಿಳಿದುಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ