ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಓರ್ವ ಸಾವು, ಮೂವರ ಸ್ಥಿತಿ ಗಂಭೀರ


Team Udayavani, Jun 29, 2022, 4:06 PM IST

ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ನಾರಾಯಣಪುರ: ಪಟ್ಟಣದ ಛಾಯಾ ಕಾಲೋನಿ ಬಡಾವಣೆಯ ಮನೆಯೊಂದರಲ್ಲಿ ನಾಲ್ಕು ಜನರ ಮೇಲೆ ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡ ಪೊಲೀಸರ ವಶದಲ್ಲಿದ್ದಾನೆ.

ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ. ಅವರನ್ನು ಲಿಂಗಸೂಗುರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ: ಛಾಯಾ ಕಾಲೋನಿಯ ನಿವಾಸಿಯಾಗಿರುವ ಆರೋಪಿ ಶರಣಪ್ಪ ದಂಪತಿಗಳ ನಡುವೆ ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು (ಮಾತುಕತೆ) ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಬುಧವಾರ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಂಕಿಯಿಂದ ಸುಟ್ಟು ಗಂಭೀರ ಗಾಯಗೊಂಡ ನಾಲ್ವರನ್ನು ಸ್ಥಳೀಯರ ನೆರವಿನಿಂದ ಖಾಸಗಿ ವಾಹನದ ಮೂಲಕ ಲಿಂಗಸೂಗುರು ಆಸ್ಪತ್ರೆಗೆ ದಾಖಲಿಸಿದ್ದಾರೆ ಈ ವೇಳೆ ಓರ್ವ ಸಾವನ್ನಪಿದ್ದಾನೆ.

ಇಂತಹ ಅಮಾನವಿಯ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಸ್ಥಳಕ್ಕೆ ಸಿಪಿಐ ಭೇಟಿ: ವಿಷಯ ತಿಳಿದು ಘಟನಾ ಸ್ಥಳಕ್ಕೆ ಹುಣಸಗಿ ವೃತ್ತ ಸಿಪಿಐ ದೌಲತ್ ಎನ್. ಕೆ, ಸ್ಥಳೀಯ ಠಾಣೆಯ ಪಿಎಸೈ ಸಿದ್ದೇಶ್ವರ ಗೆರಡೆ, ಬಾಗಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಐ ಇದೊಂದು ಅಮಾನುಷ ಕೃತ್ಯವಾಗಿದೆ ಆರೋಪಿಯು ಪೊಲೀಸ್‌ರ ವಶದಲ್ಲಿದ್ದಾನೆ ಘಟನೆಯಲ್ಲಿ ಸುಟ್ಟಿರುವ ನಾಲ್ವರನ್ನು ಲಿಂಗಸೂಗುರು ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.