ನಾರಾಯಣಪುರ: ಸತತ ಮಳೆಗೆ ಕುಸಿದ ಮನೆಗಳು


Team Udayavani, Sep 28, 2020, 6:03 PM IST

yg-tdy-1

ನಾರಾಯಣಪುರ: ಕಳೆದ ಎರಡು ದಿನಗಳಿಂದ ಸುರಿದ ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಮಳೆ ರವಿವಾರವೂ ಮುಂದುವರಿದಿದ್ದರಿಂದ ಹಲವು ಗ್ರಾಮಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಶನಿವಾರ ಬೆಳಿಗ್ಗೆಯಿಂದಲೂ ಬಿಟ್ಟು ಬಿಡದೆ ಸುರಿಯುತಿರುವ ಮಳೆಯು ರವಿವಾರವು ಮುಂದುವರಿದ ಪರಿಣಾಮ ನಾರಾಯಣಪುರ ಗ್ರಾಪಂ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ನಾರಾಯಣಪುರ, ದೇವರಗಡ್ಡಿ, ಮೇಲಿನಗಡ್ಡಿ, ಹನುಮನಗರ, ನಾರಾಯಣಪುರ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ, ಗೋಡೆಗಳು ಕುಸಿದಿದ್ದು, ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ತಗ್ಗುಪ್ರದೇಶದಲ್ಲಿನ ಕೆಲ ಮನೆಗಳಿಗೆ ನೀರು ನುಗ್ಗಿ ಜನ ಸಂಕಷ್ಟ ಎದುರಿಸುವಂತಾಗಿದೆ. ಗ್ರಾಮ ಲೆಕ್ಕಿಗ ಅಪ್ಪಣ್ಣ ಮಳೆಯಿಂದ ಹಾನಿಗೊಳಾದ ಮನೆಗಳಿಗೆ ಭೇಟಿ ನೀಡಿ ವೀಕ್ಷಿಸಿ, ಈ ಕುರಿತು ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮಳೆ ಅವಾಂತರದಿಂದ ಕುಸಿದ ಮನೆಗಳು ಮತ್ತು ಬೆಳೆ ಹಾನಿ ಕುರಿತು ಅಧಿಕಾರಿಗಳು ಸಮೀಕ್ಷೆ ಬಾಧಿತರಿಗೆ ಪರಿಹಾರ ವಿತರಿಸಬೇಕೆಂದು ಗ್ರಾಪಂ ಮಾಜಿ ಅಧ್ಯಕ್ಷ ಶಿವಪ್ಪ ಬಿರಾದಾರ ಒತ್ತಾಯಿಸಿದ್ದಾರೆ.

 

ದಬದಭೆ ಫಾಲ್ಸ್‌ನಲ್ಲಿ ಜನವೋ ಜನ.. :

ಶಹಾಪುರ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಸಗರಾದ್ರಿ ಬೆಟ್ಟದಲ್ಲಿರುವ ದಬದಭೆ ಫಾಲ್ಸ್‌ ಮೈದುಂಬಿ ಹರಿಯುತ್ತಿದ್ದು, ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಜನತೆಗೆ ಜಲಾಪತದಲ್ಲಿ ಮಿಂದೆದ್ದು ಸೃಷ್ಟಿ ವೈಭವ ಕಣ್ತುಂಬಿಕೊಳ್ಳುತ್ತಿದ್ದಾರೆ. ಸಿದ್ಧಲಿಂಗೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯ ಬಲಗಡೆ ಕಲ್ಲುಬಂಡೆಗಳ ಮಧ್ಯೆ ಝುಳು ಝುಳು ನಾದದೊಂದಿಗೆ ಬಿಳಿನೊರೆ ಹಾಲಿನಂತೆ ನೀರು ಧುಮ್ಮಿಕ್ಕುತ್ತಿದೆ. ದಬದಬಾ ಅಂಥ ನೀರು ಬೀಳುವ ಶಬ್ಧ ಬರುತ್ತಿರುವುದರಿದಲೋ ಏನೋ ಇದಕ್ಕೆ ದಬೆದಭೆ ಫಾಲ್ಸ್‌ ಅಂತಲೇ ಕರೆಯುತ್ತಾರೆ. ಜೋರಾಗಿ ಮಳೆ ಬಂದರೆ ದಬದಭೆ ಫಾಲ್ಸ್‌ ಮೈದುಂಬಿ ಹರಿಯುತ್ತ ಜನರನ್ನು ತನ್ನತ್ತ ಸೆಳೆಯುತ್ತಿದೆ. ಹೀಗಾಗಿ ರವಿವಾರ ಸಾವಿರಾರು ಜನ ಫಾಲ್ಸ್ ಗೆ ಭೇಟಿ ನೀಡಿ ನೀರಲ್ಲಿ ಮಿಂದೆದ್ದು ಸಂಭ್ರಮಿಸುತ್ತಿರುವುದು ಕಂಡುಬಂತು.

ನಗರದ ಜನತೆ ಮಕ್ಕಳು, ಕುಟುಂಬ ಸಮೇತ ರವಿವಾರ ಸಿದ್ಧಲಿಂಗೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಕೆಲಕಾಲ ಮೋಜು ಮಸ್ತಿಯಲ್ಲಿ ಸಮಯ ಕಳೆದರು. ಸಂಜೆಯಾದರೂ ಜನ ಸೇರುತ್ತಲೇ ಇರುವುದು ಕಂಡು ಬಂದಿತು. ಕೋವಿಡ್ ದಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಇದೆ. ಮನೆಯಲ್ಲೂ ಕೊರೊನಾ ಭಯದಿಂದ ಕಳೆದ ಆರೇಳು ತಿಂಗಳಿಂದ ಎಲ್ಲೂ ಹೋಗಿಲ್ಲ. ಹೀಗಾಗಿ ಸ್ಥಳೀಯವಾಗಿ ಈ ಫಾಲ್ಸ್‌ ಮಳೆಗಾಲದಲ್ಲಿ ಕೈ ಬೀಸಿ ಕರೆಯುತ್ತದೆ. ಮಕ್ಕಳ ಒತ್ತಾಯಕ್ಕೆ ಬಂದಿದ್ದೇವೆ. ಹಚ್ಚ ಹಸಿರಿನ ಮಧ್ಯೆ ಇರುವ ಫಾಲ್ಸ್‌ ನೋಡಿ ಮಕ್ಕಳುಖುಷಿಯಾಗಿ ಆಟವಾಡುವುದನ್ನು ಕಂಡು ಸಂತೋಷವಾಗಿದೆ ಎಂದು ಶಿಕ್ಷಕಿ ಮೇಘಾ ದೇಗನಾಳ ತಿಳಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.