ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ

ಕೊಡೇಕಲ್‌ ಗ್ರಾಮದ ಹೊರ ವಲಯದಲ್ಲಿ ಜಾಗ ಗುರುತು

Team Udayavani, Feb 14, 2020, 3:17 PM IST

14-February-18

ನಾರಾಯಣಪುರ: ಸ್ವಚ್ಛ ಭಾರತ ಮಿಷನ್‌ ಅಡಿ ಕೊಡೇಕಲ್‌ ಹೋಬಳಿ ವ್ಯಾಪ್ತಿಯ ಆರು ಗ್ರಾಪಂಗಳ ಪ್ರತಿಯೊಂದು ಮನೆಯಿಂದ ಒಣ ಕಸ ಮತ್ತು ಹಸಿ ಕಸ ಸಂಗ್ರಹಿಸಿ ಅದನ್ನು ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿರ್ವಹಣೆ ಮಾಡುವ ಉದ್ದೇಶದಿಂದ ಕೊಡೇಕಲ್‌ ಗ್ರಾಮದಲ್ಲಿ ಘಟಕವೊಂದನ್ನು ಸ್ಥಾಪಿಸಲಾಗುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಹೇಳಿದರು.

ಕೊಡೇಕಲ್‌ ಗ್ರಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ನಿರ್ವಹಣೆ ಕುರಿತು ಕೊಡೇಕಲ್‌ ವಲಯದ ಗ್ರಾಪಂ ಅಧ್ಯಕ್ಷರು ಮತ್ತು ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಚ್ಛ ಭಾರತ ಮಿಷನ್‌ ಪರಿಕಲ್ಪನೆಯಿಂದ ಗ್ರಾಮಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಒಂದೆಡೆ ಸಂಗ್ರಹಿಸಿ ವಿಲೇವಾರಿ ಮಾಡುವುದು ಮತ್ತು ಸಂಸ್ಕರಿಸಿ ಬೇರೆಡೆ ಸಾಗಿಸುವ ಉದ್ದೇಶದಿಂದ ಕೊಡೇಕಲ್‌ ಗ್ರಾಮದ ಹೊರ ವಲಯದಲ್ಲಿ ಘನತ್ಯಾಜ್ಯ ಸಂಗ್ರಹ ನಿರ್ವಹಣೆ ಘಟಕವೊಂದನ್ನು ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ.

6 ಗ್ರಾಪಂಗಳ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಎಲ್ಲ ಮನೆಯಿಂದ ಒಣ ಮತ್ತು ಹಸಿತ್ಯಾಜ್ಯ ಸಂಗ್ರಹಿಸಿ ಅದನ್ನು ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸಾಗಿಸುವ ಮೂಲಕ ಗ್ರಾಮಗಳ ನೈರ್ಮಲ್ಯ ಕಾಪಾಡುವ ಉದ್ದೇಶ ಹೊಂದಲಾಗಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅವಶ್ಯವಿದೆ ಎಂದು ಹೇಳಿದರು.

ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕದ ರಾಜ್ಯ ಸಮಾಲೋಚಕ ಮಂಜುನಾಥ ಪಿ.ಎ. ಮಾತನಾಡಿ, ರಾಜ್ಯದ 6022 ಗ್ರಾಪಂಗಳಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸುವ ಉದ್ದೇಶ ಇದೆ. ಒಂದು ಗ್ರಾಪಂಗೆ 20 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಘಟಕದಲ್ಲಿ ಸಂಗ್ರಹವಾಗುವ ತ್ಯಾಜ್ಯದಲ್ಲಿನ ಲೋಹ, ಬಟ್ಟೆ, ಬಾಟಲಿ, ಪ್ಲಾಸ್ಟಿಕ್‌ ಮತ್ತು ಪೇಪರ್‌ ಇತ್ಯಾದಿಗಳನ್ನು ವಿಂಗಡಿಸಿ ಸಂಸ್ಕರಿಸಿ ವೆಂಡರಗಳ ಮೂಲಕ ಮಾರಾಟ ಮಾಡಲಾಗುವುದು. ಇದರಿಂದ ಗ್ರಾಮಗಳಲ್ಲಿ ತಲೆದೋರುವ ತ್ಯಾಜ್ಯ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದು ಹೇಳಿದದರು.

ರಾಜ್ಯ ಸಮಾಲೋಚಕ ವಿವೇಕಾನಂದ ಮತ್ತು ಯಾದಗಿರಿ ಜಿಪಂ ಸಮಾಲೋಚಕಿ ಪಲ್ಲವಿ ಮಾತನಾಡಿದರು. ಸಭೆಯಲ್ಲಿದ್ದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಅಭಿವೃದ್ಧಿ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಯಿತು. ತಾಪಂ ಸದಸ್ಯ ಮೋಹನ ಪಾಟೀಲ, ಗ್ರಾಪಂ ಅಧ್ಯಕ್ಷರಾದ ಅಯ್ಯಮ್ಮ ಮ್ಯಾಗೇರಿ, ಧೀರಪ್ಪ ರಾಠೊಡ, ಬಾಲನಗೌಡ ಪೊಲೀಸ್‌ಪಾಟೀಲ, ಹುಲಿಗೆಪ್ಪ ಎಮ್ಮೇರ, ಉಪಾಧ್ಯಕ್ಷೆ ನಿಂಬೆಮ್ಮ ಹಾವೇರಿ, ಸಂಯೋಜಕ ಸಂಗಮೇಶ, ಜಿಲ್ಲಾ ಸಂಯೋಜಕ ವೆಂಕಟೇಶ ಪವಾರ, ತಾಪಂ ಸಹಾಯಕ ನಿರ್ದೇಶಕ ಶರಣಗೌಡ ಉಳ್ಳೇಸೂಗೂರ, ವ್ಯವಸ್ಥಾಪಕ ಮಲ್ಲಿಕಾರ್ಜುನ ಕೋರಿ, ಪಿಡಿಒಗಳಾದ ಸಂಗಣ್ಣ ನಾಗೆಬೇನಾಳ, ಶರಣಬಸವ ಬಿರಾದಾರ, ಮೋಹನ ಹುಲ್ಲೂರ, ಹುಸ್ಮಾನ್‌ ಅಲಿ, ಸಂಗಣ್ಣ ಕರಬಸಪ್ನವರ, ಲಕ್ಷ್ಮಣ ನಾಯಕ, ಬಸವಂತಭಟ್‌ ಜೋಷಿ, ಆಲಿಂಪಾಶಾ ಸಯ್ಯದ್‌, ವಿಶ್ವನಾಥ ಬಾನಸಿ, ಹೊಳೆಪ್ಪ ಮ್ಯಾಗೇರಿ, ನಾಗರಾಜ ದೊಡಮನಿ ಇದ್ದರು. ರವಿ ಅಡ್ಡಿ ನಿರೂಪಿಸಿದರು. ಚನ್ನಬಸವ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.